Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»Uncategorized»ಯೋಗ ದಿನಾಚರಣೆ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಡಾ.ಮಂತರ್ ಗೌಡ 
    Uncategorized

    ಯೋಗ ದಿನಾಚರಣೆ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿ: ಡಾ.ಮಂತರ್ ಗೌಡ 

    Updated:June 21, 2025

    ಮಡಿಕೇರಿ : ದೈಹಿಕ ಮತ್ತು ಮಾನಸಿಕ ಆರೋಗ್ಯಕ್ಕೆ ಯೋಗ ಸಹಕಾರಿಯಾಗಿದೆ ಎಂದು ಶಾಸಕರಾದ ಡಾ.ಮಂತರ್ ಗೌಡ ಅವರು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ಆಯುಷ್ ಇಲಾಖೆ ಇವರ ಸಹಯೋಗದೊಂದಿಗೆ ‘ಒಂದು ಭೂಮಿ, ಒಂದು ಆರೋಗ್ಯಕ್ಕಾಗಿ ಯೋಗ’ ಎಂಬ ವಿಷಯದಡಿ ನಗರದ ಕೆಳಗಿನ ಗೌಡ ಸಮಾಜದಲ್ಲಿ ಶನಿವಾರ ನಡೆದ ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಸಭಾ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಭಾರತೀಯ ಮೂಲದ ಯೋಗ ವಿಶ್ವದಾದ್ಯಂತ ಪಸರಿಸಿದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಆರೋಗ್ಯ, ಆಯಸ್ಸು ಹೆಚ್ಚಾಗಲಿದೆ. ಇದರಿಂದ ಕ್ರಿಯಾಶೀಲತೆ ಮತ್ತು ಚಲನಶೀಲತೆಯಿಂದ ಬದುಕು ನಡೆಸಲು ಸಹಕಾರಿಯಾಗಲಿದೆ. ಜೊತೆಗೆ ಮಾನಸಿಕವಾಗಿಯೂ ಸಹ ಸದೃಢರಾಗಿರಬಹುದು ಎಂದು ಡಾ.ಮಂತರ್ ಗೌಡ ಅವರು ಅಭಿಪ್ರಾಯಪಟ್ಟರು.

    ಯೋಗವು ಇಡೀ ವಿಶ್ವ ಮೆಚ್ಚುಗೆ ವ್ಯಕ್ತಪಡಿಸಿದೆ. ಇತ್ತೀಚಿನ ದಿನಗಳಲ್ಲಿ ರಕ್ತದೊತ್ತಡ, ಮಧುಮೇಹಿಗಳ ಸಂಖ್ಯೆ ಹೆಚ್ಚಾಗುತ್ತಿದ್ದು, ಇದನ್ನು ನಿಯಂತ್ರಿಸಲು ದಿನನಿತ್ಯ ಅರ್ಧಗಂಟೆಯಾದರೂ ವ್ಯಾಯಾಮ ಮಾಡುವುದರಿಂದ ಉತ್ತಮ ಆರೋಗ್ಯ ಕಾಪಾಡಿಕೊಳ್ಳಬಹುದು ಎಂದು ಅವರು ಹೇಳಿದರು.

    ಜಿಲ್ಲಾ ಆಯುಷ್ ಅಧಿಕಾರಿ ಡಾ.ಶೈಲಜಾ ಅವರು ಮಾತನಾಡಿ ಯೋಗ/ ವ್ಯಾಯಾಮ ಮಾಡುವುದರಿಂದ ಪ್ರತಿನಿತ್ಯ ಚಟುವಟಿಕೆಯಿಂದ ಇರಲು ಸಾಧ್ಯ. ಆ ನಿಟ್ಟಿನಲ್ಲಿ ಉತ್ತಮ ಆರೋಗ್ಯಕ್ಕೆ ಯೋಗ ಮತ್ತು ವ್ಯಾಯಾಮ ಮಾಡುವುದು ಅತ್ಯಗತ್ಯ ಎಂದರು.

    ಅಂತರರಾಷ್ಟ್ರೀಯ 11 ನೇ ಯೋಗ ದಿನಾಚರಣೆಗೆ ಸರ್ಕಾರದ ವಿವಿಧ ಇಲಾಖೆಯ ಅಧಿಕಾರಿಗಳು, ಸಿಬ್ಬಂದಿಗಳು, ಸರ್ಕಾರೇತರ ಸಂಸ್ಥೆಯ ಪ್ರತಿನಿಧಿಗಳು ಹೀಗೆ ಎಲ್ಲರೂ ಜಿಲ್ಲಾಡಳಿತದ ಜೊತೆ ಕೈಜೋಡಿಸಿ ಯಶಸ್ಸುಗೊಳಿಸಿದ್ದಾರೆ ಎಂದು ತಿಳಿಸಿದರು.

    ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಮಾತನಾಡಿ ಅಂತರರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಹಲವು ದಿನಗಳಿಂದ ಯೋಗ ಪೂರ್ವಾಭ್ಯಾಸ ನಡೆಸಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ಹಮ್ಮಿಕೊಳ್ಳಲಾಗಿದೆ ಎಂದರು.

    ಯೋಗ ಶಿಕ್ಷಕರಾದ ಮಹೇಶ್ ಕುಮಾರ್ ಅವರು ಯೋಗಾಭ್ಯಾಸ ಶಿಕ್ಷಣ ನೀಡಿದರು. ಸೂರ್ಯ ನಮಸ್ಕಾರ, ವೃಕ್ಷಾಸನ, ಪಾದಹಸ್ತಾಸನ, ಉದ್ರ್ವಾಸನ, ತಾಡಾಸನ, ಅರ್ಧ ಮತ್ಸೇಂದ್ರಾಸನ, ಭುಜಂಗಾಸನ, ಪವನಮುಕ್ತಾಸನ, ಭದ್ರಾಸನ, ತ್ರಿಕೋನಾಸನ, ಉಷ್ಟ್ರಾಸನ, ವಜ್ರಾಸನ, ಶಲಭಾಸನ, ಶಶಾಂಕಾಸನ, ಮಂಡೂಕಾಸನ, ವಕ್ರಾಸನ, ಮಕರಾಸನ, ಸೇತುಬಂಧಾಸನ, ಉತ್ಥಾನ ಪಾದಾಸನ, ಅರ್ಧಹಲಾಸನ, ಶವಾಸನ, ಕಪಾಲಭಾತಿ, ಶೀತಲಿ ಪ್ರಾಣಾಯಾಮ, ಭ್ರಾಮರಿ ಪ್ರಾಣಾಯಾಮ, ಧ್ಯಾನ, ನಾಡಿಶೋಧ ಪ್ರಾಣಾಯಾಮ ಹೀಗೆ ಹಲವು ರೀತಿಯ ಯೋಗ ಮಾಡಲಾಯಿತು.

    ನಗರಸಭೆ ಉಪಾಧ್ಯಕ್ಷರಾದ ಮಹೇಶ್ ಜೈನಿ, ನಗರಸಭೆ ಸದಸ್ಯರು ಹಾಗೂ ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಹೆಚ್ಚುವರಿ ಜಿಲ್ಲಾಧಿಕಾರಿ ಆರ್.ಐಶ್ವರ್ಯ, ಉಪ ವಿಭಾಗಾಧಿಕಾರಿ ವಿನಾಯಕ ನರ್ವಡೆ, ಕ್ಷೇತ್ರ ಶಿಕ್ಷಣಾಧಿಕಾರಿ ದೊಡ್ಡೇಗೌಡ, ಕೊಡಗು ವೈದ್ಯಕೀಯ ವಿಜ್ಞಾನ ಸಂಸ್ಥೆಯ ಡಾ.ರಾಮಚಂದ್ರ ಕಾಮತ್, ವಿವಿಧ ಇಲಾಖೆ ಅಧಿಕಾರಿಗಳು ಪಾಲ್ಗೊಂಡಿದ್ದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕೊಡಗು ವೈದ್ಯಕೀಯ ಶಿಕ್ಷಣ, ಜಿಲ್ಲಾ ಪೊಲೀಸ್, ಯುವ ಸಬಲೀಕರಣ ಮತ್ತು ಕ್ರೀಡೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತೆ, ಸಮಾಜ ಕಲ್ಯಾಣ, ಪದವಿ ಪೂರ್ವ ಶಿಕ್ಷಣ, ಎನ್‍ಎಸ್‍ಎಸ್ ಮತ್ತು ಎನ್‍ಸಿಸಿ ಘಟಕ, ನೆಹರು ಯುವ ಕೇಂದ್ರ, ಕೊಡಗು ಯುವ ಒಕ್ಕೂಟ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಯೋಗ ಭಾರತಿ, ಪ್ರಣವ ಯೋಗ ಕೇಂದ್ರ, ಪತಂಜಲಿ ಯೋಗ ಶಿಕ್ಷಣ, ಆರ್ಟ್ ಆಪ್ ಲಿವಿಂಗ್, ಸ್ಕೌಟ್ಸ್ ಮತ್ತು ಗೈಡ್ಸ್, ನೀಮಾ ಸಂಸ್ಥೆ ಹೀಗೆ ಸರ್ಕಾರಿ ಮತ್ತು ಸರ್ಕಾರೇತರ ವಿವಿಧ ಸಂಸ್ಥೆಗಳ ಸಹಕಾರದಲ್ಲಿ ಅಂತರ ರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.

    ­

    Previous Articleಬ್ಯಾಂಕುಗಳು ಲಾಭಾಂಶದ ಜತೆಗೆ ಸಮಾಜ ಮುಖಿಯಾಗಿ ಕಾರ್ಯ ನಿರ್ವಹಿಸಿ : ಯದುವೀರ್ ಒಡೆಯರ್ ಸಲಹೆ 
    Next Article ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

    Related Posts

    ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ

    September 12, 2026

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.