Close Menu
Kodagu News
    ಹೊಸ ಸುದ್ದಿ

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ರಾಫೇಲ್ಸ್ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ
    ಜಿಲ್ಲೆ

    ನಾಪೋಕ್ಲು ರಾಫೇಲ್ಸ್ ಕಾಲೇಜಿನ ವಾರ್ಷಿಕೋತ್ಸವ ಸಂಭ್ರಮ

    ನಾಪೋಕ್ಲು ಬಳಿಯ ಹೊದವಾಡ ಗ್ರಾಮದ ರಾಫೆಲ್ಸ್ ಅಂತರಾಷ್ಟ್ರೀಯ ಪ.ಪೂ. ಕಾಲೇಜು ವಾರ್ಷಿಕೋತ್ಸವ ಸಂಭ್ರಮ – ಆಧುನಿಕ ಯುಗ ನೈಸರ್ಗಿಕ ಜಗತ್ತು ಮರೆತು ಎಐ ತಂತ್ರಜ್ಞಾನದತ್ತ ಮುಖಮಾಡುತ್ತಿರುವುದು ದುಃಖಕರ -ವಕೀಲ ಬಾಲಸುಬ್ರಹ್ಮಣ್ಯ ಅಭಿಪ್ರಾಯ

     

     

     

     

     

    ವರದಿ:ಝಕರಿಯ ನಾಪೋಕ್ಲು

     

    ನಾಪೋಕ್ಲು : ಇತ್ತೀಚಿನ ದಿನಗಳಲ್ಲಿ ಆಧುನಿಕ ಯುಗ ನೈಸರ್ಗಿಕ ಜಗತ್ತು ಬದಲಾವಣೆಗೊಂಡು ಎಐ ತಂತ್ರಜ್ಞಾನದತ್ತ ಮುಖ ಮಾಡುತ್ತಿರುವುದು ದುಃಖಕರ, ಮುಂದಿನ ದಿನಗಳಲ್ಲಿ ಎಐ ತಂತ್ರಜ್ಞಾನವು ಮಾನವನನ್ನು ಆಳುವುದರಲ್ಲಿ ಸಂಶಯವಿಲ್ಲವೆಂದು ಮಡಿಕೇರಿಯ ಹಿರಿಯ ವಕೀಲರಾದ ಕೆ.ಪಿ. ಬಾಲಸುಬ್ರಹ್ಮಣ್ಯ ಅವರು ಅಭಿಪ್ರಾಯಪಟ್ಟರು.

     

    ನಾಪೋಕ್ಲು ಬಳಿಯ ಹೊದವಾವಾಡ ಗ್ರಾಮದ ರಾಫೆಲ್ಸ್ ಇಂಟರ್ನ್ಯಾಷನಲ್ ಇಂಗ್ಲಿಷ್ ಶಾಲೆ ಮತ್ತು ಪಿ.ಯು ಕಾಲೇಜಿನ ವಾರ್ಷಿಕೋತ್ಸವ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಅವರು ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳು ಪ್ರತಿಯೊಂದು ಪರೀಕ್ಷೆಗೂ ಮುನ್ನ ಮೊಬೈಲ್ ಅವಲಂಬಿಸಿರುವುದು ವಿಷಾದನೀಯ. ಮಾನವನು ಪ್ರತಿಯೊಂದು ವಿಷಯ ತಿಳಿಯಬೇಕಾದರು ಗೂಗಲ್ ನಲ್ಲಿ ಹುಡುಕುವುದು ಕಂಡು ಬರುತ್ತಿದೆ. ಜಗತ್ತು ಎಐ ತಂತ್ರಜ್ಞಾನದತ್ತ ಮುಖ ಮಾಡಿರುವುದು ದೊಡ್ಡ ವಿಪರ್ಯಾಸ. ಮನುಷ್ಯನೇ ಇದಕ್ಕೆ ಅವಕಾಶ ಕಲ್ಪಿಸಿದ್ದಾನೆ. ಇತ್ತೀಚಿನ ದಿನಗಳಲ್ಲಿ ತಂತ್ರಜ್ಞಾನವಿಲ್ಲದಿದ್ದರೆ ಮಾನವನು ಶೂನ್ಯವಾಗಿ ಬಿಡುತ್ತಾನೆ. ತಂತ್ರಜ್ಞಾನವನ್ನು ಕಂಡುಹಿಡಿದಿರುವುದು ನಮ್ಮ ಬಳಕೆಗೋಸ್ಕರ ಹೊರೆತು ನಮ್ಮನ್ನು ಆಳುವುದಕಲ್ಲ. ಮೊಬೈಲ್ ನಮ್ಮ ಜೀವನಕ್ಕೆ ಅವಶ್ಯಕತೆ ಇದೆ ಆದರೆ ಜೀವನವೇ ಮೊಬೈಲ್ ಆಗಬಾರದು. ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಕೆ ಮಾಡುವ ಮೂಲಕ ಶಿಕ್ಷಣದ ಕಡೆ ಹೆಚ್ಚು ಆಸಕ್ತಿಯನ್ನು ತೋರಿ ಜೀವನದಲ್ಲಿ ಉತ್ತಮ ಭವಿಷ್ಯವನ್ನು ನಿರ್ಮಾಣ ಮಾಡಬೇಕೆಂದು ವಿದ್ಯಾರ್ಥಿಗಳಿಗೆ ಕಿವಿಮಾತು ಹೇಳಿದರು.

     

    ಮಡಿಕೇರಿ ಎಫ್ ಎಂ ಸಿ ಕಾಲೇಜಿನ ಪ್ರಾಣಿಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ. ಎಂ.ಪಿ.ಕೃಷ್ಣ ಅವರು ಮಾತನಾಡಿ ಪೋಷಕರು ಮೊಬೈಲ್ ಫೋನ್ ನೀಡದೆ ಪರಿಸರ ಸ್ನೇಹಿಯಾಗಿ ಮಕ್ಕಳನ್ನು ಬೆಳೆಸಬೇಕು. ಮೊಬೈಲ್ ರೇಡಿಯೇಶನ್ ನಿಂದ ಕ್ಯಾನ್ಸರ್, ಗರ್ಭಕೋಶದ ತೊಂದರೆ, ಹಾಗೆ ಗಂಡು ಮಕ್ಕಳಿಗೆ ಹೃದಯಘಾತದ ತೊಂದರೆ ಸೇರಿದಂತೆ ವಿವಿಧ ಆರೋಗ್ಯ ಸಮಸ್ಯೆ ನಿದ್ರಾಹೀನತೆ ಇವುಗಳೆಲ್ಲ ಕಾಣಿಸಿಕೊಳ್ಳುತ್ತಿರುವುದು ಮೊಬೈಲ್ ಬಳಕೆಯಿಂದ ಉಂಟಾಗುವ ದುಷ್ಪರಿಣಾಮಗಳಾಗಿದೆ. ಮೊಬೈಲ್ ಬಳಕೆಯನ್ನು ಕಡ್ಡಾಯವಾಗಿ ವಿದ್ಯಾರ್ಥಿಗಳು ಮಿತವಾಗಿ ಬಳಸಬೇಕು. ಗ್ರಾಮಾಂತರ ಪ್ರದೇಶದಲ್ಲಿರುವ ಈ ಶಾಲೆ ಶೇಕಡ 100ರಷ್ಟು ಫಲಿತಾಂಶವನ್ನು ಪಡೆದಿರುವುದು ಶ್ಲಾಘನೀಯ. ಸಂಸ್ಥೆಯನ್ನು ಬೆಳೆಸಲು ಪೋಷಕರ ಸಹಕಾರ ಅಗತ್ಯ ಹಾಗೆ ವಿದ್ಯಾರ್ಥಿಗಳು ದಿನನಿತ್ಯ ಶಾಲೆಗೆ ಹಾಜರಾಗಿ ಶಾಲೆಯ ಹೆಸರನ್ನು ಎತ್ತರಕ್ಕೆ ಬೆಳೆಸಿ ಗುರುತಿಸಿಕೊಳ್ಳಬೇಕಾಗಿದೆ ಎಂದರು.

     

    ಕರ್ನಾಟಕ ರಾಜ್ಯ ಪ್ರೌಢಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷರಾದ ಎನ್. ಕೆ. ಮೆಹಬೂಬ್ ಸಾಬ್ ಅವರು ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ ಕಲಾವಿಭಾಗ ವಾಣಿಜ್ಯವಿಭಾಗ, ವಿಜ್ಞಾನ ವಿಭಾಗಗಳಿಂದ ಪ್ರಾರಂಭವಾದ ಈ ಕಾಲೇಜು 9ವರ್ಷವನ್ನು ಯಶಸ್ಸಿನಿಂದ ಪೂರೈಸುತ್ತಾ ಬಂದಿದೆ.ಈ ಕಾಲೇಜಿನ ವಿದ್ಯಾರ್ಥಿಗಳು ಹೆಚ್ಚು ಅಂಕ ಪಡೆದು ಸಾಧನೆ ಮಾಡುತ್ತಿದ್ದಾರೆ.ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲೂ ಕೂಡ ಪಾಲ್ಗೊಂಡು ಸಾಧನೆಮಾಡುತ್ತಾ ಬರುತ್ತಿರುವುದು ಶ್ಲಾಘನೀಯ. ಒಬ್ಬೊಬ್ಬರು ಒಂದೊಂದು ಹಂತದಲ್ಲಿಯೂ ಮುನ್ನುಗ್ಗಿ ಸಾಧನೆಗೆಯ್ಯಬೇಕೆಂಬುದೇ ನಮ್ಮ ಆಶಯವಾಗಿದ್ದು ಮಕ್ಕಳ ಭವಿಷ್ಯ ನಿರ್ಮಾಣಕ್ಕೆ ಪೋಷಕರು ಎಲ್ಲ ರೀತಿಯಲ್ಲಿ ಸಹಕಾರ ನೀಡಬೇಕೆಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

     

    ಕಾರ್ಯಕ್ರಮದಲ್ಲಿ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅತ್ಯುತ್ತಮ ಹಂಕಗಳಿಸಿದ ವಿದ್ಯಾರ್ಥಿಗಳಿಗೆ, ವಾರ್ಷಿಕೋತ್ಸವದ ಪ್ರಯುಕ್ತ ನಡೆಸಿದ ವಿವಿಧ ಕಾರ್ಯಕ್ರಮಗಳ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಪೋಷಕರ ದಿನಾಚರಣೆಯ ಪ್ರಯುಕ್ತ ನಡೆದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಪೋಷಕರಿಗೆ ಕೂಡ ಕಾರ್ಯಕ್ರಮದಲ್ಲಿ ಗಣ್ಯರು ಬಹುಮಾನ ವಿತರಿಸಿದರು. ಬಳಿಕ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ನಡೆದ ವಿವಿಧ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ನೋಡುಗರನ್ನು ರಂಜಿಸಿತು. ಕಾಲೇಜಿನ ಪ್ರಾಂಶುಪಾಲರಾದ ಪಿ. ಜಿ.ಕಲಾವತಿ ಯವರು ಶಾಲೆ ಮತ್ತು ಕಾಲೇಜಿನ ವಾರ್ಷಿಕ ವರದಿ ವಾಚಿಸಿದರು.

    ವೇದಿಕೆಯಲ್ಲಿ ಕಾಲೇಜಿನ ಆಡಳಿತ ಮಂಡಳಿ ಉಪಾಧ್ಯಕ್ಷರಾದ ಹರಿಶ್ಚಂದ್ರ ಹಂಸ, ಹೊದ್ದೂರು ಗ್ರಾಮ ಪಂಚಾಯಿತಿ ಸದಸ್ಯ ಮೊಯ್ದುಕೊಟ್ಟಮುಡಿ, ಶಾಲೆಯ ಉಪನ್ಯಾಸಕ ಹಾಗೂ ಶಿಕ್ಷಕ ವೃಂದ, ಪೋಷಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

    ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿ ರಿಶಾನ ಸಂಗಡಿಗರು ಪ್ರಾರ್ಥಿಸಿದರು. ವಿದ್ಯಾರ್ಥಿಗಳಾದ ಹುಸೈನ್ ಹಬೀಬ್ ಮೆಕ್ಕಿ ಹಾಗೂ ಹನ್ನತ್ ನಿರೂಪಿಸಿದರು. ಶಿಕ್ಷಕಿಯರಾದ ಪರ್ವೀನ್ ಸಲೀಂ ಸ್ವಾಗತಿಸಿ,ಫಜಿಶಾ ಸರ್ವರನ್ನು ವಂದಿಸಿದರು.

    Previous Articleಹೊಸ ವರ್ಷದ ಪ್ರಯುಕ್ತ ಕಕ್ಕಬ್ಬೆ ನಾಲಾಡಿ ಸರ್ಕಾರಿ ಶಾಲೆ ವಿದ್ಯಾರ್ಥಿಗಳಿಗೆ ಗ್ರಾಮಸ್ಥರಿಂದ ಟ್ರ್ಯಾಕ್ ಸೂಟ್ ಕೊಡುಗೆ
    Next Article ಅನೈತಿಕ ಸಂಭಂದ ಜೀವವನ್ನು ಬಲಿಪಡೆಯಿತೆ….!

    Related Posts

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026

    ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ

    July 29, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026

    ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ

    July 30, 2026

    ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.