Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಕ್ರೈಂ ನ್ಯೂಸ್»ಹೇರೂರು ಹಾಡಿಯಲ್ಲಿ ತಲೆ ಎತ್ತಿದ ಅಕ್ರಮ ಚರ್ಚ್: ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದವರು ಪೊಲೀಸ್ ವಶಕ್ಕೆ
    ಕ್ರೈಂ ನ್ಯೂಸ್

    ಹೇರೂರು ಹಾಡಿಯಲ್ಲಿ ತಲೆ ಎತ್ತಿದ ಅಕ್ರಮ ಚರ್ಚ್: ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದವರು ಪೊಲೀಸ್ ವಶಕ್ಕೆ

    ಹೇರೂರು ಹಾಡಿಯಲ್ಲಿ ತಲೆ ಎತ್ತಿದ ಅಕ್ರಮ ಚರ್ಚ್: ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದವರು ಪೊಲೀಸ್ ವಶಕ್ಕೆ

    ಗಿರಿಜನ ಹಾಡಿಯೊಳಗೆ ಅಕ್ರಮವಾಗಿ ನಿರ್ಮಾಣಗೊಂಡ ಚರ್ಚ್ ಉದ್ಘಾಟನೆಗೆ ತಮಿಳುನಾಡಿನಿಂದ ಆಗಮಿಸಿದ ವ್ಯಕ್ತಿಗಳನ್ನು ಪೊಲೀಸರು ವಶಕ್ಕೆ ಪಡೆದ ಘಟನೆ ಹೇರೂರು ಹಾಡಿಯಲ್ಲಿ ನಡೆದಿದೆ.ಸುಂಟಿಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯ

    ನಾಕೂರು ಶಿರಂಗಾಲ ಗ್ರಾಪಂ ಗೆ ಒಳಪಡುವ ಹೇರೂರು ಗಿರಿಜನ ಹಾಡಿಯಲ್ಲಿ ಅನಧಿಕೃತವಾಗಿ ನಿರ್ಮಾಣಗೊಂಡ ಚರ್ಚ್ ಉದ್ಘಾಟನೆ ಸಂದರ್ಭ ಸ್ಥಳೀಯ ನಿವಾಸಿಗಳು ಆಗಮಿಸಿ ಕಾರ್ಯಕ್ರಮ ಮೊಟಕುಗೊಳಿಸಿ ತಮಿಳುನಾಡಿನಿಂದ ಐದಾರು ವಾಹನಗಳಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿದವರನ್ನು ತಡೆಹಿಡಿದು ಪೊಲೀಸರಿಗೆ ಮತ್ತು ಗ್ರಾಪಂ ಅಧಿಕಾರಿಗಳಿಗೆ ಮಾಹಿತಿನೀಡಿದ್ದಾರೆ. ಕುಶಾಲನಗರ ವೃತ್ತ ನಿರೀಕ್ಷಕ ಪ್ರದೀಪ್, ಕುಶಾಲನಗರ ಮತ್ತು ಸುಂಟಿಕೊಪ್ಪ ಠಾಣಾಧಿಕಾರಿಗಳಾದ ಮೋಹನ್ ರಾಜ್, ರಾಮಚಂದ್ರ, ನಾಕೂರು ಶಿರಂಗಾಲ ಗ್ರಾಪಂ ಆಡಳಿತಾಧಿಕಾರಿ ಶ್ರೀಕಾಂತ್, ಪಿಡಿಒ ಅಸ್ಮಾ ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದರು. ಇದೇ ಸಂದರ್ಭ ಸ್ಥಳೀಯರು ಮತ್ತು ಹಾಡಿ ನಿವಾಸಿಗಳ ನಡುವೆ ವಾಗ್ವಾದ ನಡೆಯಿತು. ನಮ್ಮಿಷ್ಟದಂತೆ ನಾವು ಪ್ರಾರ್ಥನೆಯಲ್ಲಿ ತೊಡಗಿರುವುದಾಗಿ ಹಾಡಿ ವಾಸಿಗಳು ವಾದಿಸಿದರು.

    ಈ ಸಂದರ್ಭಗ್ರಾಪಂ ಮೂಲಕ ಯಾವುದೇ ಅನುಮತಿ ಪಡೆಯದೆ ಕಟ್ಟಡ ನಿರ್ಮಿಸಿರುವುದು ಕಂಡುಬಂತು. ಬಳಿಕಪೊಲೀಸರು ತಮಿಳುನಾಡು ಮೂಲದ 40 ಕ್ಕೂ ಅಧಿಕ ವ್ಯಕ್ತಿಗಳನ್ನು ವಾಹನ ಸಹಿತ ವಶಕ್ಕೆ ಪಡೆದು ವಿಚಾರಣೆಗೆ ಠಾಣೆಗೆ ಕರೆದೊಯ್ದಿದ್ದಾರೆ.ಈ ಬಗ್ಗೆ ಮಾತನಾಡಿದ ಗ್ರಾಮಸ್ಥರಾದ ಬಿಜೆಪಿ ಮುಖಂಡ ಹೇರೂರು ಚಂದ್ರಶೇಖರ್, ಹೇರೂರು ಗಿರಿಜನ ಹಾಡಿಯಲ್ಲಿ ಮತಾಂತರ ಚಟುವಟಿಕೆ ನಡೆಯುತ್ತಿದೆ, ಮತಾಂತರಗೊಂಡ ಆದಿವಾಸಿಗಳು ಸಮಾಜ ಕಲ್ಯಾಣ ಇಲಾಖೆ ಜಾಗದಲ್ಲಿ ಅನಧಿಕೃತವಾಗಿ ಚರ್ಚ್ ನಿರ್ಮಿಸಿ ಪ್ರಾರ್ಥನೆಗೆ ವ್ಯವಸ್ಥೆ ಮಾಡಿಕೊಂಡಿದ್ದಾರೆ. ಇದರ ಉದ್ಘಾಟನೆಗೆಂದು ತಮಿಳುನಾಡು ಮೂಲಕ ವ್ಯಕ್ತಿಗಳು ಆಗಮಿಸಿರುವುದು ಆತಂಕಕಾರಿ ಬೆಳವಣಿಗೆಯಾಗಿದೆ ಎಂದು ಆರೋಪಿಸಿದರು. ಅಕ್ರಮ ಮತಾಂತರ ಪ್ರಕ್ರಿಯೆಗಳಿಗೆ ಕಡಿವಾಣ ಹಾಕಬೇಕಿದೆ ಎಂದು ಒತ್ತಾಯಿಸಿದರು.

    ಗ್ರಾಪಂ ಮಾಜಿ ಅಧ್ಯಕ್ಷ ಜಗನ್ನಾಥ್ ಮಾತನಾಡಿ, ಪರಿಶಿಷ್ಟ ಪಂಗಡಕ್ಕೆ ದೊರೆಯುವ ಎಲ್ಲಾ ಸವಲತ್ತುಗಳನ್ನು ಪಡೆದುಕೊಂಡು ಮತ್ತೊಂದು ಧರ್ಮದ ಪರಿಪಾಲನೆ ನಡೆಯುತ್ತಿದೆ. ಇಂತಹವರ ವಿರುದ್ದ ಸಮಾಜ ಕಲ್ಯಾಣ ಇಲಾಖೆ ಕಟ್ಟುನಿಟ್ಟಿನ ಕ್ರಮವಹಿಸಬೇಕಿದೆ ಎಂದು ಆಗ್ರಹಿಸಿದರು. ಈ ಸಂದರ್ಭ ಸ್ಥಳೀಯರಾದ ಅರುಣ್ ಚೆಂಗಪ್ಪ, ಗಣೇಶ್,ಚರಣ್, ಸಂಜು, ಹೇಮಚಂದ್ರ, ಗಗನ್, ಚಂದ್ರಶೇಖರ್, ಡಯಾನ್, ರಾಜೇಶ್, ದಿಶಾಂತ್, ರಮೇಶ ಇದ್ದರು.

    Previous Articleರಸ್ತೆ ಅಭಿವೃದ್ಧಿಗೆ ಶಾಸಕ ಡಾ ಮಂತರ್ ಗೌಡ ರವರಿಂದ 35 ಲಕ್ಷ ರೂಗಳ ಅನುದಾನ
    Next Article ಮಿಸ್ ಗೌಡತಿ ಸ್ಪರ್ಧೆಯಲ್ಲಿ ಮಿಂಚಿದ ಯುವತಿಯರು

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.