Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ
    • ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ
    • ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ
    • ಬದುಕಿನುದ್ದಕ್ಕೂ ಸಿದ್ಧಾಂತದ ಜೊತೆ ರಾಜಿಯಿಲ್ಲದ ರಾಜಕಿಯ:ಒಲಿಯುವುದೇ ಜಿಲ್ಲಾಧ್ಯಕ್ಷ ಸ್ಥಾನ
    • ಮಂಗಳೂರು–ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಮರ ಬಿದ್ದು ಸಂಚಾರಕ್ಕೆ ಅಡ್ಡಿ
    • ಭಾರೀ ಗಾಳಿ ಮಳೆಗೆ ಮರ ಉರುಳಿ ಇಬ್ಬರು ಮಹಿಳಾ ಕಾರ್ಮಿಕರ ದುರ್ಮರಣ
    • ಮಡಿಕೇರಿ ವ್ಯಾಪ್ತಿಯಲ್ಲಿ ಭಾರಿ ಮಳೆ: ಸಂಜೆಯಿಂದ ಬಿಡುವಿಲ್ಲದೆ ಸುರಿಯುತ್ತಿರುವ ವರುಣ
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೀಡೆ»ಪತ್ರಕರ್ತರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಗೆ ಮಡಿಕೇರಿಯಲ್ಲಿ ಚಾಲನೆ
    ಕ್ರೀಡೆ

    ಪತ್ರಕರ್ತರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಗೆ ಮಡಿಕೇರಿಯಲ್ಲಿ ಚಾಲನೆ

    ಪತ್ರಕರ್ತರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಗೆ ಮಡಿಕೇರಿಯಲ್ಲಿ ಚಾಲನೆ.

    ಪತ್ರಕರ್ತರು ಸಮಾಜದ ಕೇಂದ್ರ ಬಿಂದು. – ಶಾಸಕ ಎ. ಎಸ್ ಪೊನ್ನಣ್ಣ ಶ್ಲಾಘನೆ.

    ಮಡಿಕೇರಿ ಜ 18-

    ಸುದ್ದಿ-ಸಂದೇಶ ರವಾನೆಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ಪ್ರತಿದಿನವೂ ಕಾರ್ಯನಿರತವಾಗಿರುವ ಪತ್ರಕರ್ತರ ಅರೋಗ್ಯ ಹಾಗೂ ಮನರಂಜನೆಗೆ ಕ್ರೀಡೆ ತುಂಬಾ ಮುಖ್ಯವಾಗಿದೆ ಎಂದು ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಮತ್ತು ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಎ.ಎಸ್ ಪೊನ್ನಣ್ಣ ಪತ್ರಕರ್ತರ ಸಂಕ್ರಾಂತಿ ಸಂಭ್ರಮ ಕ್ರಿಕೆಟ್ ಪಂದ್ಯಾವಳಿಯನ್ನು ಮಡಿಕೇರಿಯ ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾoಗಣದಲ್ಲಿ ಕ್ರಿಕೆಟ್ ಆಡುವ ಮೂಲಕ ಉದ್ಘಾಟಿಸಿ ಹೇಳಿದರು

     

    ಪತ್ರಕರ್ತರು ಸಮಾಜದ ಕೇಂದ್ರಬಿಂದು. ಪತ್ರಕರ್ತರಿಂದಲೇ ದೇಶ-ವಿದೇಶದಲ್ಲಾಗುವ ವಿವಿಧ ಬದಲಾವಣೆಗಳು ವಿಷಯ-ವಿನಿಮಯ ತಿಳಿಯುತ್ತದೆ, ಪತ್ರಕರ್ತರು ಪತ್ರಕರ್ತರಿಗಿರುವ ಮೂಲಭೂತ ಹಕ್ಕುಗಳನ್ನು ಸರಿಯಾದ ಮಾರ್ಗದಲ್ಲಿ ಬಳಸಿಕೊಳ್ಳಬೇಕು ಎಂದು ಅವರು ಕರೆ ನೀಡಿದರು.

     

    ಸುಸ್ಥಿತಿಯ ಸಮಾಜ ನಿರ್ಮಾಣಕ್ಕೆ ಪತ್ರಕರ್ತರ ಕೊಡುಗೆ ಅಪಾರವಾದುದು. ಅಂತೆಯೇ ಆರ್ಥಿಕ,ಸಾಮಾಜಿಕ, ರಾಜಕೀಯ ಕ್ಷೇತ್ರದಲ್ಲಿ ಕೂಡ ಪತ್ರಕರ್ತರದ್ದು ಮುಖ್ಯ ಪಾತ್ರ ಎಂದು ಪತ್ರಕರ್ತರನ್ನು ಉದ್ದೇಶಿಸಿ ಪೊನ್ನಣ್ಣ ನುಡಿದರು.

     

    ಪತ್ರಕರ್ತರು ಸಮಾಜವನ್ನು ತಿದ್ದುವ ಮಹತ್ವದ ಜವಾಬ್ದಾರಿ ಯನ್ನು ನಿಭಾಯಿಸುತ್ತಿದ್ದು ಪತ್ರಕರ್ತರ ಕ್ಷೇಮದ ಬಗ್ಗೆ ಸಮಾಜದ ಜನತೆ ಕಾಳಜಿ ವಹಿಸಬೇಕು ಎಂದು ಪೊನ್ನಣ್ಣ ಕರೆ ನೀಡಿದರು.

     

    ರಾಜ್ಯ ಸರಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ಮೆಹರೋಜ್ ಖಾನ್ ರವರು ಕೊಡಗು ಪತ್ರಕರ್ತರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಕೊಡಗಿನಲ್ಲಿ ಹಲವಾರು ಧರ್ಮಗಳು ಇದ್ದು ಇವುಗಳ ನಡುವೆ ಮನೆ ಮನೆಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಿ ಕ್ರೀಡೆ ಕೂಡ ಒಂದು ಧರ್ಮವಾಗಿ ಸಹಬಾಳ್ವೆಯ ಸಂಕೇತವಾಗಿರುವದು ನಮ್ಮ ಜಿಲ್ಲೆಯ ಸೊಬಗು ಎಂದು ಬಣ್ಣಿಸಿದರು.

     

    ವಿಧಾನ ಪರಿಷತ್ ಸದಸ್ಯರಾದ ಸುಜಾಕುಶಾಲಪ್ಪ ಮಾತನಾಡಿ

    ಜೀವದ ಹಂಗು ತೊರೆದು ಸಮಾಜದ ಒಳಿತಿಗಾಗಿ ಶ್ರಮಿಸುವವರು ಪತ್ರಕರ್ತರಾಗಿದ್ದು ಅವರ ಸಂಕಷ್ಟಕ್ಕೆ ಸ್ಪಂದಿಸುವುದು ಪ್ರತಿಯೊಬ್ಬ ನಾಗರಿಕರ ಕರ್ತವ್ಯ ಎಂದು ತಿಳಿಸಿದರು.

    ಕೆಲವು ಪತ್ರಕರ್ತರು ಬ್ಲಾಕ್ ಮೇಲ್ ಮಾಡುವ ಮೂಲಕ

    ಪತ್ರಿಕಾರಂಗಕ್ಕೆ ಅಪಮಾನ ಮಾಡುತ್ತಿರುವುದು ವಿಷಾದನೀಯ ಎಂದು ಹೇಳಿದರು.

     

    ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್. ಆರ್. ಮೆಹರೋಜ್ ಖಾನ್ ಮಾತನಾಡಿ, ಪತ್ರ ಕರ್ತರು ಸದಾ ಒತ್ತಡದ ಬದುಕಿನಲ್ಲಿ ಇರುತ್ತಾರೆ. ಸುದ್ದಿ ಸಂಗ್ರಹಿಸುವ ಧಾವಂತ ಕೂಡ ಅವರಲ್ಲಿದೆ. ಈ ನಿಟ್ಟಿನಲ್ಲಿ ಆರೋಗ್ಯದತ್ತ ಪತ್ರಕರ್ತರು ಗಮನ ನೀಡಬೇಕೆಂದು ಅವರು ಕಿವಿ ಮಾತು ಹೇಳಿದರು.

    ಕೊಡಗು ಜಿಲ್ಲೆಯ ಪತ್ರಕರ್ತರು ಉತ್ತಮವಾಗಿ ಕೆಲಸ ಮಾಡುತ್ತಿದ್ದು ಕೊಡಗಿನಲ್ಲಿ ಹಲವಾರು ಧರ್ಮಗಳು ಇದ್ದು ಇವುಗಳ ನಡುವೆ ಮನೆ ಮನೆಗಳಲ್ಲಿ ಕ್ರೀಡೆಗೆ ಪ್ರೋತ್ಸಾಹ ನೀಡಿ ಕ್ರೀಡೆ ಕೂಡ ಒಂದು ಧರ್ಮವಾಗಿ ಸಹಬಾಳ್ವೆಯ ಸಂಕೇತವಾಗಿರುವದು ನಮ್ಮ ಜಿಲ್ಲೆಯ ಸೊಬಗು ಎಂದೂ ಮೆಹೊರೋಜ್ ಖಾನ್ ಬಣ್ಣಿಸಿದರು.

    ಹೈಕೋರ್ಟ್ ಹಿರಿಯ ವಕೀಲ ಹಾಗೂ ಕೆ.ಪಿ.ಸಿ.ಸಿ ಪ್ರಧಾನ ಕಾರ್ಯದರ್ಶಿ ಹೆಚ್.ಎಸ್.ಚಂದ್ರಮೌಳಮಾತನಾಡಿ ಪತ್ರಕರ್ತರು ಸಮಾಜವನ್ನು ತಿದ್ದುವ ಕೆಲಸ ಮಾಡುತ್ತಿದ್ದು ತಿದ್ದುವ ಕೆಲಸ ಅತಿರೇಕ ಆಗಬಾರದು ಎಂದು ಸಲಹೆ ನೀಡಿದರು.

    ಉದ್ಯಮಿ ನಾಪಂಡ ಮುತ್ತಪ್ಪ ಮಾತನಾಡಿ, ಪತ್ರಕರ್ತರಿಗಾಗಿ ಸರ್ಕಾರ ವಿಶೇಷ ಕ್ಷೇಮಾಭಿವೃದ್ಧಿ ನಿಧಿ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿದರು.

    ಉದ್ಯಮಿಗಳಾದ ನಡಿಕೇರಿ ಪ್ರಸನ್ನ,

    ಕನಾ೯ಟಕ ಕ್ರಿಕೆಟ್ ಅಕಾಡೆಮಿ ಸಂಚಾಲಕ ಚೇನಂಡ ಪೃಥ್ವಿ ದೇವಯ್ಯ, ಹಾಜರಿದ್ದರು.

    ಕೊಡಗು ಪತ್ರ ಕರ್ತರ ಸಂಘದ

    ಅಧ್ಯಕ್ಷರಾದ ಅನಿಲ್ ಹೆಚ್.ಟಿ.,

    ಪತ್ರ ಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಅಧ್ಯಕ್ಷ ಜಿ. ವಿ ರವಿಕುಮಾರ್,

    ಹೆಚ್ಚುವರಿ ಪೋಲೀಸ್ ವರಿಷ್ಠಾಧಿಕಾರಿ ಬಾರಿಕೆ ದಿನೇಶ್, ಡಿ.ವ್ಯೆ ಎಸ್ಪಿ ಸೂರಜ್, ಉಪವಿಭಾಗಾಧಿಕಾರಿ ನಿತಿನ್ ಚಿಕ್ಕಿ, ನಗರಸಭೆ ಅಧ್ಯಕ್ಷೆ ಕಲಾವತಿ,ಮೂಡಾ ಅಧ್ಯಕ್ಷ ರಾಜೇಶ್ ಯಲ್ಲಪ್ಪ, ಪ್ರಮುಖರಾದ ಮಹೇಶ್ ಜೈನಿ,ಬಿಜೆಪಿ ಜಿಲ್ಲಾಧ್ಯಕ್ಷ ನಾಪಂಡ ಕಾಳಪ್ಪ,

    ಪ್ರಮುಖರಾದ ಯಡಿಕೇರಿ ಪ್ರಸನ್ನ,ಅಪ್ರು ರವೀಂದ್ರ, ತೆನ್ನಿರ ಮೈನಾ ,ಸುರಯ್ಯ ಅಬ್ರಾರ್, ಇಸ್ಮಾಯಿಲ್, ಸೂರಜ್ ಹೊಸೂರು,ಮನು ಮುತ್ತಪ್ಪ, ಚುಮ್ಮಿ ದೇವಯ್ಯ, ಜಿಲ್ಲಾ ಯುವಜನ ಮತ್ತು ಕ್ರೀಡಾ ಇಲಾಖೆಯ ಉಪ ನಿರ್ದೇಶಕಿ ವಿಸ್ಮಯಿ ಚಕ್ರವರ್ತಿ, ಸೋಮವಾರಪೇಟೆ ತಹಶೀಲ್ದಾರ್ ಕೃಷ್ಣಮೂರ್ತಿ, ಮೈಸೂರಿನ ಉದ್ಯಮಿ ಮಹಮ್ಮದ್ ನಾಸಿರ್,

    ಕೊತ್ತೊಳಿರ ಕವನ್, ಪತ್ರ ಕರ್ತರ ಸಂಘದ ಕ್ಷೇಮಾಭಿವೃದ್ಧಿ ಸಮಿತಿ ಕಾರ್ಯದರ್ಶಿ ಅರುಣ್ ಕೂರ್ಗ್,

    ಪತ್ರಕರ್ತರ ಸಂಘದ ಪಧಾಧಿಕಾರಿಗಳು,

    ಸದಸ್ಯರು ,

    ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.

    ಪತ್ರ ಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ

    ಸುರೇಶ್ ಬಿಳಿಗೇರಿ

    ಸ್ವಾಗತಿಸಿ, ವಿನೋದ್ ಮೂಡಗದ್ದೆ ಕಾರ್ಯಕ್ರಮ ನಿರೂಪಿಸಿದರು.

    Previous Articleಮಡಿಕೇರಿ:-ಬಿಲ್ಲವ ಸಮುದಾಯ ಆಯೋಜಿಸಿದ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿದ ಶಾಸಕರಾದ ಪೊನ್ನಣ್ಣ
    Next Article ಶಾಸಕ ಪೊನ್ನಣ್ಣನವರಿಂದ ಮಾಕುಟಕ್ಕೆ ದಿಡೀರ್ ಭೇಟಿ

    Related Posts

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯನ್ನು ಮಾದರಿ ನಗರವನ್ನಾಗಿಸಲು ಪ್ರಯತ್ನ: ಶಾಸಕ ಡಾ.ಮಂತರ್ ಗೌಡ

    July 31, 2026

    ಶೌಚಾಲಯಕ್ಕೆ ಬೀಗ: ಪುರಸಭೆ ಅಧಿಕಾರಿಗಳಿಗೆ ಕರವೇ ಎಚ್ಚರಿಕೆ

    July 31, 2026

    ಕಾವೇರಿ ನೀರು ಬಿಡಲು ವಿರೋಧಿಸಿ ಕುಶಾಲನಗರದಲ್ಲಿ ಕರವೇ ಪ್ರತಿಭಟನೆ

    July 30, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.