ಮಡಿಕೇರಿ ಆ.೧೨ : ಕುಶಾಲನಗರ ಆರ್ಯವೈಶ್ಯ ಮಂಡಳಿಯ ನೂತನ ಅಧ್ಯಕ್ಷರಾಗಿ ಬಿ.ಆರ್.ನಾಗೇಂದ್ರ ಪ್ರಸಾದ್ ಆಯ್ಕೆಯಾಗಿದ್ದಾರೆ.

ಆರ್ಯವೈಶ್ಯ ಮಂಡಳಿಯ ಸಭೆಯಲ್ಲಿ ಮುಂದಿನ ಮೂರು ವರ್ಷಗಳ ಅವಧಿಯ ಆಡಳಿತ ಮಂಡಳಿಗೆ ನೂತನ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು. ನಿಕಟ ಪೂರ್ವ ಅಧ್ಯಕ್ಷ ಬಿ.ಎಲ್.ಉದಯ್ ಕುಮಾರ್ ಅವರನ್ನೊಳಗೊಂಡ ಮಂಡಳಿಗೆ ಕಾರ್ಯದರ್ಶಿಯಾಗಿ ಕೆ.ಪ್ರವೀಣ್, ಖಜಾಂಚಿಯಾಗಿ ಪಿ.ಎಸ್.ಪ್ರಶಾಂತ್, ಉಪಾಧ್ಯಕ್ಷರಾಗಿ ಬಿ.ಎಲ್.ಅಶೋಕ್ ಕುಮಾರ್, ಸಹ ಕಾರ್ಯದರ್ಶಿಯಾಗಿ ಎ.ಎಸ್ ಕುಮಾರ್, ನಿರ್ದೇಶಕರುಗಳಾಗಿ ಬಿ.ಎಲ್.ಸತ್ಯನಾರಾಯಣ, ಎಸ್.ಎನ್.ನಾಗೇಂದ್ರ, ಬಿ.ಆರ್.ನಟರಾಜ್, ಕೆ.ಜೆ.ಸತೀಶ್, ಬಿ.ಪಿ.ಕೃಷ್ಣಮೂರ್ತಿ ಹಾಗೂ ವಿ.ವೈಶಾಖ್ ಆಯ್ಕೆಯಾದರು

Exit mobile version