Close Menu
Kodagu News
    ಹೊಸ ಸುದ್ದಿ

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ
    • ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ
    • ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ
    • ರಕ್ಷಣೆಗೆ ಇಳಿದ ನೆರೆಮನೆಯಾತನಿಗೂ ತಪ್ಪದ ಸಾವಿನ ಕೂಪ.
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ಪ್ರಾದೇಶಿಕ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ
    • ICSE ಅಂತರ ಶಾಲಾ ಕಾಲ್ಚೆಂಡು ಪಂದ್ಯಾವಳಿ: ವಲಯ ಮಟ್ಟಕ್ಕೆ ಕಾಪ್ಸ್ ಶಾಲೆ ಆಯ್ಕೆ*
    • ಗ್ರಾಮೀಣ ಕ್ರೀಡೆಗಳು ನಮ್ಮ ಸಂಸ್ಕೃತಿಯ ಪ್ರತೀಕ: ಶಾಸಕ ಪೊನ್ನಣ್ಣ
    • ಕಾಫಿ ತೋಟದಲ್ಲಿ ಕಾಡಾನೆ ದಾಳಿ: ಕಾರ್ಮಿಕನಿಗೆ ಗಂಭೀರ ಗಾಯ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ
    Uncategorized

    ಸೋಮವಾರಪೇಟೆ ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಭೇಟಿ

    ಮಡಿಕೇರಿ : ಸೋಮವಾರಪೇಟೆ ತಾಲ್ಲೂಕು ತಹಶೀಲ್ದಾರರ ಕಚೇರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಗುರುವಾರ ಭೇಟಿ ನೀಡಿ ಭೂಸುರಕ್ಷತೆ ಮತ್ತು ಕಂದಾಯ ದಾಖಲೆ ಡಿಜಿಟಲೀಕರಣ ಪ್ರಕ್ರಿಯೆ ಸಂಬಂಧ ಮಾಹಿತಿ ಪಡೆದರು.

    ಭೂ ಸುರಕ್ಷತಾ ಯೋಜನೆಯಡಿ ಸಾರ್ವಜನಿಕರಿಗೆ ಕಂದಾಯ ದಾಖಲೆಗಳನ್ನು ಡಿಜಿಟಲ್ ರೂಪದಲ್ಲಿ ವಿತರಿಸುವ ಹಿನ್ನೆಲೆ ಅಗತ್ಯ ಕ್ರಮವಹಿಸುವಂತೆ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

    ಸರ್ಕಾರ ಕಂದಾಯ ಇಲಾಖೆಯಲ್ಲಿ ಭೂದಾಖಲೆಗಳಿಗೆ ಸಂಬಂಧಿಸಿದಂತೆ ಸಾಕಷ್ಟು ಸುಧಾರಣೆ ಮತ್ತು ಬದಲಾವಣೆ ಜಾರಿಗೊಳಿಸಿದ್ದು, ಅವುಗಳನ್ನು ಅನುಷ್ಠಾನಗೊಳಿಸಬೇಕು ಎಂದು ಸೂಚಿಸಿದರು.

    ಸಕಾಲ ಯೋಜನೆ, ಪಿಂಚಣಿ ಯೋಜನೆ ಸಂಬಂಧಿಸಿದಂತೆ ಇದೇ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಅವರು ಮಾಹಿತಿ ಪಡೆದರು. ಈ ಸಂದರ್ಭದಲ್ಲಿ ತಹಶೀಲ್ದಾರ್ ಕೃಷ್ಣಮೂರ್ತಿ, ಉಪ ತಹಶೀಲ್ದಾರರು, ಕಂದಾಯ ನಿರೀಕ್ಷಕರು ಇತರರು ಇದ್ದರು.

    ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧಿಸಿದಂತೆ ಅಧಿಕಾರಿಗಳ ಜೊತೆ ಸಭೆ: ಸೋಮವಾರಪೇಟೆ ತಾಲ್ಲೂಕಿಗೆ ಸಂಬಂಧಿಸಿದಂತೆ ಪ್ರಾಕೃತಿಕ ವಿಕೋಪ ನಿರ್ವಹಣೆ ಸಂಬಂಧ ತಾಲ್ಲೂಕು ಮಟ್ಟದ ಅಧಿಕಾರಿಗಳ ಜೊತೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇದೇ ಸಂದರ್ಭದಲ್ಲಿ ಸಭೆ ನಡೆಸಿದರು.

    ಈ ಬಾರಿ ಮುಂಗಾರು ಬೇಗ ಆರಂಭವಾಗಿದ್ದು, ಮೇ ಮತ್ತು ಜೂನ್ ತಿಂಗಳಲ್ಲಿಯೇ ಹೆಚ್ಚಿನ ಮಳೆಯಾಗಿದೆ. ಆದ್ದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇರುವುದರಿಂದ ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸುವಂತೆ ನಿರ್ದೇಶನ ನೀಡಿದರು.

    ಅಂಗನವಾಡಿ, ಶಾಲಾ ಮತ್ತು ಕಾಲೇಜು ಕಟ್ಟಡಗಳ ಸ್ಥಿತಿಗತಿ ಬಗ್ಗೆ ಕೂಡಲೇ ವರದಿ ನೀಡಬೇಕು. ಸುಸ್ಥಿತಿಯಲ್ಲಿರದ ಶಾಲಾ, ಕಾಲೇಜು, ಅಂಗನವಾಡಿ ಕಟ್ಟಡ ಸಂಬಂಧ ಅಂದಾಜುಪಟ್ಟಿ ಸಲ್ಲಿಸುವಂತೆ ಇದೇ ಸಂದರ್ಭದಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.

    ಪ್ರಾಕೃತಿಕ ವಿಕೋಪ ಸಂಬಂಧಿಸಿದಂತೆ ಕಾಲ ಕಾಲಕ್ಕೆ ಹವಾಮಾನ ಇಲಾಖೆ ಹೊರಡಿಸುವ ಮಾಹಿತಿ ಹಂಚಿಕೊಳ್ಳಬೇಕು. ಅತೀವೃಷ್ಟಿಯಿಂದ ಮನೆ, ಮತ್ತಿತರ ಹಾನಿ ಸಂಭವಿಸಿದಲ್ಲಿ ಕೂಡಲೇ ಪರಿಹಾರ ವಿತರಿಸಬೇಕು. ಯಾವುದೇ ಕಾರಣಕ್ಕೂ ವಿಳಂಬ ಮಾಡಬಾರದು ಎಂದು ಕಟ್ಟುನಿಟ್ಟಿನ ಸೂಚನೆ ನೀಡಿದರು.

    ತಹಶೀಲ್ದಾರರು ಮತ್ತು ತಾ.ಪಂ ಇಒಗಳ ಜೊತೆ ತಾಲ್ಲೂಕು ಮಟ್ಟದಲ್ಲಿ ಎಲ್ಲಾ ಹಂತದ ಅಧಿಕಾರಿಗಳು ಸಮನ್ವಯತೆಯಿಂದ ಕಾರ್ಯನಿರ್ವಹಿಸಬೇಕು. ಸಾರ್ವಜನಿಕರ ಅಹವಾಲಿಗೆ ಸ್ಪಂದಿಸುವಂತೆ ನಿರ್ದೇಶನ ನೀಡಿದರು.

    ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಜಿ.ಪಂ.ಉಪ ಕಾರ್ಯದರ್ಶಿ ಅಬ್ದುಲ್ ನಬಿ, ತಹಶೀಲ್ದಾರ್ ಕೃಷ್ಣಮೂರ್ತಿ, ತಾ.ಪಂ.ಇಒ ಪರಮೇಶ ಇತರರು ಇದ್ದರು.

    Previous Articleಅನ್ನ ಭಾಗ್ಯಕ್ಕೆ ಕನ್ನ ಹಾಕುವವರ ವಿರುದ್ಧ ಕ್ರಮ
    Next Article ಜೂ.21 ರಂದು ಅಂಚೆ ವಹಿವಾಟು ಸ್ಥಗಿತ

    Related Posts

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಂತರ್ ಗೌಡರಿಗೂ ನಿಗಮ ಮಂಡಳಿ ಸ್ಥಾನ ನೀಡಿ: ಕಾಂಗ್ರೆಸ್ ಕಾರ್ಯಕರ್ತರ ಒತ್ತಾಯ

    August 12, 2026

    ಕೊಡಗು ಸೇರಿದಂತೆ 6 ಜಿಲ್ಲೆಗಳ ಗ್ಯಾರಂಟಿ ಯೋಜನೆಗಳ ಉಸ್ತುವಾರಿ ಮೆಹರೋಜ್ ಖಾನ್‌ಗೆ

    August 12, 2026

    ಮಹಿಳಾ ವಿಶ್ರಾಂತಿ ಕೊಠಡಿಯಲ್ಲಿ ಮದ್ಯದ ವಾಸನೆ, ಬಟ್ಟೆಗಳು ಪತ್ತೆ: ಕುಶಾಲನಗರ ಕೆಎಸ್‌ಆರ್‌ಟಿಸಿ ಅವ್ಯವಸ್ಥೆಗೆ ಕರವೇ ಆಕ್ರೋಶ

    August 12, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.