Close Menu
Kodagu News
    ಹೊಸ ಸುದ್ದಿ

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
    • ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
    • ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
    • ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
    • ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
    • ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
    • ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
    • ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ
    ಜಿಲ್ಲೆ

    ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ

     

    ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ಸೇರ್ಪಡೆಗೆ ಯದುವೀರ್‌ ಆಗ್ರಹ

    *ನಿರ್ಮಲಾ ಸೀತಾರಾಮನ್‌ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದ ಮೈಸೂರು-ಕೊಡಗು ಸಂಸದರು*

    ಮೈಸೂರು, ಮಾ. 11: ಸಾಂಸ್ಕೃತಿಕ ನಗರಿ ಮೈಸೂರಿಗೆ ಇದು ಖುಷಿ ಕೊಡುವ ಸುದ್ದಿ.

    ದೇಶದ ಆರ್ಥಿಕತೆ ಕೊಡುಗೆಗಳನ್ನು ನೀಡಲು ಪ್ರಮುಖ ಪಾತ್ರ ವಹಿಸುವ ನಗರಗಳ ಅಭಿವೃದ್ಧಿಗೆ ಒತ್ತು ನೀಡಲು ಮುಂದಾಗಿರುವ ಕೇಂದ್ರ ಸರ್ಕಾರ ಈಗ ಮೈಸೂರಿಗೂ ವಿಶೇಷ ಕೊಡುಗೆ ನೀಡಲು ನಿರ್ಧರಿಸಿದೆ

    ಮೈಸೂರನ್ನು “ನಗರ ಆರ್ಥಿಕ ವಲಯ” ಯೋಜನೆಗೆ ಸೇರ್ಪಡೆಗೊಳಿಸಲು *ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಸಂಸದರಾದ ಯದುವೀರ್‌ ಕೃಷ್ಣದತ್ತ ಚಾಮರಾಜ ಒಡೆಯರ್‌* ಕೇಂದ್ರ ಹಣಕಾಸು ಸಚಿವರಾದ ನಿರ್ಮಲಾ ಸೀತಾರಾಮನ್‌ ಅವರಿಗೆ ಮನವಿ ಸಲ್ಲಸಿದ್ದಾರೆ.

    ನವದೆಹಲಿಯಲ್ಲಿ ವಿತ್ತ ಸಚಿವರನ್ನು ಭೇಟಿ ಮಾಡಿದ ಸಂಸದ ಯದುವೀರ್‌ ಒಡೆಯರ್‌, ಬಜೆಟ್‌ನಲ್ಲಿ ಘೋಷಣೆ ಮಾಡಿರುವ “ನಗರ ಆರ್ಥಿಕ ವಲಯ” ಯೋಜನೆಗೆ ಮೈಸೂರು ನಗರವನ್ನೂ ಸೇರ್ಪಡೆ ಮಾಡಬೇಕು. ಸಾಂಸ್ಕೃತಿಕ ರಾಜಧಾನಿಯಾಗಿರುವ ಮೈಸೂರು ವಿಶ್ವಮಟ್ಟದಲ್ಲಿ ಖ್ಯಾತಿ ಪಡೆದುಕೊಂಡಿದೆ. ಅದನ್ನು ಇನ್ನಷ್ಟು ಮೇಲ್ದರ್ಜೆಗೇರಿಸಲು ಈ ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.

    *ಹಣಕಾಸು ಸಚಿವರಿಗೆ ಮನವಿ ಸಲ್ಲಿಕೆ*

    ಈ ಕುರಿತು ಮಾಹಿತಿ ನೀಡಿರುವ ಸಂಸದ ಯದುವೀರ್‌ ಒಡೆಯರ್‌, ನಗರ ಆರ್ಥಿಕ ವಲಯಕ್ಕೆ ಮೈಸೂರನ್ನು ಸೇರಿಸಬೇಕು ಎಂದು ಹಣಕಾಸು ಸಚಿವರಿಗೆ ಮನವಿ ಸಲ್ಲಿಸಲಾಗಿತ್ತು. ಬುಧವಾರ ಮತ್ತೊಮ್ಮೆ ಈ ಕುರಿತು ಮನವಿ ಸಲ್ಲಿಸಿದಾಗ, ಕೂಡಲೇ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.

    ಈ ಯೋಜನೆಗೆ ಮೈಸೂರು ಸೇರ್ಪಡೆಯಾದರೆ ಎಲ್ಲ ರೀತಿಯ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ಅವಕಾಶ ದೊರೆಯುತ್ತದೆ ಎಂದರು.

    ಮೈಸೂರು ಈಗಾಗಲೇ ಶ್ರೀಮಂತ ಪಾರಂಪರೆ ಹಾಗೂ ಪರಿಸರವನ್ನು ಹೊಂದಿದೆ. ಅದಕ್ಕೆ ಯಾವುದೇ ಧಕ್ಕೆಯಾಗದಂತೆ, ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳಲು ಮುಂದಾಗಲಿದ್ದೇವೆ ಎಂದು ಸಂಸದರು ತಿಳಿಸಿದರು.

    *ಎಲ್ಲ ವರ್ಗದವರ ಅಭಿಪ್ರಾಯ ಸಂಗ್ರಹ*

    ಮೈಸೂರು ಅಭಿವೃದ್ಧಿ ಕುರಿತು ಎಲ್ಲ ಕ್ಷೇತ್ರದ ತಜ್ಞರು, ನಾಯಕರು ಹಾಗೂ ಮುಖಂಡರು, ಸಾರ್ವಜನಿಕರೊಂದಿಗೆ ಸಭೆ ನಡೆಸಿ ಸಲಹೆ-ಸೂಚನೆ, ಅಭಿಪ್ರಾಯ ಸಂಗ್ರಹಿಸಿ ಸೂಕ್ತ ಯೋಜನೆ ರೂಪಿಸಲಾಗುವುದು ಎಂದು ಯದುವೀರ್‌ ವಿವರಿಸಿದರು.

     

    ಐದು ಲಕ್ಷಕ್ಕಿಂತ ಹೆಚ್ಚಿನ ಜನಸಂಖ್ಯೆ ಇರುವ ಎರಡು ಮತ್ತು ಮೂರನೇ ಸ್ತರದ ನಗರಗಳು, ತೀರ್ಥಕ್ಷೇತ್ರಗಳಲ್ಲಿ ಅತ್ಯಾಧುನಿಕ ಮೂಲಸೌಕರ್ಯ ಸುಧಾರಣೆಯನ್ನೂ ಕೈಗೊಳ್ಳಲಾಗುತ್ತದೆ. ಹಲವು ಬಾರಿ ಮನವಿ ಮಾಡಿದ್ದರಿಂದ ನಿರ್ಮಲಾ ಸೀತಾರಾಮನ್‌ ಅವರು ಮೈಸೂರನ್ನು ಈ ಯೋಜನೆಗೆ ಸೇರಿಸಲು ಭರವಸೆ ನೀಡಿದ್ದಾರೆ ಎಂದರು.

     

    ಈ ಯೋಜನೆಗಳು ಆವಿಷ್ಕಾರ ಮತ್ತು ಅವಕಾಶಗಳ ಹೆಬ್ಬಾಗಿಲು ತೆರೆಯಲಿವೆ. ನಮ್ಮ ನಗರವನ್ನು ಇನ್ನಷ್ಟು ಸುಂದರಗೊಳಿಸಲು, ಅಭಿವೃದ್ಧಿಗೊಳಿಸಲು ಈಗ ಅವಕಾಶ ದೊರೆಯುತ್ತದೆ. ಅದನ್ನು ಎಲ್ಲರೂ ಸೇರಿ ಸದ್ವಿನಿಯೋಗಗೊಳಿಸೋಣ. ಈ ನಿಟ್ಟಿನಲ್ಲಿ ಎಲ್ಲರೂ ಪಕ್ಷಾತೀತವಾಗಿ ಕೈ ಜೋಡಿಸೋಣ, ಮೈಸೂರನ್ನು ಜಗದ್ವಿಖ್ಯಾತಿಗೊಳಿಸೋಣ ಎಂದು ಸಂಸದ ಯದುವೀರ್‌ ಒಡೆಯರ್‌ ತಿಳಿಸಿದರು.

     

     

    *BOX*

    *ಏನಿದು ನಗರ ಆರ್ಥಿಕ ವಲಯ*

    ನಗರಾಭಿವೃದ್ಧಿಯ ವೇಗವನ್ನು ಹೆಚ್ಚಿಸಲು ಕೇಂದ್ರ ಸರ್ಕಾರ ಈಗಾಗಲೇ ಬೆಂಗಳೂರು, ಸೂರತ್‌, ವಾರಾಣಸಿ, ವಿಶಾಖಪಟ್ಟಣಂ, ಭುವನೇಶ್ವರ್‌, ಪುರಿ, ಕಟಕ್‌, ಕೊಯಮತ್ತೂರು, ಈರೋಡ್‌, ತಿರುಪ್ಪುರ್‌ ಒಳಗೊಂಡಂತೆ ನಗರ ಆರ್ಥಿಕ ವಲಯ ಯೋಜನೆ ರೂಪಿಸಲಾಗಿದೆ. ಪ್ರತಿ ವಲಯಕ್ಕೆ ವಾರ್ಷಿಕ ಐದು ಸಾವಿರ ಕೋಟಿ ರೂಪಾಯಿ ಅನುದಾನ ಒದಗಿಸಲಾಗುತ್ತಿದೆ. ಈ ಹಣದಲ್ಲಿ ನಗರ ಅಭಿವೃದ್ಧಿ ಕೈಗೊಳ್ಳಲು ಬಳಸಲಾಗುತ್ತದೆ. ಖಾಸಗಿ-ಸರ್ಕಾರ ಸಹಭಾಗಿತ್ವದಲ್ಲಿ ಈ ಯೋಜನೆಗಳನ್ನು ಕೈಗೆತ್ತಿಕೊಳ್ಳಲಾಗುತ್ತದೆ. ಇದರೊಂದಿಗೆ *ಪ್ರಾದೇಶಿಕ ಮೆಡಿಕಲ್‌ ಹಬ್‌” ಯೋಜನೆ ಕೂಡ ಅನುಷ್ಠಾನಕ್ಕೆ ತರಲು ಕೇಂದ್ರ ಸರ್ಕಾರ ಮುಂದಾಗಿದೆ.

    Previous Articleಸಂಕೀರ್ಣ ಶಸ್ತ್ರಚಿಕಿತ್ಸೆಗಳಿಂದ ಹಿಡಿದು ರೋಬೋಟಿಕ್ ಬೆನ್ನುಮೂಳೆ ಚಿಕಿತ್ಸೆವರೆಗೆ:-ನಾರಾಯಣ ಹೆಲ್ತ್ ಸಿಟಿಯಿಂದ 10,000 ಯಶಸ್ವಿ ಶಸ್ತ್ರಚಿಕಿತ್ಸೆಗಳ ಮೈಲಿಗಲ್ಲು ಸಾಧನೆ
    Next Article ಸರಕಾರವೇ ನಿನಗೆ ಇನ್ನೆಷ್ಟು ಬಲಿ ಬೇಕು?

    Related Posts

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ

    August 24, 2026

    ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ

    August 24, 2026

    ಕೊಫಿಯಾ ಹೋಟೆಲ್‌ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ

    August 24, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.