ತೀವ್ರ ಮಳೆ,ಗಾಳಿಯಿಂದ ಕೊಡಗು ಜಿಲ್ಲೆಯ ಜನಜೀವನ ಅಸ್ತವ್ಯಸ್ತ ಗೊಂಡಿರುವ ಸನ್ನಿವೇಶದಲ್ಲಿ ಅರಣ್ಯ ಇಲಾಖೆಯವರೇ ಜಿಲ್ಲೆಯ ಜನರ ಜೀವನಕ್ಕೆ ಕಂಟಕಪ್ರಾಯವಾಗಿ ವರ್ತನೆ ಮಾಡಿದ್ದು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ರವರು ಅರಣ್ಯ ಇಲಾಖೆಯ ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡ ಘಟನೆ ಇಂದು ಮುಂಜಾನೆ ಮಡಿಕೇರಿಯಲ್ಲಿ ನಡೆದಿದೆ.
- ಕೆ.ನಿಡುಗಣೆ ಗ್ರಾಮದ ನಿವಾಸಿ ಅ
ರ್ಚಕರಾದ ಕಿಶೋರ್ ಸ್ವಾಮಿ ಯವರ ಮನೆಯ ಸಮೀಪದ ಬೃಹತ್ ಮರದ ಕೊಂಬೆ ಬೆಳಗ್ಗಿನ ಜಾವ ಅತಿಯಾದ ಗಾಳಿ ಮಳೆಗೆ ಮುರಿದು ಬಿದ್ದಿದೆ.ಅದೃಷ್ಟವಶಾತ್ ಮನೆಯ ಮುಂದೆ ನಿಲ್ಲಿಸಿದ ವಾಹನಗಳ ಮೇಲೆ ಬಿದ್ದ ಕಾರಣ,ಕೂದಲೆಳೆಯ ಅಂತರದಲ್ಲಿ ಮನೆ ಬಚಾವಾಗಿದೆ.ಮತ್ತು ಯಾವುದೇ ಪ್ರಾಣ ಹಾನಿ ಸಂಭವಿಸಿಲಿಲ್ಲ.ಸುದ್ದಿ ತಿಳಿದ ತಕ್ಷಣವೇ ಗ್ರಾಮದ ಜನರು ಸೇರಿ ಮರವನ್ನು ತೆರವುಗೊಳಿಸಿ ಮಿಕ್ಕ ಮರದ ಕೊಂಬೆ ಮನೆಯ ಮೇಲೆ ಬೀಳಲು ಕ್ಷಣಗಣನೆ ಆರಂಭಿಸಿದನ್ನು ಗಮನಿಸಿ ಹಗ್ಗ ಬಳಸಿ ಹರಸಾಹಸ ಪಟ್ಟು ಅವುಗಳನ್ನು ತೆರವುಗೊಳಿಸಿ ಮನೆಯವರನ್ನು ನಿಶ್ಚಿಂತರಾಗಿಸಿ ತೆರಳಿದ್ದಾರೆ.
ನಂತರ ನಡೆಯಿತು ನೋಡಿ ಸಿನಿಮೀಯ ಘಟನೆ. ಮರಗಳ್ಳರ ಒಡನಾಡಿಗಳಾದ ಅಲ್ಲಿನ ಅರಣ್ಯ ಇಲಾಖೆ ಸಿಬ್ಬಂದಿಗಳು ಜೀಪಿನಲ್ಲಿ ಬಂದು ಮನೆಗೆ ನುಗ್ಗಿ ಕಿಶೋರ್ ಸ್ವಾಮಿಯವರನ್ನು ಬಂಧಿಸಿ ಅಕ್ಷರಶಃ ಭಯೋತ್ಪಾದಕ ರನ್ನು ಕರೆದುಕೊಂಡು ಹೋಗುವ ಹಾಗೆ ಅಜ್ಞಾತ ಸ್ಥಳಕ್ಕೆ ಕೊಂಡೊಯ್ದಿದ್ದಾರೆ.
ಅವರ ಮೊಬೈಲ್ ಪೋನ್ ಕಸಿದುಕೊಂಡು ಯಾರ ಸಂಪರ್ಕಕ್ಕೂ ಸಿಗದ ಹಾಗೆ ಜಾಗೃತಿ ವಹಿಸಿದ್ದಾರೆ
ಕಿಶೋರ್ ಸ್ವಾಮಿ( ಪೂಜೆ ಮಾಡುವ ಅರ್ಚಕ) ರವರನ್ನು ಅರೆಸ್ಟ್ ಮಾಡಿದ್ದಾರೆ ಎಂಬ ಸುದ್ದಿ ಊರಿನಲ್ಲಿ ಹರಿದಾಡಿದ ಕೂಡಲೇ ಗ್ರಾಮಸ್ಥರು ಮಡಿಕೇರಿ ನಗರದಲ್ಲಿ ವಲಯ ಅರಣ್ಯ ಕಛೇರಿ,ಅರಣ್ಯ ಭವನ ಎಲ್ಲಾ ಕಡೆ ಹುಡುಕಾಡಿದರೂ ಕಿಶೋರ್ ಸ್ವಾಮಿಯವರ ಪತ್ತೆ ಇಲ್ಲ.ನಂತರ ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷರಾದ ತೆನ್ನಿರ ಮೈನಾ ರವರನ್ನು ಸಂಪರ್ಕಿಸಿದ್ದಾರೆ.
ನಂತರ ಅರಣ್ಯ ಇಲಾಖೆ ಗೆಸ್ಟ್ ಹೌಸಿನಲ್ಲಿ ಇರಿಸಲಾಗಿದೆ ಎಂದು ಮಾಹಿತಿ ದೊರಕಿದ ಹಿನ್ನಲೆಯಲ್ಲಿ ಅಲ್ಲಿಗೆ ಗ್ರಾಮಸ್ಥರು ತೆರಳಿದ್ದಾರೆ.
ತೆನ್ನಿರ ಮೈನಾ ವಿಚಾರವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ರವರ ಗಮನಕ್ಕೆ ತಂದಿದ್ದಾರೆ.ಕೂಡಲೇ ಡಾ ಮಂತರ್ ಗೌಡ ರವರು ಅರಣ್ಯ ಇಲಾಖೆಯವರನ್ನು ತೀವ್ರ ತರಾಟೆಗೆ ತೆಗೆದುಕೊಂಡು ಮಾತಿನ ತಪರಾಕಿ ನೀಡಿದ ಮೇಲೆ ಅರಣ್ಯ ಇಲಾಖೆಯವರು ಕಿಶೋರ್ ಸ್ವಾಮಿಯವರನ್ನು ಬಿಟ್ಟು ಕಳಿಸಿದ್ದಾರೆ.
ಕೊಡಗು ಜಿಲ್ಲೆಯಲ್ಲಿ ಅರಣ್ಯ ಇಲಾಖೆಯವ ಹಾವಳಿ ವನ್ಯ ಜೀವಿಗಳ ಧಾಳಿಗಿಂತಲೂ ಭಯಾನಕವಾಗಿದೆ.ಮಳೆಗಾಳಿಗೆ ಅಪಾಯಕಾರಿಯಾದ ಪ್ರದೇಶಗಳಲ್ಲಿರುವ ಮರ ತೆರವುಗೊಳಿಸುವಂತೆ ಸಾವಿರಾರು ಅರ್ಜಿ ಸಲ್ಲಿಕೆಯಾಗಿದ್ದರೂ ಅವುಗಳಲ್ಲಿ ಯಾವುದನ್ನೂ ಇತ್ಯರ್ಥ ಪಡಿಸಿರುವುದಿಲ್ಲಿ.ಮರ ಮನೆ ಮೇಲೆ ಬೀಳುತ್ತದೆ ಎಂದರೆ ಅರ್ಜಿ ಸಲ್ಲಿಸಿ.ಸ್ಥಳ ಪರಿಶೀಲನೆ ನಡೆಸುತ್ತೇವೆ ಎಂದು ಸಬೂಬು ಹೇಳುತ್ತಾರೆ.ಜನರೇ ಮರ ತೆರವುಗೊಳಿಸಿದರೆ ಬಂದು ಕೇಸ್ ಹಾಕಿ ಜನರ ಪ್ರಾಣ ತಿನ್ನುತ್ತಾರೆ.ಈ ಇಲಾಖೆಯಿಂದ ಮರಗಳ್ಳರಿಗೆ ಅನುಕೂಲಕರ ವಾತವರಣ ಇದ್ದು ಸಾಮಾನ್ಯ ಜನರು ಮಾತ್ರ ಹಿಡಿ ಶಾಪ ಹಾಕುತ್ತಿದ್ದಾರೆ.
ಶಾಸಕದ್ವಯರು ಇವರನ್ನು ಹದ್ದುಬಸ್ತಿನಲ್ಲಿ ಇಡಲಿ ಎನ್ನುವುದು ಸಾರ್ವಜನಿಕರ ಕೋರಿಕೆ.
*ಕೊಡಗು ನ್ಯೂಸ್*
