Close Menu
Kodagu News
    ಹೊಸ ಸುದ್ದಿ

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    • ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ
    • ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ: KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ – ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸೆಸ್ಕ್ ಚೆಲ್ಲಾಟ ಸಲ್ಲದು -ಪ್ರತಿಭಟನೆ ಎಚ್ಚರಿಕೆ ನೀಡಿದ -ಮಹಮ್ಮದ್ ಕುರೇಶಿ
    ಜಿಲ್ಲೆ

    ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ – ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸೆಸ್ಕ್ ಚೆಲ್ಲಾಟ ಸಲ್ಲದು -ಪ್ರತಿಭಟನೆ ಎಚ್ಚರಿಕೆ ನೀಡಿದ -ಮಹಮ್ಮದ್ ಕುರೇಶಿ

    ನಾಪೋಕ್ಲು ವ್ಯಾಪ್ತಿಯಲ್ಲಿ ವಿದ್ಯುತ್ ಕಣ್ಣಾ ಮುಚ್ಚಾಲೆ – ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಸೆಸ್ಕ್ ಚೆಲ್ಲಾಟ ಸಲ್ಲದು -ಪ್ರತಿಭಟನೆ ಎಚ್ಚರಿಕೆ ನೀಡಿದ -ಮಹಮ್ಮದ್ ಕುರೇಶಿ

     

    ವರದಿ:ಝಕರಿಯ ನಾಪೋಕ್ಲು

    ನಾಪೋಕ್ಲು :ನಾಪೋಕ್ಲು ವ್ಯಾಪ್ತಿಯಲ್ಲಿ ಪ್ರತಿನಿತ್ಯ ರಾತ್ರಿ ವೇಳೆ ನಿರಂತರವಾಗಿ ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ಪರೀಕ್ಷಾ ದಿನಗಳು ಹತ್ತಿರವಾಗುತ್ತಿರುವಾಗ ವಿದ್ಯಾರ್ಥಿಗಳ ಭವಿಷ್ಯದ ಮೇಲೆ ಪರಿಣಾಮ ಬೀರುತ್ತಿದ್ದು ಸಂಬಂಧಪಟ್ಟ ಸೆಸ್ಕ್ ಇಲಾಖೆ ವಿದ್ಯುತ್ ಒದಗಿಸಲು ಕ್ರಮ ಕೈಗೊಳ್ಳಬೇಕು ಇಲ್ಲದಿದ್ದರೆ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ನಾಪೋಕ್ಲು ಸೆಸ್ಕ್ ಕಚೇರಿ ಎದರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ನಾಪೋಕ್ಲು ಗ್ರಾಮ ಪಂಚಾಯಿತಿ ಮಾಜಿ ಸದಸ್ಯ ಮಹಮ್ಮದ್ ಕುರೇಶಿ ಎಚ್ಚರಿಕೆ ನೀಡಿದ್ದಾರೆ.

     

    ಪತ್ರಿಕಾ ಪ್ರಕಟಣೆ ನೀಡಿರುವ ಅವರು ನಾಪೋಕ್ಲು ವ್ಯಾಪ್ತಿಯ ವಿದ್ಯುತ್ ಫೀಡರ್ ನಲ್ಲಿ ಜಾಲ ಬಲವರ್ಧನೆ ಕಾಮಗಾರಿ ಕೈಗೆತ್ತಿಕೊಳ್ಳುವುದರಿಂದ ಬೆಳಿಗ್ಗೆ 10ಗಂಟೆಯಿಂದ ಸಂಜೆ 5ವರೆಗೂ ನಾಪೋಕ್ಲು ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಿಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯೆಯ ಉಂಟಾಗಲಿದೆ ಎಂದು ಸೆಸ್ಕ್ ಇಲಾಖೆ ಪ್ರಕಟಣೆ ನೀಡಲಾಗುತ್ತಿದೆ. ಆದರೆ ರಾತ್ರಿಯಿಂದ ಮುಂಜಾನೆವರೆಗೆ ವಿದ್ಯುತ್ ಕಣ್ಣಾಮುಚ್ಚಾಲೆ ಆಟವಾಡುತ್ತಿದೆ. ಈ ಸಮಯದಲ್ಲಿ ಯಾವ ಕಾಮಗಾರಿ ನಡೆಯುತ್ತಿದೆ ಎಂದು ಕುರೇಶಿ ಇಲಾಖೆ ಅಧಿಕಾರಿಗಳನ್ನು ಪ್ರಶ್ನಿಸಿದ್ದಾರೆ.ಅಲ್ಲದೆ ಮುಸಲ್ಮಾನರ ಪವಿತ್ರ ರಂಜಾನ್ ತಿಂಗಳು ಕೂಡ ಆರಂಭವಾಗಿದ್ದು ವಿದ್ಯುತ್ ಅವಶ್ಯಕವಾಗಿದೆ. ನಿರಂತರ ವಿದ್ಯುತ್ ವ್ಯೆತ್ಯೆಯೆಯಿಂದ ಸಮಸ್ಯೆ ಉಂಟಾಗುತ್ತಿದೆ. ಅದರಂತೆ ಪಟ್ಟಣದಲ್ಲಿರುವ ಹಾಲು,ಮಾಂಸ ಮಾರಾಟ ಮಳಿಗೆ ಸೇರಿದಂತೆ ಇನ್ನಿತರ ಮಳಿಗೆಯ ವರ್ತಕರಿಗೂ ವಿದ್ಯುತ್ ಸಮಸ್ಯೆಯಿಂದ ತೊಂದರೆ ಉಂಟಾಗುತ್ತಿದೆ.ಮುಂದಿನ ದಿನಗಳಲ್ಲಿ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಪರೀಕ್ಷೆ ಆರಂಭವಾಗುತ್ತಿದ್ದು ವಿದ್ಯುತ್ ಕಣ್ಣಾ ಮುಚ್ಚಾಲೆಯಿಂದ ವಿದ್ಯಾರ್ಥಿಗಳ ಕಲಿಕೆಗೆ ತೊಂದರೆಯಾಗಿ ಅವರ ಭವಿಷ್ಯದ ಮೇಲೆ ಪರಿಣಾಮ ಬೀರುವಂತ್ತಾಗಲಿದೆ. ಬೆಳಿಗ್ಗೆಯಿಂದ ಸಂಜೆವರೆಗೂ ವಿದ್ಯುತ್ ಜಾಲ ಬಲವರ್ಧನೆ ಕಾಮಗಾರಿ ವೇಳೆ ವಿದ್ಯುತ್ ಕಡಿತಗೊಳಿಸಲಿ. ಆದರೆ ರಾತ್ರಿ ಸಮಯ ವಿದ್ಯುತ್ ಕಡಿತಗೊಳಿಸಿ ಜನರಿಗೆ ಸಮಸ್ಯೆ ಉಂಟುಮಾಡುವುದು ಸರಿಯಲ್ಲ ಎಂದು ಕುರೇಶಿ ಆರೋಪಿಸಿದ್ದಾರೆ. ಇನ್ನಾದರೂ ಸಂಬಂಧಪಟ್ಟ ಸೆಸ್ಕ್ ಇಲಾಖೆ ಅಧಿಕಾರಿಗಳು ಎಚ್ಚೆತ್ತುಕೊಂಡು ಜನರು ಅನುಭವಿಸುತ್ತಿರುವ ವಿದ್ಯುತ್ ಸಮಸ್ಯೆಯನ್ನು ಸರಿದೂಗಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ವಿವಿಧ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ನಾಪೋಕ್ಲು ಸೆಸ್ಕ್ ಕಚೇರಿ ಎದುರು ಉಗ್ರ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.

    Previous Articleಯೋಗಾಸನದಲ್ಲಿ ಸಾಧನೆಗಳ ಸರದಾರ ಕೊಡಗಿನ ತಲಿನ್ ತಿಮ್ಮಯ್ಯ
    Next Article ಕೇರಳದ ಕೊಟ್ಟಾಯಂ ಜಿಲ್ಲೆಯ ಚಂಗನಶ್ಶೇರಿಯಲ್ಲಿ, ಫೆಬ್ರವರಿ 24ರಂದು ನಡೆದ ಚುನಾವಣಾ ಪ್ರಚಾರದಲ್ಲಿ ಎ. ಎಸ್ ಪೊನ್ನಣ್ಣ ಭಾಗಿ

    Related Posts

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026

    ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ

    August 23, 2026

    ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ

    August 22, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.