ಜ.17 ಮತ್ತು 18 ರಂದು ಗ್ಯಾರಂಟಿ ಯೋಜನೆಗಳ ರಾಜ್ಯ ಅನುಷ್ಠಾನ ಸಮಿತಿ ರಾಜ್ಯ ಉಪಾಧ್ಯಕ್ಷರ ಕೊಡಗು ಜಿಲ್ಲಾ ಪ್ರವಾಸ

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ರಾಜ್ಯ ಉಪಾಧ್ಯಕ್ಷರಾದ ಎಸ್.ಆರ್.ಮೆಹರೋಜ್ ಖಾನ್ ಅವರು ಜನವರಿ, 17 ಮತ್ತು 18 ರಂದು ಕೊಡಗು ಜಿಲ್ಲಾ ಪ್ರವಾಸ ಕಾರ್ಯಕ್ರಮ ಹಮ್ಮಿಕೊಂಡಿದ್ದಾರೆ.

ಮಾನ್ಯ ಉಪಾಧ್ಯಕ್ಷರು ಜನವರಿ, 17 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ವುಡ್ ಸ್ಟಾಕ್ ರೆಸಾರ್ಟ್‍ನಲ್ಲಿ ಕೊಡಗು ಪತ್ರಕರ್ತರ ಸಂಘ ಆಯೋಜಿಸಿರುವ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.

ಜನವರಿ, 18 ರಂದು ಬೆಳಗ್ಗೆ 10 ಗಂಟೆಗೆ ನಗರದ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯುವ ಕೊಡಗು ಜಿಲ್ಲಾ ಪತ್ರಕರ್ತರ ಸಂಕ್ರಾಂತಿ ಕ್ರಿಕೆಟ್ ಸಂಭ್ರಮ ಉದ್ಘಾಟನಾ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಉಪಾಧ್ಯಕ್ಷರ ಆಪ್ತ ಕಾರ್ಯದರ್ಶಿ ಅವರು ತಿಳಿಸಿದ್ದಾರೆ.

Exit mobile version