ಕರ್ನಾಟಕ ರಾಜ್ಯ ಸರಕಾರದ ಮಾನ್ಯ ಕಂದಾಯ ಸಚಿವರಾದ  ಕೃಷ್ಣ ಬೈರೇಗೌಡ ಅವರನ್ನು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ* ರವರು ಇಂದು ವಿಕಾಸ ಸೌಧದ ಮಾನ್ಯ ಸಚಿವರ ಕೊಠಡಿಯಲ್ಲಿ ಭೇಟಿ ಮಾಡಿ, ಕಂದಾಯ ಇಲಾಖೆಯ ಕೆಲವು ಮಸೂದೆಗಳಿಗೆ ತಿದ್ದುಪಡಿ ತರುವಂತೆ ಮನವಿ ಸಲ್ಲಿಸಿದರು. ವಿಶೇಷವಾಗಿ, ಕೊಡಗಿನವರ ಜಮ್ಮಬಾಣೆಗೆ ಕಂದಾಯ ನಿಗದಿ, ಪಟ್ಟೇದಾರರ ಸಮಸ್ಯೆ ಮತ್ತು ಪಹಣಿ ಪತ್ರದಲ್ಲಿ P ನಂಬರ್ ಗಳ ಸಮಸ್ಯೆಯನ್ನ ನಿವಾರಣೆ ಮಾಡಲು ಸೂಕ್ತ ತಿದ್ದುಪಡಿಯನ್ನು ಕರ್ನಾಟಕ  ಕಂದಾಯ ಸಚಿವರಲ್ಲಿ ಮನವಿ ಮಾಡಲಾಯಿತು.
ಇದಕ್ಕೆ ಪೂರಕವಾಗಿ ಸ್ಪಂದಿಸಿದ ಕಂದಾಯ ಸಚಿವರು, ಮುಂಬರುವ ಮುಂಗಾರು ಅಧಿವೇಶನದಲ್ಲಿ ಅಗತ್ಯ ತಿದ್ದುಪಡಿಯನ್ನು ತರಲಾಗುವುದೆಂಬ ಭರವಸೆಯನ್ನು ನೀಡಿದರು.

Exit mobile version