ಬೆಂಗಳೂರಿನ ವಿಧಾನಸೌಧ ಸಭಾಂಗಣದಲ್ಲಿ ಇಂದು ವಾಲ್ಮೀಕಿ ಜಯಂತಿ ಆಚರಿಸಲಾಯಿತು. ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆ ವಹಿಸಿದರು.
ರಾಜ್ಯ ಸರಕಾರದ ಸಚಿವರುಗಳು ಶಾಸಕರುಗಳು ಭಾಗವಹಿಸಿದ ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ಅವರು ಉಪಸಿತರಿದ್ದರು.
ಸಂಘಟನಾ ಕ್ಷೇತ್ರದಲ್ಲಿ ತಮ್ಮ ಅಮೋಘ ಕೊಡುಗೆಗಾಗಿ ರಾಜ್ಯ ಸರ್ಕಾರ ಇವರನ್ನು ಗುರುತಿಸಿ, ಈ ಸಂದರ್ಭದಲ್ಲಿ ಮಾನ್ಯ ಮುಖ್ಯಮಂತ್ರಿಗಳು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಶ್ರೀ ಎ.ಎಸ್ ಪೊನ್ನಣ್ಣ ರವರು ಪ್ರಶಸ್ತಿ ವಿತರಿಸಿದರು. ಮುತ್ತಮ್ಮರವರಿಗೆ ಅರ್ಹವಾಗಿ ಈ ಪ್ರಶಸ್ತಿಯನ್ನು ನೀಡಲೇಬೇಕೆಂದು, ಮಾನ್ಯ ಶಾಸಕರು ರಾಜ್ಯ ಸರ್ಕಾರಕ್ಕೆ ಈ ಹಿಂದೆ ಪ್ರಸ್ತಾವನೆ ಸಲ್ಲಿಸಿ ಶಿಫಾರಸ್ಸು ಮಾಡಿರುವುದು ಗಮನಾರ್ಹ.


