ಗೋಣಿಕೊಪ್ಪ ಹಾತೂರು ಸಮೀಪ ಬೈಕ್ -ಲಾರಿ ನಡುವೆ ಅಪಘಾತ-ಚಿಕಿತ್ಸೆ ಫಲಿಸದೆ ಗೋಣಿಕೊಪ್ಪ ಲೋಪಮುದ್ರ ಆಸ್ಪತ್ರೆ ಯಲ್ಲಿ ಸವಾರ ಮೃತ್ಯು

ಬೆಕ್ಕೆಸುಡ್ಲೂರು ನಿವಾಸಿ ಸುಳ್ಳಿಮಾಡ ಭಜನ್ ದೇವಯ್ಯ (27)ಮೃತ ದುರ್ದೈವಿ ಸವಾರ ಎಂದು ತಿಳಿದು ಬಂದಿದೆ.

ಕೊಡಗಿನಿಂದ ಕೇರಳಕ್ಕೆ ಕೊಡಗು ರೈಡರ್ಸ್ ಕ್ಲಬ್ ವತಿಯಿಂದ ಆಯೋಜಿಸಲಾಗಿದ್ದ ಯಾತ್ರೆಯಲ್ಲಿ ಪಾಲ್ಗೊಂಡು ಕೇರಳದಿಂದ ಇಂದು ಸಂಜೆ ವಾಪಸಾಗುತ್ತಿದ್ದಾಗ ರಾತ್ರಿ 8:20ರ ಸಮಯದಲ್ಲಿ ಹಾತೂರಿನ ವನಭದ್ರಕಾಳಿ ದೇವಸ್ಥಾನದ ಸಮೀಪ ಕಾರು ಒಂದನ್ನು ಓವರ್ಟೇಕ್ ಮಾಡಿ ಮುನ್ನುಗುತ್ತಿದ್ದಾಗ ಮುಂಭಾಗದಲ್ಲಿ ಬಂದ ಲಾರಿಗೆ ಡಿಕ್ಕಿ ಪಡಿಸಿದ್ದಾನೆ ಎಂದು ಹೇಳಲಾಗಿದೆ.

ಮೃತ ಯುವಕನ ತಂದೆ ಕಳೆದ ಮೂರು ವರ್ಷಗಳ ಹಿಂದೆ ಬೆಕ್ಕೆಸುಡ್ಲೂರಿನಲ್ಲಿ ತನ್ನ ಮಗಳ ಮದುವೆಯ ಸಂದರ್ಭದಲ್ಲಿ ಅಪಘಾತಕಿಡಾಗಿ ಮೃತಪಟ್ಟಿದ್ದರು.

ನಂತರ ಮೃತನ ತಾಯಿ ಕೂಡ ಗೋಣಿಕೊಪ್ಪಲಿನಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿಪಡಿಸಿ ಮೃತಪಟ್ಟಿದ್ದರು.

ಯುವಕ ಅವಿವಿವಾಹಿತಾನಾಗಿದ್ದ ಇದೀಗ ಇವರ ಕುಟುಂಬದಲ್ಲಿ ವಿವಾಹವಾದ ಇಬ್ಬರು ಸಹೋದರಿಯರು ಮಾತ್ರವಿದ್ದಾರೆ.

ಮೃತ ಯುವಕ ಬೆಕ್ಕೆಸುಡ್ಲೂರಿನಲ್ಲಿ 12 ಏಕರಿಗಿಂತಲೂ ಹೆಚ್ಚು ಕಾಫಿ ತೋಟ ಹಾಗೂ ಗದ್ದೆ ಹೊಂದಿದ್ದು, ಸ್ವತಹ ತಾನೆ ಮುಂದೆ ನಿಂತು ಅಂದಾಜು 60 ಎಕರೆ ಗದ್ದೆಯಲ್ಲಿ ಈ ಬಾರಿ ಬತ್ತವನ್ನು ಬೆಳೆದಿದ್ದನ್ನು ಎಂದು ಹೇಳಲಾಗಿದೆ.

ಇದೀಗ ಲೋಪಮುದ್ರ ಆಸ್ಪತ್ರೆಯಲ್ಲಿ ಮೃತ ದೇಹವಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ನಾಳೆ ಅಂತಿಮ ಸಂಸ್ಕಾರ ನೆರವೇರಿಸಲಾಗುವುದು ಎಂದು ಕುಟುಂಬ ಮೂಲಗಳು ತಿಳಿಸಿವೆ.

ಗೋಣಿಕೊಪ್ಪಲು ಪೊಲೀಸರು ಪ್ರಕರಣ ದಾಖಲಿಸಿಕೊಂಡು, ಲಾರಿಯನ್ನು ವಶಕ್ಕೆ ಪಡೆದು ಮುಂದಿನ ಕ್ರಮಕೈಗೊಂಡಿದ್ದಾರೆ.

Exit mobile version