Close Menu
Kodagu News
    ಹೊಸ ಸುದ್ದಿ

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    • ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ
    • ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್
    • ಕೊಡಗು ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಧರ್ಮಜ ಉತ್ತಪ್ಪ ಮುಂದುವರಿಕೆ
    • ಸಾಮರಸ್ಯದ ಕೊಡಗಿಗೆ ಬೆಂಕಿ ಹಚ್ಚುತ್ತಿರುವವರು ಯಾರು?
    • ಲಂಡನ್‌ನಲ್ಲಿ ಕೊಡಗಿನ ಕೊನೆಯ ರಾಜನ ನೆನಪು: ಚಿಕ್ಕವೀರ ರಾಜೇಂದ್ರ ವಾಸಿಸಿದ್ದ ಮನೆಗೆ ಬ್ಲೂ ಪ್ಲೇಕ್‌
    • ಸಿದ್ದಾಪುರ–ಒಂಟಿಅಂಗಡಿ ರಸ್ತೆ ಅಭಿವೃದ್ಧಿಗೆ ಚಾಲನೆ: ₹3 ಕೋಟಿ ವೆಚ್ಚದ ಸಿಮೆಂಟ್ ಕಾಂಕ್ರೀಟ್ ರಸ್ತೆ ಕಾಮಗಾರಿ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಆರೋಗ್ಯ»ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ
    ಆರೋಗ್ಯ

    ಹೊದ್ದೂರು ಗ್ರಾಮದಲ್ಲಿ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ


    *************************************************
    ಮಡಿಕೇರಿ -ಕೊಡಗು ಜಿಲ್ಲಾ ಲೀಡ್ ಬ್ಯಾಂಕ್ ಮಡಿಕೇರಿ, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆ ಇವರ ಸಹಯೋಗದೊಂದಿಗೆ ಮಡಿಕೇರಿ ತಾಲ್ಲೂಕಿನ ಹೊದ್ದೂರು ಗ್ರಾಮದಲ್ಲಿ, ಗ್ರಾಮ ಪಂಚಾಯತಿಯ ಸಹಕಾರದೊಂದಿಗೆ ಕೇಂದ್ರ ಸರಕಾರದ ಆದೇಶದಂತೆ ಜನ ಸುರಕ್ಷಾ ಅಭಿಯಾನ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
    ಕಾರ್ಯಕ್ರಮದಲ್ಲಿ ಮಾತನಾಡಿದ ಆರ್ಥಿಕ ಸಾಕ್ಷರತಾ ಕಾರ್ಯಕ್ರಮ ನಡೆಸುತ್ತಿರುವ ಅವಾರ್ಡ್ ಸಂಸ್ಥೆಯ ಜಿಲ್ಲಾ ಸಂಯೋಜಕರಾಗಿರುವ ಕೆ.ಎ.ಆಸೀಫ್ ಅವರು, ಜನ ಸಾಮಾನ್ಯರು ಕಡ್ಡಾಯವಾಗಿ ಸಾಮಾಜಿಕ ಭದ್ರತಾ ಯೋಜನೆಗಳ ಸಂಪೂರ್ಣ ಮಾಹಿತಿ ಮತ್ತು ಉಪಯೋಗ ತಿಳಿದುಕೊಂಡು ಇದುವರೆಗೂ ಯೋಜನೆ ಮಾಡಿಸಿಕೊಳ್ಳದೆ ಇರುವವರು ಶೀಘ್ರದಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತೆ ಕೋರಿದರು.
    ವಿಶೇಷವಾಗಿ ಕೊಡಗು ಜಿಲ್ಲೆಯಲ್ಲಿ ಮಳೆಗಾಲದ ಸಂದರ್ಭದಲ್ಲಿ ಅತೀ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದು ಇಂತಹ ಸಂದರ್ಭದಲ್ಲಿ ಇದು ಅತೀ ಉಪಯೋಗಕರ ಎಂದು ತಿಳಿಸಿದರು.
    ಮೊಬೈಲ್ ಪೆÇೀನಿನಲ್ಲಿ ಬ್ಯಾಂಕ್‍ನಿಂದ ಅಂತ ಹೇಳಿ ಒಟಿಪಿ ಮತ್ತು ಕೆವೈಸಿ ಕೇಳಿ ಬರುವ ಕರೆಗಳು ಸೈಬರ್ ವಂಚಕರ ಜಾಲವಾಗಿದ್ದು, ಗ್ರಾಹಕರು ಪೆÇೀನಿನ ಮುಖಾಂತರ ಮಾಹಿತಿ ಹಂಚಿಕೊಳ್ಳಬಾರದು ಎಂದು ತಿಳಿಸಿದರು.
    ಅನಾಮಧೇಯ ಕರೆಗಳು ಲಿಂಕ್‍ಗಳನ್ನು ಒತ್ತುವ ಮೂಲಕ ಸ್ಪಂದನೆ ನೀಡದಂತೆಯೂ ಸೈಬರ್ ವಂಚಕರ ಬಲೆಯಿಂದ ಎಚ್ಚರ ವಹಿಸಬೇಕು. ಕಣ್ಣು ತಪ್ಪಿನಿಂದ ಮೋಸ ಜರುಗಿದರೆ ಕೂಡಲೆ 1930 ಗೆ ಕರೆಮಾಡುವ ಮುಖಾಂತರ ಸೈಬರ್ ವಂಚಕರಿಗೆ ಕಡಿವಾಣ ಹಾಕಬೇಕೆಂದು ಮಾಹಿತಿ ನೀಡಿದರು.
    ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆಯ ವ್ಯವಸ್ಥಾಪಕರಾದ ಅಶ್ವಿನ್ ಕುಮಾರ್ ಅವರು ಮಾತನಾಡಿ ಮುಖ್ಯವಾಗಿ ಯೋಜನೆಗಳಲ್ಲಿ ಒಂದಾದ ಪ್ರಧಾನಮಂತ್ರಿ ಸುರಕ್ಷ ಭಿಮಾಯೋಜನೆ, ಮತ್ತು ಪ್ರಧಾನಮಂತ್ರಿ ಜೀವನ್ ಜ್ಯೋತಿ ಭಿಮಾ ಯೋಜನೆ ಸಂಪೂರ್ಣ ಮಾಹಿತಿ ನೀಡಿದರು.
    ಅಲ್ಲದೆ 60 ವಯಸ್ಸು ಆದ ನಂತರದಲ್ಲಿ ಪಿಂಚಣಿರೂಪದಲ್ಲಿ 1000 ರೂ ಗಳಿಂದ 5000 ರೂ ಗಳ ವರೆಗಿನ ಪಿಂಚಣಿ ಹಣ ಸಿಗಬೇಕಾದರೆ ಈವಾಗಲೇ ಅಟಲ್ ಪಿಂಚಣಿ ಯೋಜನೆಯಡಿ ಹೆಸರು ನೋಂದಣಿ ಮಾಡಿಸುವಂತೆ ಅವಾರ್ಡ ಸಂಸ್ಥೆಯ ಮಡಿಕೇರಿ ತಾಲ್ಲೂಕು ಕೌನ್ಸಿಲರಾದ ಬಿ.ಎ.ಅಂಬಿಕಾ ಅವರು ತಿಳಿಸಿದರು.
    ಯೋಜನೆಯ ಸಂಪೂರ್ಣ ಮಾಹಿತಿ ನೀಡುವುದರೊಂದಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಬೆಂಗಳೂರು, ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ ಇವರ ಸಹಯೋಗದಲ್ಲಿ ನಬಾರ್ಡ್ ನ ಆರ್ಥಿಕ ನೆರವಿನೊಂದಿಗೆ ಕೊಡಗು ಜಿಲ್ಲೆಯಲ್ಲಿ ಅವಾರ್ಡ್ ಎನ್ನುವ ಸಂಸ್ಥೆಯು ಆರ್ಥಿಕ ಸಾಕ್ಷರತಾ ಕಾರ್ಯಕ್ರಮವನ್ನು ಪ್ರತೀ ತಾಲೂಕುಗಳಲ್ಲಿ ಮಾಡುತ್ತಿದ್ದು ಇದರ ಮುಖ್ಯ ಉದ್ದೇಶವೂ ಕೂಡ ಆಗಿದೆ ಎಂದರು.
    ಸಾಮಾಜಿಕ ಭದ್ರತಾ ಯೋಜನೆ ಮಾಡಿಸುವುದು, ಸೈಬರ್ ಅಪರಾಧಗಳ ಬಗ್ಗೆ ಮಾಹಿತಿ ನೀಡುವುದು ಮತ್ತು ಡಿಜಿಟಲ್ ಪೇಮೆಂಟ್ ಬಗ್ಗೆ ಮಾಹಿತಿ ನೀಡುವುದೇ ಆಗಿದೆ ಎಂದರು.
    ಮಡಿಕೇರಿ ಕಾವೇರಿ ಲೇಔಟ್ ಮತ್ತು ವಿರಾಜಪೇಟೆಯ ಸುಭಾμï ನಗರದಲ್ಲಿ ಆರ್ಥಿಕ ಸಾಕ್ಷರತಾ ಕೇಂದ್ರಗಳ ಕಚೇರಿ ಇದ್ದು, ಹೆಚ್ಚಿನ ಮಾಹಿತಿಗೆ ಕಚೇರಿ ಸಂಪರ್ಕಿಸುವಂತೆ ತಿಳಿಸಿದರು.
    ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷರಾದ ಎಚ್.ಎ.ಹಂಸ ಅವರು ಮಾತನಾಡಿ ಈ ರೀತಿ ಕಾರ್ಯಕ್ರಮ ಮಾಡುವುದರಿಂದ ಮಾತ್ರ ಗ್ರಾಮೀಣ ಭಾಗದ ಜನರಿಗೆ ಬ್ಯಾಂಕಿನಲ್ಲಿರುವ ಯೋಜನೆಗಳ ಮಾಹಿತಿ ಲಭ್ಯವಾಗಲಿದೆ ಎಂದರು.
    ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಾದ ಅಬ್ದುಲ್ಲಾ ಕೆ.ಎ. ಅವರು ಮಾತನಾಡಿ ಲೀಡ್ ಬ್ಯಾಂಕ್ ಮಡಿಕೇರಿ ಮತ್ತು ಅವಾರ್ಡ್ ಸಂಸ್ಥೆಯವರು ಎಲ್ಲಾ ಪಂಚಾಯತಿಗಳಿಗೆ ತೆರಳಿ ಮಾಡುವ ಈ ಕಾರ್ಯಕ್ರಮಕ್ಕೆ ನಾವು ಮೆಚ್ಚಲೇ ಬೇಕಾಗಿದ್ದು ಮನೆ ಬಾಗಿಲಿಗೆ ಬಂದು ಬ್ಯಾಂಕಿನ ಮಾಹಿತಿ ನೀಡುವುದು ಸಂತೋಷದ ವಿಷಯವಾಗಿದೆ ಎಂದು ತಮ್ಮ ಅಭಿಪ್ರಾಯ ತಿಳಿಸಿದರು.
    ಹೊದ್ದೂರು ಗ್ರಾಮ ಪಂಚಾಯತಿ ಸಾಮಾಜಿಕ ನ್ಯಾಯ ಸ್ಥಾಯಿಸಮಿತಿ ಅಧ್ಯಕ್ಷರಾದ ಮೊಣ್ಣಪ್ಪ, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಅಧ್ಯಕ್ಷರಾದ ಎಂ.ಬಿ.ಹಮೀದ್, ಗ್ರಾಮ ಆಡಳಿತ ಅಧಿಕಾರಿಗಳಾದ ಸಂತೋμï ಪಾಟೀಲ್, ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಮೂರ್ನಾಡು ಶಾಖೆಯ ವ್ಯವಸ್ಥಾಪಕರಾದ ಅಶ್ವಿನ್ ಕುಮಾರ್, ಗ್ರಾ.ಪಂ.ಸದಸ್ಯರಾದ ಪಾರ್ವತಿ, ಚೌರೀರ ನವೀನ್ ಮತ್ತು ಲಕ್ಷ್ಮಿ ಉಪಸ್ಥಿತರಿದ್ದರು.

    Previous Articleವಿರಾಜಪೇಟೆ ತಾಲ್ಲೂಕು ಪಂಚಾಯಿತಿ ಸಾಮಾನ್ಯ ಸಭೆ
    Next Article ಕೊಡಗು ಪೋಲಿಸರಿಗೆ ಸವಾಲಾಗಿ ಪರಿಣಮಿಸಿದ್ದ ಪೊಲೀಸ್ ಕ್ವಾಟ್ರರ್ಸ್ ಕಳ್ಳತನ ಪ್ರಕರಣವನ್ನು ಭೇದಿಸಿದ ಮಡಿಕೇರಿ ನಗರ ಪೊಲೀಸರು

    Related Posts

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ

    September 11, 2026

    ಮಡಿಕೇರಿಯಲ್ಲಿ ಸಾವಿರಾರು ರೈತರ ಬೃಹತ್ ಪ್ರತಿಭಟನಾ ಮೆರವಣಿಗೆ

    September 11, 2026

    ಕೊಡಗಿನಲ್ಲೂ ಮುಂದುವರೆದ ಹೊಸ ಟ್ರೆಂಡ್: ಅಂದಿನ ಕಾಲ ನೋಡದವರೇ ಇಂದು 80ರ ದಶಕದ ಫೋಟೋಗಳಲ್ಲಿ ಮಿಂಚಿಂಗ್

    September 10, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.