ವಿರಾಜಪೇಟೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ವಾಣಿಜ್ಯ ಮಳಿಗೆ, ಎಸ್ ಜೋಯ್ಸ್ ಟವರ್ಸ್ ನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉದ್ಘಾಟಿಸಿದರು. ಬಳಿಕ ಶುಭ ಕೋರಿದ ಶಾಸಕರು, ವೇಗವಾಗಿ ಬೆಳೆಯುತ್ತಿರುವ ವಿರಾಜಪೇಟೆ ನಗರದ ಜನತೆಯ ಅಗತ್ಯಗಳನ್ನು ಪೂರೈಸಲು ಒಂದೇ ಸಂಕೀರ್ಣದಲ್ಲಿ ಎಲ್ಲಾ ಸವಲತ್ತು ದೊರೆಯುವುದು ತುಂಬಾ ಅನುಕೂಲವಾಗುತ್ತದೆ. ಅಂತಹ ವಾತಾವರಣ ನಿರ್ಮಿಸುವುದು ಸಹ ಒಂದು ಉತ್ತಮ ಚಿಂತನೆಯಾಗಿದೆ. ಈ ವಾಣಿಜ್ಯ ಸಂಕೀರ್ಣವು ಯಶಸ್ಸನ್ನು ಕಾಣುತ್ತಾ ಮತ್ತಷ್ಟು ಅಭಿವೃದ್ಧಿ ಹೊಂದಲಿ ಎಂದು ಇದೇ ಸಂದರ್ಭದಲ್ಲಿ ಶುಭಾಶಯ ಕೋರಿದರು. ಈ ಸಂದರ್ಭದಲ್ಲಿ ಜೋಯ್ಸ್ ಟವರ್ಸ್ ನ ಮಾಲೀಕರು, ಪುರಸಭೆ ಅಧ್ಯಕ್ಷೆ ದೇಚಮ್ಮ ಕಾಳಪ್ಪ, ಉಪಾಧ್ಯಕ್ಷೆ ಫಸಿಯಾ ತಬ್ಸುಂ,ಪುರಸಭೆ ಸಾಯಿ ಸಮಿತಿ ಅಧ್ಯಕ್ಷರಾದ ಅಬುದುಲ್ ಜಲಿಲ್,ಪುರಸಭೆ ಸದಸ್ಯರಾದ ರಾಜೇಶ್, ಮತೀನ್, ಪೃಥ್ವಿನಾಥ್, ರಜಿನಿಕಾಂತ್, ಕಾಂಗ್ರೆಸ್ ಮುಖಂಡರಾದ ಜೋಕಿಮ್, ರಾಜೇಶ್ ನಯಾರ್, ಕುಂದಚೀರ ಮಂಜು ದೇವಯ್ಯ, ಎ ವಿ ಮಂಜುನಾಥ್, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷರಾದ ಜಮ್ಮಡ ಸೋಮಣ್ಣ, ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮೇಕೇರಿಯ ಇಂಪನ ಕೆ.ಡಿ.ಗೆ BCAಯಲ್ಲಿ ಕಾಲೇಜಿಗೆ ಪ್ರಥಮ ಸ್ಥಾನ
- ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಕೊಡಗಿನ ವಿದ್ಯಾರ್ಥಿಗಳ ಗಮನಾರ್ಹ ಸಾಧನೆ
- ಕಸ್ತೂರಿ ರಂಗನ್ ವರದಿ ಜಾರಿ ಕುರಿತು ಕೊಡಗಿನಲ್ಲಿ ಮಹತ್ವದ ಸಮಾಲೋಚನಾ ಸಭೆ
- ವರ್ಷವಾದರೂ ತಡೆಗೋಡೆ ನಿರ್ಮಿಸದ ಜಿಲ್ಲಾಡಳಿತ; ಅಪಾಯದ ತಿರುವಿನಲ್ಲಿ ವಾಹನ ಸವಾರರ ಪರದಾಟ!
- ಕೊಡಗು ಸೇರಿದಂತೆ ಇಂದು 8 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್
- ಮಹಮ್ಮದ್ ಯಾಸೀನ್ಗೆ ಮಿಕ್ಸ್ ಬಾಕ್ಸಿಂಗ್ ಚಾಂಪಿಯನ್ಶಿಪ್ನಲ್ಲಿ ಚಿನ್ನ
- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

