Close Menu
Kodagu News
    ಹೊಸ ಸುದ್ದಿ

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಮಳೆ ಹಾನಿ ಪ್ರದೇಶಗಳಿಗೆ ಎನ್.ಎಸ್.ಭೋಸರಾಜು ಭೇಟಿ, ಪರಿಶೀಲನೆ
    ಆರೋಗ್ಯ

    ಮಳೆ ಹಾನಿ ಪ್ರದೇಶಗಳಿಗೆ ಎನ್.ಎಸ್.ಭೋಸರಾಜು ಭೇಟಿ, ಪರಿಶೀಲನೆ

    ಮಡಿಕೇರಿ ಜೂ.26(ಕರ್ನಾಟಕ ವಾರ್ತೆ):-ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ಶಾಸಕರಾದ ಡಾ.ಮಂತರ್ ಗೌಡ ಅವರು ಮಳೆ ಹಾನಿ ಪ್ರದೇಶಗಳಿಗೆ ಗುರುವಾರ ಭೇಟಿ ನೀಡಿ ವೀಕ್ಷಿಸಿದರು.
    ಕುಶಾಲನಗರದ ಸೇತುವೆಗೆ ತೆರಳಿ ಕಾವೇರಿ ನೀರಿನ ಹರಿವು ಪ್ರಮಾಣ ವೀಕ್ಷಿಸಿದರು. ಬಳಿಕ ಕುಶಾಲನಗರದ ಚಂದ್ರಶೇಖರ ಅವರ ಮನೆಹಾನಿ ಪರಿಶೀಲಿಸಿದರು.
    ಬಳಿಕ ಕಾವೇರಿ ನದಿ ನೀರು ಹರಿಯುವ ಕಣಿವೆ ಬಳಿಯ ತೂಗು ಸೇತುವೆ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವರು ಭೇಟಿ ನೀಡಿ ವೀಕ್ಷಿಸಿದರು. ನಂತರ ರಂಗಸಮುದ್ರ ಹತ್ತಿರ ಕುಸಿಯುತ್ತಿರುವ ಸೇತುವೆ ಪರಿಶೀಲಿಸಿದರು.
    ಬಳಿಕ ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು ಈ ಬಾರಿ ಮೇ ಅಂತ್ಯದಲ್ಲಿಯೇ ಮುಂಗಾರು ಆರಂಭವಾಗಿದ್ದು, ಹೆಚ್ಚಿನ ಮಳೆಯಿಂದ ಜಿಲ್ಲೆಯಲ್ಲಿ ಮನೆ, ಸೇತುವೆ, ರಸ್ತೆ ಸೇರಿದಂತೆ ಹಲವು ರೀತಿಯ ಪ್ರಾಕೃತಿಕ ವಿಕೋಪ ಸಂಭವಿಸಿದೆ ಎಂದರು.
    ಜಿಲ್ಲೆಯಲ್ಲಿ ಇನ್ನು ಎರಡು ತಿಂಗಳ ಕಾಲ ಹೆಚ್ಚಿನ ಮಳೆಯಾಗುವುದರಿಂದ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಪ್ರವಾಹ ಪೀಡಿತ ಪ್ರದೇಶಗಳಲ್ಲಿ ಮುನ್ನೆಚ್ಚರ ವಹಿಸಬೇಕು ಎಂದು ಸಚಿವರು ಮನವಿ ಮಾಡಿದರು.
    ಪ್ರಾಕೃತಿಕ ವಿಕೋಪ ನಿರ್ವಹಣೆಗೆ ಜಿಲ್ಲಾಧಿಕಾರಿ ಅವರ ಪಿಡಿ ಖಾತೆಯಲ್ಲಿ ಹೆಚ್ಚಿನ ಹಣವಿದ್ದು, ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಜಿಲ್ಲಾಡಳಿತ ಗಮನಹರಿಸಿದೆ ಎಂದು ತಿಳಿಸಿದರು.
    ಜಿಲ್ಲೆಯಲ್ಲಿ ಮೇ ಅಂತ್ಯದಿಂದ ಸುರಿದ ಧಾರಾಕಾರ ಮಳೆಗೆ ರಸ್ತೆ, ಸೇತುವೆ, ಮನೆಗಳ ಹಾನಿಯಾಗಿದೆ. ಸೇತುವೆ ನಿರ್ಮಾಣಕ್ಕೆ ಅಗತ್ಯ ಕ್ರಮವಹಿಸಲಾಗುವುದು. ಮನೆ ಹಾನಿ ಸಂಬಂಧ ಪರಿಹಾರ ವಿತರಿಸಲಾಗಿದೆ ಎಂದು ಮಾಹಿತಿ ನೀಡಿದರು. ಮಳೆ ನಿಂತ ನಂತರ ಶಾಶ್ವತ ಕಾಮಗಾರಿ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.
    ಕೊಡಗು ಜಿಲ್ಲೆಯಲ್ಲಿ ಮಳೆಯಿಂದ ಉಂಟಾದ ಹಾನಿ ಬಗ್ಗೆ ಶಾಸಕರ ಜೊತೆ ಚರ್ಚಿಸಿ ಮುಖ್ಯಮಂತ್ರಿ ಅವರಿಗೆ ವರದಿ ನೀಡಲಾಗುವುದು. ಮಳೆಹಾನಿಗೆ ಹೆಚ್ಚಿನ ಹಣ ಬಿಡುಗಡೆಗೆ ಮುಖ್ಯಮಂತ್ರಿ ಅವರನ್ನು ಕೋರಲಾಗುವುದು ಎಂದು ಸಚಿವರು ಹೇಳಿದರು.
    ಸರ್ಕಾರದ ಬಳಿ ಹಣವಿದ್ದು, ಅಭಿವೃದ್ಧಿ ಕಾರ್ಯಗಳಿಗೆ ಯಾವುದೇ ರೀತಿಯ ಅಡಚಣೆ ಇಲ್ಲ. ಸರ್ಕಾರ 8 ಸಾವಿರ ಕೋಟಿ ರೂ. ವನ್ನು ಅಭಿವೃದ್ಧಿ ಕೆಲಸಕ್ಕಾಗಿ ಬಿಡುಗಡೆ ಮಾಡಿದೆ. ಹಾಗೆಯೇ ಕೊಡಗು ಜಿಲ್ಲೆಗೂ ಸಹ 100 ಕೋಟಿ ರೂ. ಬಿಡುಗಡೆ ಮಾಡಿದೆ. ಗ್ಯಾರಂಟಿ ಯೋಜನೆ ಜೊತೆಗೆ ಅಭಿವೃದ್ಧಿ ಕಾರ್ಯಕ್ಕೆ ಹೆಚ್ಚಿನ ಒತ್ತು ನೀಡಲಾಗಿದೆ ಎಂದು ಸಚಿವರು ವಿವರಿಸಿದರು.
    ಕುಶಾಲನಗರದಲ್ಲಿ ನೂತನವಾಗಿ ನಿರ್ಮಿಸಿ ಇತ್ತೀಚೆಗೆ ಉದ್ಘಾಟನೆಯಾದ ಪುರಸಭೆ ಕಟ್ಟಡವನ್ನು ವೀಕ್ಷಿಸಿ ಸಚಿವರು ಮೆಚ್ಚುಗೆ ವ್ಯಕ್ತಪಡಿಸಿದರು. ಸಾರ್ವಜನಿಕರಿಗೆ ಅನುಕೂಲವಾಗುವಲ್ಲಿ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಮಾದರಿಯಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದರು.
    ಶಾಸಕರಾದ ಡಾ.ಮಂತರ್ ಗೌಡ ಅವರು ಮಾತನಾಡಿ ಮರಣ ಪ್ರಮಾಣ ಪತ್ರ ನೀಡಲು ಒಂದು ತಿಂಗಳಿಗೂ ಹೆಚ್ಚು ಕಾಲ ತೆಗೆದುಕೊಳ್ಳುವುದು ಸರಿಯಲ್ಲ. ಇಂದಿನ ಸಾಮಾಜಿಕ ಜಾಲತಾಣದ ಯುಗದಲ್ಲಿ ಸಾರ್ವಜನಿಕರಿಗೆ ಸ್ಪಂದಿಸುವುದು ಅತೀ ಮುಖ್ಯವಾಗಿದೆ ಎಂದರು.
    ಮೇ ಮತ್ತು ಜೂನ್ ತಿಂಗಳಲ್ಲಿ ಸುರಿದ ಧಾರಾಕಾರ ಮಳೆಯಿಂದ ಉಂಟಾದ ಹಾನಿ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ ಪರಿಶೀಲಿಸಲಾಗಿದೆ ಎಂದರು.
    ಜಿಲ್ಲಾಧಿಕಾರಿ ವೆಂಕಟ್ ರಾಜಾ, ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ರಾಮರಾಜನ್, ಕುಶಾಲನಗರ ತಾಲ್ಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿ ಅಧ್ಯಕ್ಷರಾದ ವಿ.ಪಿ.ಶಶಿಧರ್, ಕುಶಾಲನಗರ ಪುರಸಭೆ ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಇತರರು ಇದ್ದರು.

    Previous Articleಪಂಚಾಯಿತಿ ಕಟ್ಟಡ ಖರೀದಿಸಲು ಸಚಿವರಿಗೆ ಪೊನ್ನಣ್ಣ ಮನವಿ
    Next Article ರೆಡ್‍ಕ್ರಾಸ್ ಕೊಡಗು ಘಟಕದ ವಾರ್ಷಿಕ ಮಹಾಸಭೆ

    Related Posts

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026

    ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ

    September 13, 2026

    ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ

    September 13, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.