Close Menu
Kodagu News
    ಹೊಸ ಸುದ್ದಿ

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    • ಹಾರಂಗಿ ಜಲಾಶಯದಿಂದ 4 ಸಾವಿರ ಕ್ಯೂಸೆಕ್ ನೀರು ಬಿಡುಗಡೆ
    • ಹಾರಂಗಿ ಜಲಾಶಯದ ಸೇತುವೆಯಲ್ಲಿ ಪ್ರವಾಸಿಗರ ವಾಹನಗಳ ನಿಲುಗಡೆ: ಸ್ಥಳೀಯರಿಂದ ಕ್ರಮಕ್ಕೆ ಆಗ್ರಹ
    • ನೀಟ್ ವಿವಾದದ ಬೆನ್ನಲ್ಲೇ ಧರ್ಮೇಂದ್ರ ಪ್ರಧಾನ ರಾಜೀನಾಮೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಡುಗೆ ಮನೆ»ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಆನಂದ್ ಪ್ರಕಾಶ್ ಮೀನಾ
    ಅಡುಗೆ ಮನೆ

    ಜೆಜೆಎಂ ಕಾಮಗಾರಿ ಶೀಘ್ರ ಪೂರ್ಣಗೊಳಿಸಿ: ಆನಂದ್ ಪ್ರಕಾಶ್ ಮೀನಾ

    ಜಿಲ್ಲಾ ನೀರು ಮತ್ತು ನೈರ್ಮಲ್ಯ ಸಮಿತಿ ಸಭೆ

    ಮಡಿಕೇರಿ -ಬೇಸಿಗೆ ಅವಧಿಯಲ್ಲಿ ನವೋದಯ ಶಾಲೆಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಈ ಬಗ್ಗೆ ಗಮನಹರಿಸುವಂತೆ ಸಂಬಂಧಪಟ್ಟ ಅಧಿಕಾರಿಗಳು ಮತ್ತು ಎಂಜಿನಿಯರ್‍ಗೆ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಸೂಚಿಸಿದ್ದಾರೆ.
    ನಗರದ ಜಿ.ಪಂ.ಸಿಇಒ ಅವರ ಕಚೇರಿಯಲ್ಲಿ ಶುಕ್ರವಾರ ನಡೆದ ಜಲಜೀವನ್ ಮಿಷನ್ ಯೋಜನೆಯಡಿ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
    ಫೆಬ್ರವರಿಯಿಂದಲೇ ನವೋದಯ ಶಾಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಲ್ಬನಗೊಳ್ಳುವುದರಿಂದ ಪರೀಕ್ಷೆ ಅವಧಿಯಲ್ಲಿ ವಿದ್ಯಾರ್ಥಿಗಳಿಗೆ ತೊಂದರೆಯಾಗಲಿದೆ. ಆದ್ದರಿಂದ ಕುಡಿಯುವ ನೀರು ಪೂರೈಕೆ ಸಂಬಂಧ ಎಚ್ಚರವಹಿಸುವಂತೆ ಸಿಇಒ ಅವರು ಸೂಚಿಸಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಕೂಟುಹೊಳೆಯಿಂದ ಪೂರೈಕೆಯಾಗುವ ಮಾರ್ಗದಲ್ಲಿ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ನವೋದಯ ಶಾಲೆಗೂ ಕುಡಿಯುವ ನೀರು ಪೂರೈಸುವಂತೆ ನಗರಸಭೆಗೆ ಮನವಿ ಮಾಡಲಾಗಿದೆ ಎಂದು ಮಾಹಿತಿ ನೀಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ನಗರಾಭಿವೃದ್ಧಿ ಯೋಜನಾ ಶಾಖೆಯ ಯೋಜನಾ ನಿರ್ದೇಶಕರಾದ ಬಿ.ಬಸಪ್ಪ ಅವರು ಈ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರುವುದರ ಜೊತೆಗೆ ನಗರಸಭೆ ಸಾಮಾನ್ಯ ಸಭೆಯಲ್ಲೂ ಚರ್ಚಿಸಿ ಮುಂದಿನ ಕ್ರಮವಹಿಸಬಹುದಾಗಿದೆ ಎಂದು ಅವರು ಸಲಹೆ ಮಾಡಿದರು.
    ಈ ಸಂದರ್ಭದಲ್ಲಿ ಮಾತನಾಡಿದ ಜಿ.ಪಂ.ಸಿಇಒ ಆನಂದ್ ಪ್ರಕಾಶ್ ಮೀನಾ ಅವರು ಜಿಲ್ಲಾಧಿಕಾರಿ ಅವರ ಜೊತೆ ಚರ್ಚಿಸಲಾಗುವುದು ಎಂದು ಅವರು ಹೇಳಿದರು.
    ನವೋದಯ ಶಾಲೆಯ ಪ್ರಾಂಶುಪಾಲರಾದ ಸಿ.ವಿ.ಪ್ರಮೀಳಾ ಅವರು ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದ್ದು, ಕುಡಿಯುವ ನೀರು ಪೂರೈಕೆಗೆ ಸಹಕರಿಸಬೇಕಾಗಿ ಕೋರಿದರು.
    ‘ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಕಾರ್ಯಪಾಲಕ ಎಂಜಿನಿಯರ್ ಆರ್.ಭಾಸ್ಕರ್ ಅವರು ಮಾತನಾಡಿ ಜಿಲ್ಲೆಯ 457 ಜನವಸತಿ ಪ್ರದೇಶದಲ್ಲಿ ಜೆಜೆಎಂ ಯೋಜನೆಯಡಿ ಕುಡಿಯುವ ನೀರು ಪೂರೈಸಲು ಮುಂದಾಗಲಾಗಿದೆ. ಇದರಲ್ಲಿ 352 ಕಾಮಗಾರಿ ಪೂರ್ಣಗೊಂಡಿದ್ದು, 179 ಜನವಸತಿ ಪ್ರದೇಶದಲ್ಲಿನ ಕಾಮಗಾರಿಯನ್ನು ಗ್ರಾಮ ಪಂಚಾಯತ್‍ಗೆ ಈಗಾಗಲೇ ಪ್ರಯೋಗಿಕವಾಗಿ ಚಾಲನೆ ನೀಡಿ ಹಸ್ತಾಂತರಿಸಲಾಗಿದೆ. ಉಳಿದ ಕಾಮಗಾರಿಗಳು ಪ್ರಗತಿಯಲ್ಲಿದೆ ಎಂದು ಅವರು ವಿವರಿಸಿದರು.’
    ಜಿಲ್ಲೆಯ ಗ್ರಾಮೀಣ ಪ್ರದೇಶದ ಅಂಗನವಾಡಿ, ಶಾಲಾ ಕಾಲೇಜುಗಳು, ಆರೋಗ್ಯ ಕೇಂದ್ರಗಳು ಸೇರಿದಂತೆ ವಿವಿಧ ಸರ್ಕಾರಿ ಕಚೇರಿಗಳು ಸೇರಿದಂತೆ ಎಲ್ಲೆಡೆ ಜಲಜೀವನ್ ಮಿಷನ್ ಯೋಜನೆ ತಲುಪಬೇಕು. ಆ ನಿಟ್ಟಿನಲ್ಲಿ ಜಲಜೀವನ್ ಯೋಜನೆಯಡಿ ‘ನಲ್ಲಿ ನೀರು’ ಸಂಪರ್ಕ ಹೊಂದಬೇಕು ಎಂದು ಜಿ.ಪಂ.ಸಿಇಒ ಅವರು ಹೇಳಿದರು.
    ಯಾವುದೇ ಸರ್ಕಾರಿ ಸಂಸ್ಥೆಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಬಾರದು. ಆ ನಿಟ್ಟಿನಲ್ಲಿ ಕ್ರಮವಹಿಸುವಂತೆ ಸೂಚಿಸಿದರು.
    ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಿದ್ದಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಎಂಜಿನಿಯರ್ ಅವರ ಗಮನಕ್ಕೆ ತರುವಂತಾಗಬೇಕು ಎಂದು ಆನಂದ್ ಪ್ರಕಾಶ್ ಮೀನಾ ಅವರು ನಿರ್ದೇಶನ ನೀಡಿದರು.
    ಜಲಜೀವನ್ ಮಿಷನ್ ಯೋಜನಾ ಕಾಮಗಾರಿ ಸಂಬಂಧಿಸಿದಂತೆ ಮಾಹಿತಿ ಪಡೆದ ಜಿ.ಪಂ.ಸಿಇಒ ಅವರು ಬಾಕಿ ಇರುವ ಕಾಮಗಾರಿಗಳನ್ನು ಫೆಬ್ರುವರಿ ಅಂತ್ಯದೊಳಗೆ ಪೂರ್ಣಗೊಳಿಸುವಂತೆ ನಿರ್ದೇಶನ ನೀಡಿದರು.
    ಮಡಿಕೇರಿ ತಾಲ್ಲೂಕಿನ 9 ಶಾಲೆಗಳಲ್ಲಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯ ಇದ್ದು, ನಲ್ಲಿ ನೀರು ಸಂಪರ್ಕ ಕಲ್ಪಿಸಬೇಕಿದೆ ಎಂದು ಶಾಲಾ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರಾದ ಬಸವರಾಜು ಅವರು ಹೇಳಿದರು.
    ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯಿತಿಗಳಲ್ಲಿ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿಯನ್ನು ಅಳವಡಿಸಿ ಒ ಮತ್ತು ಎಂ ಹಾಗೂ ನೀರಿನ ಆಯವ್ಯಯ ಸಿದ್ದಪಡಿಸಿ ಕೇಂದ್ರ ಕಚೇರಿಗೆ ಸಲ್ಲಿಸುವುದು. ಜೊತೆಗೆ ನೀರು ಮತ್ತು ನೈರ್ಮಲ್ಯ(ವಿಡಬ್ಲ್ಯುಎಸ್‍ಸಿ) ಬ್ಯಾಂಕ್ ಖಾತೆಗೆ ನೀರಿನ ಕರ ಜಮೆ ಮಾಡುವುದು ಹಾಗೂ ಫಲಾನುಭವಿಗಳ ಆಧಾರ್ ಕಾರ್ಡ್ ನಮೂದಿಸುವಂತೆ ಜಿ.ಪಂ.ಸಿಇಒ ಅವರು ಸಲಹೆ ಮಾಡಿದರು.
    ಸ್ವಚ್ಛಭಾರತ್ ಮಿಷನ್ ಯೋಜನೆಯಡಿ ಗ್ರಾ.ಪಂ.ವ್ಯಾಪ್ತಿಗಳಲ್ಲಿ ಸ್ವಚ್ಚತೆಗೆ ಒತ್ತು ನೀಡಬೇಕು. ಆ ನಿಟ್ಟಿನಲ್ಲಿ ಕಸವಿಲೇವಾರಿ ಘಟಕ ನಿರ್ಮಾಣ, ಪ್ಲಾಸ್ಟಿಕ್ ಬಳಸದಂತೆ ಅರಿವು ಮೂಡಿಸುವುದು ಮತ್ತಿತರ ಬಗ್ಗೆ ಅಗತ್ಯ ಕ್ರಮಕೈಗೊಳ್ಳುವಂತೆ ಸೂಚಿಸಿದರು.
    ಕೃಷಿ ಇಲಾಖೆಯ ಜಂಟಿ ನಿರ್ದೇಶಕರಾದ ಚಂದ್ರಶೇಖರ್, ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ವೀರೇಂದ್ರ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆರ್‍ಸಿಎಚ್ ಅಧಿಕಾರಿ ಡಾ.ಮಧುಸೂದನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ಪ್ರಸನ್ನಕುಮಾರ್, ಡಿಪಿಎಂ ಪುಟ್ಟಸ್ವಾಮಿ, ಸಹಾಯಕ ಎಂಜಿನಿಯರ್, ಕಿರಿಯ ಎಂಜಿನಿಯರ್‍ಗಳು, ಕಾಮಗಾರಿ ಗುಣಮಟ್ಟ ತಪಾಸಣಾ ಸಂಸ್ಥೆಯ ಎಂಜಿನಿಯರ್‍ಗಳು ಇತರರು ಇದ್ದರು.

    Previous Articleಟಿಪ್ಪರ್ ವಾಹನದ ಹಿಂಬದಿಗೆ ಅಪ್ಪಳಿಸಿದ ಬೊಲೆರೋ ಜೀಪ್ – ಪ್ರಯಾಣಿಕರಿಗೆ ಗಾಯ
    Next Article ಸುರಕ್ಷಿತ ಸಹಜ ಹೆರಿಗೆ ರಾಜ್ಯಮಟ್ಟದಲ್ಲಿ ಕೊಡಗು ಜಿಲ್ಲೆಗೆ ಎರಡನೇ ಸ್ಥಾನ

    Related Posts

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ

    July 26, 2026

    ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ

    July 26, 2026

    ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ

    July 26, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.