ಮಡಿಕೇರಿ : ಭಾರತೀಯ ಕೃಷಿ ಅನುಸಂಧಾನ ಪರಿಷತ್, ನವದೆಹಲಿ ಹಾಗೂ ಅದರ ವಿವಿಧ ಅಂಗ ಸಂಸ್ಥೆಗಳ ಸಂಶೋಧನ ಕೇಂದ್ರಗಳು, ದೇಶದ ಕೃಷಿ ವಿಜ್ಞಾನ ಕೇಂದ್ರಗಳು, ಕೃಷಿ ಇಲಾಖೆ ಮತ್ತು ತೋಟಗಾರಿಕೆ ಇಲಾಖೆ ಮತ್ತು ಇತರ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಈ ಮುಂಗಾರು ಹಂಗಾಮಿನಲ್ಲಿ ಕೃಷಿಕರಿಗೆ ತಾಂತ್ರಿಕತೆಗಳ ಲಭ್ಯವಾಗುವಂತೆ ವಿಕಸಿತ ಕೃಷಿ ಸಂಕಲ್ಪ ಅಭಿಯಾನವನ್ನು ಮೇ 29 ರಿಂದ ಜೂನ್ 12 ರವರೆಗೆ ಹಮ್ಮಿಕೊಳ್ಳಲಾಗಿದೆ. ಮೇ, 29 ರಂದು ಬೆಳಗ್ಗೆ 10 ಗಂಟೆಗೆ ಗೋಣಿಕೊಪ್ಪಲು ಮತ್ತು ವಿರಾಜಪೇಟೆಯಲ್ಲಿ ನಡೆಯಲಿದೆ.


