ವಿರಾಜಪೇಟೆ ಪುರಸಭೆ ವ್ಯಾಪ್ತಿಯ ಪಂಜರಪೇಟೆಯಲ್ಲಿ, ಶ್ರೀ ವಿನಾಯಕ ಸೇವಾ ಸಮಿತಿ-ಪಂಜರಪೇಟೆ, ಇವರು ಆಚರಿಸುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು.
ಇಂದಿನಿಂದ ಆಚರಿಸಲ್ಪಡುವ ಶ್ರೀ ಮಹಾ ಗಣಪತಿ ಉತ್ಸವದ, ಮೂರ್ತಿ ಪ್ರತಿಷ್ಠಾಪನ ಸಂದರ್ಭ ಉಪಸ್ಥಿತರಿದ್ದ ಮಾನ್ಯ ಶಾಸಕರು ವಿಘ್ನೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿದರು.
ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಅತ್ಯಂತ ವಿಜ್ಯಂಬಣೆಯಿಂದ ಆಚರಿಸಲ್ಪಡುವ ಈ ಹಬ್ಬವು ನಾಡಿನ ಸರ್ವ ಜನತೆಗೆ ಸುಖ, ಶಾಂತಿ ಹಾಗೂ ಸಮೃದ್ಧಿಯನ್ನು ಕರುಣಿಸಲಿ ಎಂದು ಮಾನ್ಯ ಶಾಸಕರು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Exit mobile version