ಇದೊಂದು ಕೇಸು ಪತ್ತೆಯಾಗಬೇಕಿತ್ತು.

ಇದೊಂದು ಗೆಲುವು ಪೊಲೀಸರಿಗೆ ಬೇಕಾಗಿತ್ತು!

ಪೊಲೀಸರ ವಸತಿ ಗೃಹದಲ್ಲೇ ಕಳ್ಳತನ,ರಕ್ಷಣೆ ನೀಡುವ ಆರಕ್ಷಕರಿಗೆ ರಕ್ಷಣೆ ಇಲ್ಲವೇ?…..ಎಂದು ಇತ್ಯಾದಿಯಾಗಿ ಮಡಿಕೇರಿಯ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾದದ್ದು ಕಳೆದ ಜೂನ್ 17ರಂದು ರಾತ್ರಿ ಜಿಲ್ಲಾ ಕೇಂದ್ರ ಮಡಿಕೇರಿಯ ಮೈತ್ರಿ ಹಾಲ್ ಬಳಿ ಇರುವ ಪೊಲೀಸ್ ವಸತಿ ಗೃಹಗಳಲ್ಲಿ ನಡೆದ ಕಳ್ಳತನ ಪ್ರಕರಣಗಳು.

ಪೊಲೀಸರ ಮನೆಗಳಿಗೆ ಕನ್ನ ಹಾಕಿದ್ದ ಖದೀಮರು ಸುಮಾರು ಎಂಟು ಮನೆಗಳ ಬೀಗ ಹೊಡೆದು ರೂ. 90,000 ನಗದು ಸೇರಿದಂತೆ ಸ್ವಲ್ಪ ಪ್ರಮಾಣದ ಚಿನ್ನ-ಬೆಳ್ಳಿ ಆಭರಣಗಳನ್ನು ಕಳ್ಳರು ಕಳ್ಳತನ ಮಾಡುವ ಮೂಲಕ ಕೊಡಗು ಪೊಲೀಸರಿಗೆ ಎಸೆದಿದ್ದ ಸವಾಲನ್ನು ನಮ್ಮೆಲ್ಲರ ನೆಚ್ಚಿನ ಎಸ್.ಪಿ. ಸಾಹೇಬರು ಸವಾಲಾಗಿಯೇ ಸ್ವೀಕರಿಸಿ ಪ್ರಕರಣವನ್ನು ಪತ್ತೆ ಹಚ್ಚುವ ನಿಟ್ಟಿನಲ್ಲಿ ಪೊಲೀಸ್ ಅಧಿಕಾರಿ-ಸಿಬ್ಬಂದಿಗಳ ವಿವಿಧ ತಂಡಗಳನ್ನು ರಚಿಸಿ ಆ ತಂಡಗಳಿಗೆ ಸಿಸಿಟಿವಿ ಪರಿಶೀಲಿಸುವ, ಮೊಬೈಲ್ ಟವರ್ ಡಂಪ್ ಪರಿಶೀಲಿಸುವ, ರಾಜ್ಯ – ಅಂತರ್ ರಾಜ್ಯ MOB ಗಳ ಮಾಹಿತಿ ಸಂಗ್ರಹಿಸುವುದು ಸೇರಿದಂತೆ ವಿವಿಧ ಜವಾಬ್ದಾರಿಗಳನ್ನು ನೀಡಿ ಪ್ರತಿದಿನ ರಾತ್ರಿ ವಿಡಿಯೋ ಕಾನ್ಫರೆನ್ಸ್ ನಲ್ಲಿ ದೈನಂದಿನ ಪ್ರಗತಿಯನ್ನು ಪರಿಶೀಲಿಸಿ ಸಲಹೆ ಸೂಚನೆಗಳನ್ನು ನೀಡುತ್ತಿದ್ದು, ಈ ಬಗ್ಗೆ ರಚಿತವಾದ ಪತ್ತೆ ತಂಡಗಳು ಕೊಡಗು, ಮಂಗಳೂರು, ಉಡುಪಿ, ಹಾಸನ,ಚಿಕ್ಕ ಮಗಳೂರು ಜಿಲ್ಲೆ ಸೇರಿದಂತೆ ಗೋವಾದವರೆಗೂ ಪತ್ತೆ ಕಾರ್ಯದಲ್ಲಿ ತೊಡಗಿಕೊಂಡಿದ್ದವು. ಈ ಎಲ್ಲಾ ಕೆಲಸ ಕಾರ್ಯಗಳಿಗೂ ಸಾಥ್ ನೀಡಿದ್ದು ಅಡಿಷನಲ್ ಎಸ್.ಪಿ. ಸಾಹೇಬರು.
ಮಾನ್ಯ ಎ.ಎಸ್‌.ಪಿ ಸಾಹೇಬರು ರಚಿಸಿದ ಪಿಎಸ್‌ಐ ಮಂಜುನಾಥ್ ಹಾಗೂ ಸಿಬ್ಬಂದಿಗಳಾದ ಯೋಗೇಶ್, ನಿರಂಜನ್, ಪ್ರಭಾಕರ್ ಮುನೀರ್ ರವರುಗಳ ತಂಡವು ಸರಿ ಸುಮಾರು 25 ದಿನಗಳ ಕಾಲ ಮಧ್ಯಪ್ರದೇಶದ ಧಾರ್, ಇಂದೋರ್, ರಾಜ್ ಘರ್,ತಾಂಡ ಪ್ರದೇಶಗಳಲ್ಲಿ ಸ್ಥಳೀಯರಂತೆ ಬೆರೆಯಲು ವೇಷ ಮರೆಸಿಕೊಂಡು ಕಾರ್ಯಾಚರಣೆ ಮಾಡಿದ್ದು, ನಿದ್ರೆ ಇಲ್ಲದ ರಾತ್ರಿಗಳನ್ನು ಕಳೆದು ತಿಂಡಿ-ಊಟ ಸರಿ ಹೊಂದದೆ ಎರಡು ಹೊತ್ತಿನ ಸರಳ ಊಟಕ್ಕೆ ತಮ್ಮನ್ನು ಒಗ್ಗಿಸಿಕೊಂಡು ಪ್ರಕರಣದ ಪ್ರಮುಖ ಆರೋಪಿಯಾದ ಆಂಧ್ರಪ್ರದೇಶ, ತೆಲಂಗಾಣ, ಗೋವಾ, ಕರ್ನಾಟಕ, ಗುಜರಾತ್ ,ತಮಿಳು ನಾಡು, ಮಧ್ಯಪ್ರದೇಶ ರಾಜ್ಯಗಳಲ್ಲಿ 2020 ನೇ ಇಸವಿಯಿಂದ ಈವರೆಗೆ ಸರಿ ಸುಮಾರು 20 ಕ್ಕೂ ಹೆಚ್ಚು ಕಳ್ಳತನಗಳನ್ನು ಮಾಡಿರುವ ಆರೋಪಿ ಸುರೇಶ್ ಸೇಂಗರ್ ಹಾಗೂ ಆತನಿಗೆ ಸಹಕರಿಸಿದ ಮನೀಶ್ ಎಂಬುವವರನ್ನು ಖಚಿತ ಮಾಹಿತಿಯೊಂದಿಗೆ ದಿನಾಂಕ 16.8.24 ರಂದು ಅಂತಿಮವಾಗಿ ಪಿರಿಯಾಪಟ್ಟಣದಲ್ಲಿ ದಸ್ತಗಿರಿ ಮಾಡುವ ಮೂಲಕ ಕೊಡಗು ಪೋಲಿಸರಿಗೆ ಸವಾಲಾಗಿ ಪರಿಣಮಿಸಿದ್ದ ಪೊಲೀಸ್ ಕ್ವಾಟ್ರರ್ಸ್ ಕಳ್ಳತನ ಪ್ರಕರಣವನ್ನು ಪತ್ತೆ ಹಚ್ಚಿರುತ್ತಾರೆ.

ಈ ಪ್ರಕರಣಗಳನ್ನು ಪತ್ತೆಹಚ್ಚಲು ಪೊಲೀಸ್ ತಂಡಗಳಿಗೆ ಪ್ರೇರಣೆಯನ್ನು ನೀಡಿ ಸೂಕ್ತ ಸಲಹೆ -ಮಾರ್ಗದರ್ಶನ, ಅಗತ್ಯವಿರುವ ಅನುಕೂಲತೆಗಳನ್ನು ಕಲ್ಪಿಸಿಕೊಟ್ಟು ಪೊಲೀಸರ ನೈತಿಕ ಸ್ಥೈರ್ಯ ಹೆಚ್ಚಿಸಲು ಕಾರಣಿಕರ್ತರಾದ ಕೆ.ರಾಮರಾಜನ್, ಐ.ಪಿ.ಎಸ್, ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆ ರವರಿಗೆ ಅನಂತ ನಮನಗಳು. ಈ ಕಾರ್ಯಕ್ಕೆ ಒತ್ತಾಸೆಯಾಗಿ ನಿಂತ ದಿನೇಶ್ ಕುಮಾರ್ ಕೆ.ಎಸ್.ಪಿ.ಎಸ್. ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಕೊಡಗು ಜಿಲ್ಲೆರವರಿಗೆ ಹಾಗೂ ಸೂರಜ್ ಕೆ.ಎಸ್.ಪಿ.ಎಸ್. ಡಿ,ವೈ,ಎಸ್,ಪಿ ಮಡಿಕೇರಿ ಉಪ ವಿಭಾಗ ರವರುಗಳಿಗೆ ಧನ್ಯವಾದಗಳು.

ಪೊಲೀಸ್ ಕ್ವಾಟ್ರಸ್ ಕಳ್ಳತನ ಪ್ರಕರಣಗಳನ್ನು ಪತ್ತೆಹಚ್ಚಲು ಜಿಲ್ಲೆಯ ಹಲವಾರು ಪೊಲೀಸ್ ಅಧಿಕಾರಿ-ಸಿಬ್ಬಂದಿಗಳು ಪ್ರತ್ಯಕ್ಷವಾಗಿ ಹಾಗೂ ಪರೋಕ್ಷವಾಗಿ ಆಹರ್ನಿಶಿ ದಕ್ಷತೆಯಿಂದ ಕರ್ತವ್ಯ ನಿರ್ವಹಿಸಿದ್ದು, ಎಲ್ಲರಿಗೂ ವಿಶೇಷ ಧನ್ಯವಾದಗಳು.

*ಇಂತಿ,*
*ಮಡಿಕೇರಿ ನಗರ ಪೊಲೀಸ್*

*ಕೊಡಗು ನ್ಯೂಸ್*

Exit mobile version