ಪೊನ್ನಂಪೇಟೆ ಸಿಇಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ವಿದ್ಯಾರ್ಥಿನಿಯ ಆತ್ಮಹತ್ಯೆ

ಪೊನ್ನಂಪೇಟೆ ಹಳ್ಳಿಗಟ್ಟು ಸಿಇ.ಟಿ ಕಾಲೇಜಿನ ಹಾಸ್ಟೆಲ್ ನಲ್ಲಿ ರಾಯಚೂರು ಮೂಲದ ಪ್ರಥಮ ವರ್ಷದ ಎ.ಐ.ಎಂ.ಎಲ್ ವ್ಯಾಸಂಗ ಮಾಡುತ್ತಿರುವ ತೇಜಸ್ವಿನಿ(19) ಎಂಬ ವಿದ್ಯಾರ್ಥಿನಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಪೊನ್ನ ಪೇಟೆ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಮುಂದಿನ ಕ್ರಮ ಕೈಗೊಂಡಿದ್ದಾರೆ. ಈಕೆ ರಾಯಚೂರಿನ ಮಹಾಂತಪ್ಪ ಎಂಬುವರ ಏಕೈಕ ಪುತ್ರಿಯಾಗಿದ್ದಾಳೆ. ಮೂರು ದಿನಗಳ ಹಿಂದೆ ತನ್ನ ಸ್ನೇಹಿತರೊಂದಿಗೆ ಹುಟ್ಟುಹಬ್ಬ ಆಚರಿಸಿಕೊಂಡ ಆಕೆ, ಅಂದಿನ ಕಾರ್ಯಕ್ರಮಕ್ಕೆ ಬಾರದವರಿಗೆ ಇಂದು ಕೂಡ ಹುಟ್ಟು ಹಬ್ಬದ ನಿಮಿತ, ಸ್ನೇಹಿತರಿಗೆ ಸಿಹಿ ಹಂಚಿದಳು. ತರಗತಿಗೆ ಆಗಮಿಸಿದ ನಂತರ ಸಂಜೆ 4 ಗಂಟೆಗೆ ಹಾಸ್ಟೆಲ್ ಸೇರಿಕೊಂಡಿದ್ದಾಳೆ ಎಂದು ಹೇಳಲಾಗಿದೆ.
4.30 ಗಂಟೆಗೆ ಆಕೆಯ ಸಹಪಾಠಿ ಕೊಠಡಿಗೆ ಹೋದಾಗ ಬಾಗಿಲು ಒಳಗಿನಿಂದ ಹಾಕಿಕೊಂಡಿದ್ದಳು ಎಷ್ಟೇ ಕೂಗಿದರು ಬಾರದಿದ್ದಾಗ ಹಾಸ್ಟೆಲ್ ಮೇಲ್ವಿಚಾರಕರಿಗೆ ವಿಷಯ ತಿಳಿಸಿ ಬಾಗಿಲು ತೆಗೆದು ನೋಡಿದಾಗ ಆತ್ಮಹತ್ಯೆ ಮಾಡಿಕೊಂಡಿರುವುದು ಗೋಚರಿಸಿತು. ನಂತರ ಪರಿಶೀಲಿಸಿದಾಗ ಡೆತ್ ನೋಟ್ ಪತ್ತೆಯಾಗಿ ಆರು ಬ್ಯಾಕ್ ಲಾಗ್ ಇರುವ ಕಾರಣ, ತನಗೆ ಮುಂದೆ ಓದಲು ಇಷ್ಟವಿಲ್ಲದ ಕಾರಣ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ ಎಂದು ಬರೆದಿದ್ದಳು.

Exit mobile version