ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ.

ಲೂಸ್ ಮಾದ ಖ್ಯಾತಿಯ ಯೋಗಿ ಅಭಿನಯದ, ವಿಜಯಪ್ರಸಾದ್‍ ನಿರ್ದೇಶನದ ‘ಸಿದ್ಲಿಂಗು 2’ ಚಿತ್ರವು ಫೆಬ್ರವರಿ 14ರಂದು ಬಿಡುಗಡೆಯಾಗುತ್ತಿದ್ದು, ಚಿತ್ರದ ಪ್ರೀ-ರಿಲೀಸ್‍ ಇವೆಂಟ್‍ ಭಾನುವಾರ ನಗರದಲ್ಲಿ ನಡೆಯಿತು.

ಕಾರ್ಯಕ್ರಮಕ್ಕೆ ಯೋಗಿ ಅವರ ಮಾವ, ನಟ ಮತ್ತು ನಿರ್ದೇಶಕ ‘ದುನಿಯಾ’ ವಿಜಯ್‍ ಬಂದು ಚಿತ್ರದ ‘ಚುರುಮುರಿ’ ಎಂಬ ಹಾಡನ್ನು ಬಿಡುಗಡೆ ಮಾಡಿದರು.

ಹಾಡಿಗೆ ಅರಸು ಆಂತಾರೆ ಸಾಹಿತ್ಯ ಬರೆದಿದ್ದು, ಗೀತ ಸಂಯೋಜನೆಯನ್ನು ಅನೂಪ್ ಸೀಲಿನ್ ಅವರು ನಿರ್ವಹಿಸಿದ್ದಾರೆ. ಚಿನ್ಮಯಿ ಶ್ರೀಪಾದ ಅವರ ಕಂಠಸಿರಿಯಲ್ಲಿ ಹಾಡು ಮೂಡಿಬಂದಿದೆ.

ಹಾಡು ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ನಟ ದುನಿಯಾ ವಿಜಯ್ ಅವರು, ನಾನು ಹೀರೋ ಆಗುವ ಮುನ್ನ ವಿಜಯಪ್ರಸಾದ್‍ ತಮ್ಮ ಧಾರಾವಾಹಿಗಳಲ್ಲಿ ಸಣ್ಣ ಪಾತ್ರಗಳನ್ನು ಕೊಟ್ಟು ಬೆಳೆಸಿದ್ದು. ಅವರೊಬ್ಬ ವಿದ್ಯಾವಂತ ನಿರ್ದೇಶಕ. ಇಡೀ ಕರ್ನಾಟಕದ ಮನೆಮನೆಯವರನ್ನು ‘ಸಿಲ್ಲಿ ಲಲ್ಲಿ’ ನೋಡುವಂತೆ ಮಾಡಿದರು. ಈಗ ಇಡೀ ಕುಟುಂಬ ನೋಡುವಂತಹ ಸಿನಿಮಾ ಮಾಡಿದ್ದಾರೆ. ಹೊಡಿ-ಬಡಿ ಸಿನಿಮಾಗಳ ಮಧ್ಯೆ ಒಳ್ಳೆಯ ಸಿನಿಮಾ ಬರುತ್ತಿದೆ ಎಂಬುದರ ಸೂಚನೆ ಇಲ್ಲಿದೆ. ಯೋಗಿಗೆ ಸಿನಿಮಾ ಮಾಡಿದ್ದಕ್ಕೆ ಧನ್ಯವಾದಗಳು. ಇದು ಇನ್ನೂ ಸಹ ಮುಂದುವರೆಯಲಿ. ಇನ್ನೊಂದು ಒಳ್ಳೆಯ ಕಥೆಯ ಮೂಲಕ ‘ಸಿದ್ಲಿಂಗು 3’ ಮಾಡಲಿ ಎಂಬುದು ನನ್ನಾಸೆ’ ಎಂದು ಹೇಳಿದರು.

ಇದೇ ವೇಳೆ ನಾನು ಯೋಗಿಯ ದೊಡ್ಡ ಅಭಿಮಾನಿ ಎಂದ ವಿಜಯ್‍ ಕುಮಾರ್, ಯಾವುದೇ ಪಾತ್ರವಿದ್ದರೂ ನಾನು ಮಾಡಬಲ್ಲೆ ಎಂದು ಧೈರ್ಯವಾಗಿ ನಿಲ್ಲುತ್ತಾನೆ. ಅವನ ಸಾಮರ್ಥ್ಯ ಬೇರೆ ಇದೆ. ಅವನಿಗೆ ಒಳ್ಳೆಯ ಕಥೆಗಳು ಸಿಕ್ಕಿ ಅವನು ಇನ್ನೂ ಅದ್ಭುತ ನಟನಾಗಿ ಹೊರಹೊಮ್ಮಬೇಕು ಎಂಬುದು ನನ್ನಾಸೆ. ಅದಕ್ಕೆ ಇನ್ನೂ ಸಮಯ ಬರಬೇಕೇನೋ? ಬರದಿದ್ದರೆ ನಾನು ಅವನ ಜೊತೆಗೆ ನಿಲ್ಲುತ್ತೇನೆ. ಯಾವತ್ತೂ ಅವನ ಕೈಬಿಡುವುದಿಲ್ಲ. ಅವನನ್ನು ನಿಲ್ಲಿಸುತ್ತೇನೆ ಎಂದು ತಿಳಿಸಿದರು.

Exit mobile version