ಮಡಿಕೇರಿ : ಕರಿಕೆ ಗ್ರಾಮದ ಕರಿಂಬಳಪು ಹೊಳೆಯ ತೂಗು ಸೇತುವೆ ಮುರಿದು ಹೋಗಿದ್ದು, ಜನಸಾಮಾನ್ಯರು ಸಂಪರ್ಕ ಸೇತುವೆ ಇಲ್ಲದೆ ಸಂಕಷ್ಟ ಎದುರಿಸುತ್ತಿದ್ದಾರೆ . ಮಾಹಿತಿ ಇದ್ದರೂ ಇಲ್ಲಿಯ ತನಕ ಜನಪ್ರತಿನಿಧಿಗಳಾಗಲಿ, ಅಧಿಕಾರಿಗಳಾಗಲಿ ಸ್ಪಂದಿಸಲಿಲ್ಲ ಎಂದು ಆರೋಪಿಸಿರುವ ಸ್ಥಳೀಯ ಗ್ರಾಮಸ್ಥರು ತಮ್ಮ ಸ್ವಂತ ಖರ್ಚಿನಲ್ಲೇ ಸೇತುವೆಯನ್ನು ನಿರ್ಮಿಸಿದ್ದಾರೆ. ಇನ್ನೇನೂ ಕೆಲವೇ ದಿನಗಳಲ್ಲಿ ಶಾಲೆ ಆರಂಭಗೊಳ್ಳಲಿದ್ದು, ವಿದ್ಯಾರ್ಥಿಗಳಿಗೆ ಅನುಕೂಲವಾಗಲೆಂದು ತಾತ್ಕಾಲಿಕ ತೂಗು ಸೇತುವೆಯನ್ನು ನಿರ್ಮಿಸಿದ್ದು, ಇನ್ನಾದರೂ ಇತ್ತ ಸಂಬಂಧಪಟ್ಟ ಅಧಿಕಾರಿಗಳು ಗಮನಹರಿಸಿ ಸಸ್ವತವಾಗಿ ವಾಹನಗಳು ಓಡಾಡುವಂತಹ, ಸಾರ್ವಜನಿಕರಿಗೆ ಅನುಕೂಲವಾಗುವಂತಹ ಸೇತುವೆ ನಿರ್ಮಿಸಿಕೊಡಬೇಕೆಂಬುದು ಇಲ್ಲಿನ ನಾಗರಿಕರ ಆಗ್ರಹವಾಗಿದೆ.

Exit mobile version