ಕೊಡಗು ಜಿಲ್ಲೆಯ ನಾಗರೀಕರನ್ನು ದಶಕಗಳಿಂದ ಪರಿಹಾರ ಕಾಣದೆ ಕಾಡುತ್ತಿರುವ ಪಟ್ಟೇದಾರ ಸಮಸ್ಯೆಯ ಕುರಿತು, ಕಳೆದ ವಿಧಾನಸಭಾ ಅಧಿವೇಶನದಲ್ಲಿ ಮಾನ್ಯ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರ* ಕೋರಿಕೆ ಮೇರೆಗೆ ರಚಿತವಾದ, ಕರ್ನಾಟಕ ವಿಧಾನಸಭೆ ಪರಿಶೀಲನ ಸಮಿತಿಯ 2ನೇ ಮಹತ್ವದ ಸಭೆ ಇಂದು ವಿಧಾನಸೌಧದಲ್ಲಿ ನಡೆಯಿತು. ಮಾನ್ಯ ಕಂದಾಯ ಸಚಿವರಾದ *ಶ್ರೀ ಕೃಷ್ಣ ಬೈರೇಗೌಡರವರ* ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ, ವಿರಾಜಪೇಟೆ ಶಾಸಕರಾದ ಸನ್ಮಾನ್ಯ ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ, ಕೊಡಗು ಜಿಲ್ಲಾಧಿಕಾರಿಯವರಾದ ಶ್ರೀ ವೆಂಕಟರಾಜ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.
ಹಲವು ಮಹತ್ವದ ನಿರ್ಣಯಗಳನ್ನು ಇಂದಿನ ಸಭೆಯಲ್ಲಿ ಚರ್ಚಿಸಿ ಕೈಗೊಳ್ಳಲಾಯಿತು.

Exit mobile version