
ನಾನು ಗೆದ್ದು ಚುನಾವಣಾ ನಿವೃತ್ತಿ ಪಡೆಯುತ್ತೇನೆ ಹೊರತು ಸೋತಲ್ಲ ಎಂದು ಮಾಜಿ ಸಚಿವ ಎಂಪಿ ಅಪ್ಪಚುರಂಜನ್ ಹೇಳಿದ್ದಾರೆ. *ಕೊಡಗು ಚಾನೆಲ್* ಸಂದರ್ಶನದಲ್ಲಿ ಮಾತನಾಡಿದ ಅವರು 2028ರ ವಿಧಾನಸಭಾ ಚುನಾವಣೆಗೆ ನಾನು ಮತ್ತು ಕೆಜಿ ಬೋಪಯ್ಯ ಇಬ್ಬರೂ ಸ್ಪರ್ಧೆ ಮಾಡುವುದು ಖಚಿತ ಎಂದು ಅವರು ಸಂದರ್ಶನದಲ್ಲಿ ಸ್ಪಷ್ಟಪಡಿಸಿದರು.
ಅರಣ್ಯ ಸಚಿವರು ನಿಮ್ಮಾನ್ಸ್ ನಿಂದ ಬಂದವರಂತೆ ವರ್ತಿಸುತ್ತಿದ್ದಾರೆ
CND ಲ್ಯಾಂಡ್ ಹಾಗು ಆನೆ ಮಾನವ ಸಂಘರ್ಷದ ಬಗ್ಗೆ ಮಾತನಾಡಿದ ಅವರು ರಾಜ್ಯ ಅರಣ್ಯ ಸಚಿವರು ಅಧಿಕಾರಿಗಳ ಮಾತುಗಳನ್ನು ಆಧರಿಸಿ ಹುಚ್ಚರಂತೆ ವರ್ತಿಸುತ್ತಿದ್ದಾರೆ ಎಂದು ಆರೋಪಿಸಿದ್ದಾರೆ. CND ಲ್ಯಾಂಡ್ ವಿಚಾರದಲ್ಲಿ ಜಿಲ್ಲೆಯಾದ್ಯಂತ 7000ಕ್ಕೂ ಹೆಚ್ಚು ಕುಟುಂಬಗಳು ಬೀದಿಪಾಲಗಲಿದ್ದು ರಾಜ್ಯ ಸರಕಾರದ ಅವಜ್ಯಾನಿಕ ಸರ್ವೆ ನೀತಿಯೇ ಇದಕ್ಕೆ ಕಾರಣವೆಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಜಿಲ್ಲೆಯಲ್ಲಿ ನಿರಂತರ ವನ್ಯಜೀವಿ ಮಾನವ ಸಂಘರ್ಷದಲ್ಲಿ ಕಾರ್ಮಿಕರು ಜೀವ ಕಳೆದುಕೊಳ್ಳುತ್ತಿದ್ದು ಅರಣ್ಯ ಸಚಿವರು ಕೊಡಗು ಜಿಲ್ಲೆಯನ್ನು ಮರೆತಿದ್ದಾರೆ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.
ಹೈಕಮಾಂಡ್ ಸೂಚಿಸಿದರೆ ವಿರಾಜಪೇಟೆ ಕ್ಷೇತ್ರದಲ್ಲಿ ಸ್ಪರ್ಧೆ
ಬಿಜೆಪಿ ಹೈಕಮಾಂಡ್ ಸೂಚಿಸಿದರೆ ನಾನು ವಿರಾಜಪೇಟೆ ಕ್ಷೇತ್ರದಲ್ಲಿ ಹಾಗೂ ಬೋಪಯ್ಯನವರು ಮಡಿಕೇರಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿದ್ದೇವೆ ಎಂದು ಅವರು ಹೇಳಿದ್ದಾರೆ. ಯಾವುದೇ ಕಾರಣಕ್ಕೂ ಚುನಾವಣಾ ಸ್ಪರ್ಧಾ ಕಣದಿಂದ ಹಿಂದೆ ಸರಿಯಲಾರೆ ಎಂದು ಅವರು ಸ್ಪರ್ಧೆಯ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಜಿಲ್ಲೆಯಲ್ಲಿ ಬೃಷ್ಟಾಚಾರ ತಾಂಡವವಾಡುತ್ತಿದೆ
ಕೊಡಗು ಜಿಲ್ಲೆಯಲ್ಲಿ ಈಗ ಭ್ರಷ್ಟಾಚಾರವೇ ಮೇಲುಗೈ ಸಾಧಿಸಿದ್ದು ಎರಡು ಕ್ಷೇತ್ರದಲ್ಲೂ ಅಭಿವೃದ್ಧಿಯ ಕೊರತೆ ಎದ್ದು ಕಾಣುತಿದ್ದು ಗ್ರಾಮೀಣ ಭಾಗದ ರಸ್ತೆಗಳು ಹೊಂಡಗುಂಡಿಗಳಿಂದ ದುಸ್ತರವಾಗಿದ್ದು ವಿರಾಜಪೇಟೆ ಮಡಿಕೇರಿ ರಾಜ್ಯ ಹೆದ್ದಾರಿಯ ಕಾಮಗಾರಿ ಇನ್ನು ಆರಂಭ ಮಾಡದಿರುವ ಬಗ್ಗೆ ಅವರು ಬೇಸರ ವ್ಯಕ್ತಪಡಿಸಿದರು. ಅಲ್ಲದೆ ಎಲ್ಲಾ ಕಚೇರಿಗಳಲ್ಲೂ ಭ್ರಷ್ಟಾಚಾರ ಎಲ್ಲೇ ಮೀರಿದ್ದು ಜನಸಾಮಾನ್ಯರು ಹಣ ನೀಡದೆ ಯಾವುದೇ ಕೆಲಸವಾಗುತ್ತಿಲ್ಲ ಎಂದು ಅವರು ಆರೋಪಿಸಿದ್ದಾರೆ.
ಆಡಳಿತ ವ್ಯವಸ್ಥೆಯ ವಿರುದ್ಧ ನಿರಂತರ ಹೋರಾಟ
ಜಿಲ್ಲೆಯಲ್ಲಿ ಹೆಚ್ಚಾಗುತ್ತಿರುವ ಬ್ರಸ್ಟಚಾರದ ವಿರುದ್ಧ ಬಿಜೆಪಿ ಮುಂದಿನ ದಿನಗಳಲ್ಲಿ ಹೋರಾಟ ಹಾಗೂ ಪ್ರತಿಭಟನೆಗಳನ್ನು ಹಮ್ಮಿಕೊಂಡು ಸರಕಾರವನ್ನು ಎಚ್ಚರಿಸುವ ಕೆಲಸ ಮಾಡಲಿದೆ ಎಂದರು.
ಕೊಡಗು ನ್ಯೂಸ್


