
ಮೆಟ್ರೋ ದಲ್ಲಿ ಸಹ ಪ್ರಯಾಣಿಕರೊಂದಿಗೆ ಮಾತುಕತೆ.
ಕೆಲಸದ ನಿಮಿತ್ತ ಬೆಂಗಳೂರಿಗೆ ತೆರಳಿದ ಶಾಸಕ ಡಾ.ಮಂತರ್ ಗೌಡ ರವರು ಹೆಚ್ಚಿನ ಟ್ರಾಫಿಕ್ ಒತ್ತಡ ಇರುವುದನ್ನು ಗಮನಿಸಿ ಸಮಯ ವ್ಯರ್ಥವಾಗುವುದನ್ನು ತಪ್ಪಿಸಲು ಕೆಂಗೇರಿ – ವಿಧಾನಸೌದ ಮಾರ್ಗದಲ್ಲಿ “ನಮ್ಮ ಮೆಟ್ರೊ” ರೈಲು ಪ್ರಯಾಣ ನಡೆಸಿದರು.
ಜನಸಾಮಾನ್ಯರಂತೆ ಸರದಿಯಲ್ಲಿ ತೆರಳಿ ಸಾಮಾನ್ಯ ಪ್ರಯಾಣಿಕರಂತೆ ಪ್ರಯಾಣ ಬೆಳೆಸಿದರು. ಈ ಸಂದರ್ಭದಲ್ಲಿ ಸಹ ಪ್ರಯಾಣಿಕರುಗಳೊಂದಿಗೆ ಮಾತುಕತೆ ನಡೆಸಿ ಬೆಂಗಳೂರಿನ ದಿನ ನಿತ್ಯದ ವಿಚಾರ ವಿನಿಮಯ ಮಾಡಿಕೊಂಡರು.
ನಿತ್ಯ ಸ್ವಂತ ವಾಹನಗಳಲ್ಲಿ ತೆರಳುವವರು ಮೆಟ್ರೋ ಬಳಸಿ ಬೆಂಗಳೂರು ಟ್ರಾಫಿಕ್ ಜಂಜಾಟಕ್ಕೆ ಬ್ರೇಕ್ ನೀಡುವ ಸಂದೇಶವನ್ನು ನೀಡಿದರು.


