ಹೊದವಾಡ: ನೂತನ ಅಂಗನವಾಡಿ ಕೇಂದ್ರಕಟ್ಟಡ ಉದ್ಘಾಟಿಸಿದ ಶಾಸಕ ಡಾ. ಮಂತರ್ ಗೌಡ

ವರದಿ:ಝಕರಿಯ ನಾಪೋಕ್ಲು

 

ನಾಪೋಕ್ಲು :ಹೊದ್ದೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹೊದವಾಡ ಗ್ರಾಮದ ಅಂಬಲದಲ್ಲಿ ಸರ್ಕಾರದ ವಿವಿಧ ಯೋಜನೆಗಳ ಅಡಿಯಲ್ಲಿ ಬಿಡುಗಡೆಯಾದ 20 ಲಕ್ಷ ರೂ ವೆಚ್ಚದಲ್ಲಿ ನಿರ್ಮಿಸಲಾದ ನೂತನ ಅಂಗನವಾಡಿ ಕೇಂದ್ರದ ಕಟ್ಟಡವನ್ನು ಮಡಿಕೇರಿ ಕ್ಷೇತ್ರದ ಶಾಸಕರಾದ ಡಾ. ಮಂತರ್ ಗೌಡ ಅವರು ಉದ್ಘಾಟಿಸಿದರು.

 

ಹೊದ್ದೂರು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಎಚ್.ಎ. ಹಂಸ ಅವರ ಅಧ್ಯಕ್ಷತೆಯಲ್ಲಿ ನಡೆದ ಸಭಾ ಕಾರ್ಯಕ್ರಮವನ್ನು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದ ಬಳಿಕ ಶಾಸಕ ಮಂತರ್ ಗೌಡ ಅವರು ಮಾತನಾಡಿ ಅಂಗನವಾಡಿ,ಆಶಾ ಕಾರ್ಯಕರ್ತೆಯರು ಪ್ರತಿ ಮನೆ ಮನೆಗೆ ತೆರಳಿ ಜನರಿಗೆ ಆರೋಗ್ಯ ಹಾಗೂ ಸರ್ಕಾರದ ಸೌಲಭ್ಯ ಪಡೆಯುವ ಮಾಹಿತಿ ನೀಡುವುದರ ಜತೆಗೆ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡುವಲ್ಲಿ ಯಶಸ್ವಿಯಾಗುತ್ತಿರವುದು ಶ್ಲಾಘನೀಯ ಕಾರ್ಯ ಎಂದರು.ಗ್ರಾಮದಲ್ಲಿ ಮುಂದಕ್ಕೂ ಎಲ್ಲರ ಸಹಕಾರ ದಿಂದ ಹೆಚ್ಚಿನ ಅಭಿವೃದ್ಧಿಯಾಗಬೇಕೆಂದು ತಿಳಿಸಿದರು.

 

ಕಾರ್ಯಕ್ರಮದಲ್ಲಿ ಹೊದ್ದೂರು ಗ್ರಾಮ ಪಂಚಾಯತಿ ಅಧ್ಯಕ್ಷ ಹಾಗೂ ಸ್ಥಳ ದಾನಿಗಳಾದ ಎಚ್. ಎ ಹಂಸ,ಗುತ್ತಿಗೆದಾರರಾದ ವಾಸಿಂ ಕ್ಲಾಸಿಕ್,ಗ್ರಾಮದ ದಾನಿಗಳಾದ ಅಹಮದ್,ಛಾಯಾ ಚಿತ್ರಕಾರ ಮುಹಮ್ಮದ್ ಇಯಾಝ್, ನಿವೃತ್ತ ಅಂಗನವಾಡಿ ಕಾರ್ಯಕರ್ತೆ,ಸಹಾಯಕಿ ಸೀತಮ್ಮ ,ಎಂ. ಕೆ.ಸುಬ್ಬಮ್ಮ ಅವರನ್ನು ಸನ್ಮಾನಿಸಿ ಗೌರವಿಸಲಾಯಿತು.

 

ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಸೀತಾಲಕ್ಷ್ಮಿ,ಮೇಲ್ವಿಚಾರಕಿ ಮತ್ತು ಪ್ರಭಾರ ಸಹಾಯಕ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಶೀಲಾ ಅಶೋಕ್,ಅಂಗನವಾಡಿ ಕಾರ್ಯಕರ್ತೆ ಸಂಬ್ರಿನ,ಸಹಾಯಕಿ ಶಿಲ್ಪ, ಪಂಚಾಯತ್ ಅಭಿವೃದ್ಧಿಅಧಿಕಾರಿ ವತ್ಸಲಾ, ಅಬ್ದುಲ್ಲಾ,ಪಂಚಾಯತ್ ಸದಸ್ಯರು,ಪಕ್ಷದ ಪ್ರಮುಖರು,ನಾಪೋಕ್ಲು ವರ್ತುಲದ ಅಂಗನವಾಡಿ ಕಾರ್ಯಕರ್ತೆಯರು,ಸಹಾಯಕಿಯರು, ಆಶಾ ಕಾರ್ಯಕರ್ತೆಯರು, ಪೋಷಕರು, ಮಕ್ಕಳು,ಗ್ರಾಮಸ್ಥರು ಹಾಜರಿದ್ದರು.

Exit mobile version