ವಿರಾಜಪೇಟೆ ತಾಲೂಕು ಚೆನ್ನಯ್ಯನ ಕೋಟೆಯಲ್ಲಿ ನಡೆಯುತ್ತಿರುವ ಗಣೇಶೋತ್ಸವ ಕಾರ್ಯಕ್ರಮದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು* ಭಾಗವಹಿಸಿದರು.
ಶ್ರೀ ದೇವರಿಗೆ ಪೂಜೆ ಸಲ್ಲಿಸಿ ಮಾತನಾಡಿದ ಮಾನ್ಯ ಶಾಸಕರು, ತಾನು ಪ್ರತಿವರ್ಷ ಈ ಗಣೇಶೋತ್ಸವ ಕಾರ್ಯಕ್ರಮದಲ್ಲಿ ತಪ್ಪದೇ ಭಾಗವಹಿಸುತ್ತಿದ್ದು, ಇಂಡಿಯಾ ನಿವಾಸಿಗಳು ಶ್ರೀ ಗಣೇಶೋತ್ಸವವನ್ನು ಅದ್ದೂರಿಯಾಗಿ ಮಾಡುತ್ತಿರುವುದು ಸಂತಸ ತಂದಿದೆ ಎಂದು ತಿಳಿಸಿದರು. ಆ ಭಗವಂತನು ನಾಡಿಗೆ ಹಾಗೂ ಸಮಸ್ತ ಜನತೆಗೆ ಒಳಿತನ್ನು ಮಾಡಲಿ ಎಂದು ಪ್ರಾರ್ಥಿಸಿದರು.
ಈ ಸಂದರ್ಭದಲ್ಲಿ ಕರ್ನಾಟಕ ಕ್ರೀಡಾ ಪ್ರಾಧಿಕಾರದ ಉಪಾಧ್ಯಕ್ಷರು ಹಾಗೂ ಮಾಜಿ ವಿಧಾನ ಪರಿಷತ್ ಸದಸ್ಯರಾದ ಚೆಪ್ಪುಡೀರ ಅರುಣ್ ಮಾಚಯ್ಯ, ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪದಾಧಿಕಾರಿಗಳು, ಪಕ್ಷದ ಪ್ರಮುಖರು ,ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.

Exit mobile version