ಕಾವಡಿ ಶ್ರೀವಾಣಿ ಯಕ್ಷಗಾನ ಕಲಾಮಂಡಳಿಯ ಉದ್ಘಾಟನೆಯನ್ನು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಉದಯ ಚಂದ್ರ ಶೆಟ್ಟಿಯವರು ಇತ್ತೀಚಿಗೆ ನೆರವೇರಿಸಿದರು. ಈ ಸಂಧರ್ಭದಲ್ಲಿ ಬಳ್ಳಾರಿಯ ಉದ್ಯಮಿ, ಸಮಾಜಸೇವಕ ರೇಣುಕಾ ಬೇಕರಿ ಮಾಲೀಕ ವಸಂತ ಶೆಟ್ಟಿ, ಕಲಾ ಮಂಡಳಿ ಅಧ್ಯಕ್ಷರು, ಪದಾಧಿಕಾರಿಗಳು ಉಪಸ್ಥಿತರಿದ್ದರು. ನಂತರ ಮಾತನಾಡಿದ ವಸಂತ ಶೆಟ್ಟಿಯವರು ಮಾತನಾಡಿ ಯಕ್ಷಗಾನ ಒಂದು ಅದ್ಭುತವಾದ ಕಲೆ, ಯಕ್ಷಗಾನವನ್ನು ಉಳಿಸಿ ಬೆಳೆಸೋಣ ಎಂದು ನೂತನ ಸಂಸ್ಥೆಗೆ ಶುಭ ಹಾರೈಸಿದರು.

Exit mobile version