#ಸ್ವಾತಂತ್ರ್ಯ_ದಿನಾಚರಣೆ_ಕಾರ್ಯಕ್ರಮದಲ್ಲಿ_ವಿಶೇಷ_ರಾಯಭಾರಿಯಗಿ_ಪಾಲ್ಗೊಳಲು_ಮೂರ್ನಾಡುವಿನ_ಯಶಸ್_ರೈ_ಆಯ್ಕೆ.

ಈ ಬಾರಿ ದೆಹಲಿಯಲ್ಲಿ ನಡೆಯುವ ಸ್ವಾತಂತ್ರೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲೆಯ ಮೂರ್ನಾಡು ಕೊಡಂಬೂರುವಿನ ಯಶಸ್ ರೈ ಕರ್ನಾಟಕವನ್ನು ಪ್ರತಿನಿಧಿಸಲಿದ್ದಾರೆ. ದೇಶದ ಪ್ರತಿ ರಾಜ್ಯದಿಂದ 15 ವರ್ಷ ದಿಂದ 28 ವರ್ಷ ವಯೋಮಿತಿವರೆಗಿನ ಈ ಅವಕಾಶದಲ್ಲಿ ಕರ್ನಾಟಕ ರಾಜ್ಯದಿಂದ ಈ ಬಾರಿ ಕೊಡಗು ಹಾಗೂ ದಕ್ಷಿಣ ಕನ್ನಡ ಜಿಲ್ಲೆ ಈ ಸ್ಥಾನವನ್ನು ಪಡೆದುಕೊಂಡಿದೆ. ನೆಹರು ಯುವಕೇಂದ್ರದ ಮೈ ಭಾರತ್ ಪೋರ್ಟಲ್ ಮೂಲಕ ನೋಂದಣಿಗೊಂಡ ಯುವಕರಲ್ಲಿ ಇವರು ಆಯ್ಕೆಗೊಂಡಿರುತ್ತಾರೆ. ಈ ಬಾರಿಯ ಸ್ವಾತಂತ್ರ್ಯ ದಿನಾಚರಣೆಯ ಕಾರ್ಯಕ್ರಮದಲ್ಲಿ ವಿಶೇಷ ರಾಯಭಾರಿಗಳಾಗಿ ಕರ್ನಾಟಕದಿಂದ ಪಾಲ್ಗೊಳ್ಳಲಿದ್ದಾರೆ.

Exit mobile version