Close Menu
Kodagu News
    ಹೊಸ ಸುದ್ದಿ

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ
    • ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ
    • ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಅಂತರರಾಷ್ಟ್ರೀಯ»ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.
    ಅಂತರರಾಷ್ಟ್ರೀಯ

    ರಸ್ತೆಗಾಗಿ ರಸ್ತೆಗಿಳಿದ ರವಿಕುಶಾಲಪ್ಪ: ಹದಗೆಟ್ಟ ರಸ್ತೆಗಳ ಬಗ್ಗೆ ನಿರಂತರ ಪೋಸ್ಟ್.

    Updated:June 10, 2026
    Screenshot

    Screenshot
    Screenshot
    Screenshot
    Screenshot
    Screenshot
    Screenshot
    Screenshot

    ಮಡಿಕೇರಿ: ಕೊಡಗಿನ ರಸ್ತೆಗಳ ಅವ್ಯವಸ್ಥೆ ಬಗ್ಗೆ ಕೊಡಗು ಜಿಲ್ಲಾ ಪ್ರಧಾನ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಪಶ್ಚಿಮ ಘಟ್ಟಗಳ ಸಂರಕ್ಷಣೆ ಕಾರ್ಯಪಡೆಯ ಮಾಜಿ ಅಧ್ಯಕ್ಷರಾದ ಶಾಂತೆಯಂಡ ರವಿ ಕುಶಾಲಪ್ಪ ಇದೀಗ ಮಳೆ ಆರಂಭವಾಗುತ್ತಲೇ ಧ್ವನಿ ಎತ್ತಿದ್ದಾರೆ.

    ಕಳೆದ ಒಂದು ವಾರದಿಂದ ಜಿಲ್ಲೆಯ ಪ್ರಮುಖ ಜಿಲ್ಲಾ ರಸ್ತೆಗಳ ಮೂಲಕ ಪ್ರಯಾಣ ಬೆಳೆಸಿ ರಸ್ತೆಗಳ ಫ್ಯಾಕ್ಟ್ ಚೆಕ್ ಮಾಡುತ್ತಿರುವ ರವಿ ಕುಶಾಲಪ್ಪ ನೇರವಾಗಿ ಕೊಡಗಿನ ಶಾಸಕರನ್ನು, ಅವರ ಫೇಸ್ ಬುಕ್ ಖಾತೆಯಲ್ಲಿ ಹದಗೆಟ್ಟ ರಸ್ತೆಗಳ ಫೋಟೋ ಪೋಸ್ಟ್ ಮಾಡುವ ಮೂಲಕವೇ ಅವರನ್ನು ಪ್ರಶ್ನಿಸಲು ಆರಂಭಿಸಿದ್ದಾರೆ.

    ಯಾವ್ಯಾವ ಊರಿನ ರಸ್ತೆಗಳ ಪೋಸ್ಟ್ ಹಾಕಲಾಗಿದೆ!

    ರವಿ ಕುಶಾಲಪ್ಪ ಅವರ ಫೇಸ್ಬುಕ್ ಖಾತೆಯಲ್ಲಿ ನಾಲ್ಕು ದಿನಗಳ ಹಿಂದೆ “ಸಿದ್ದಾಪುರ – ಅಮ್ಮತಿ ರಸ್ತೆಯನ್ನು ನೋಡಿ ಕಣ್ತುಂಬಿಕೊಳ್ಳಿ. ಮೂರನೇ ಮಳೆಗಾಲ ಪ್ರಾರಂಭವಾಗಿದೆ. ರಸ್ತೆ ದುರಸ್ಥಿ ಮಾಡಲಿಕ್ಕೆ ನಮ್ಮ ಶಾಸಕರಿಗೆ ಇನ್ನೆಷು ಮಳೆಗಾಲಗಳು ಕಳಿಯಬೇಕ!” ಎಂಬ ಪದಗಳೊಂದಿಗೆ ಒಂದು ಪೋಸ್ಟ್ ಹಾಕಲಾಗಿತ್ತು.. ಆದರೆ ಈ ಫೋಟೋ ಪೋಸ್ಟ್ ಅಲ್ಲಿ ಮುಗಿಯಲಿಲ್ಲ.. ಗಂಟೆ ಕಳೆಯುವಾಗಲೇ ಮತ್ತೊಂದು ಪೋಸ್ಟ್ ಹೀಗೆ ಹಾಕಲಾಯಿತು..

    “ಭಾಗಮಂಡಲ ಕರಿಕೆ ಅಂತರ್ ರಾಜ್ಯ ಹೆದ್ದಾರಿ

    ಕೊಡಗಿನ ರಸ್ತೆಗಳ ಪರಿಸ್ಥಿಯಯನ್ನು ನೋಡಿ ಕಣ್ತುಂಬಿಕೊಳ್ಳಿ ಕೇವಲ ಪ್ರಚಾರದಲ್ಲಿಯೇ ಅಭಿವೃದ್ದಿ ಮಾಡುವ ನಮ್ಮ ಶಾಸಕರ ಕಾರ್ಯ ವೈಖರಿಗೆ ಹಿಡಿದ ಕೈಗನ್ನಡಿ ಇದು!”

    ಇಲ್ಲಿಗೂ ನಿಲ್ಲಿಸದ ಅವರು ಕರಿಕೆ ಬೇತುಕಾಯ ರಸ್ತೆ ಬಗ್ಗೆಯೂ ಫೋಟೋ ಪೋಸ್ಟ್ ಮಾಡಿ ಶಾಸಕರಿಗೆ ಟ್ಯಾಗ್ ಮಾಡಿ ಅವರ ಗಮನಕ್ಕೆ ತರಲು ಕಟುವಾಗಿಯೇ ಪ್ರಯತ್ನಿಸಿದ್ದಾರೆ.

    ಈಗ ಮತ್ತದೇ ಬೇರೆ ಬೇರೆ ರಸ್ತೆಗಳ ಫೋಟೋಗಳನ್ನು ಹಾಕಿಕೊಂಡಿರುವ ಶಾಂತೆಯಂಡ ರವಿ ಕುಶಾಲಪ್ಪ

    “ನಾಪೋಕ್ಲು, ಬಲ್ಲಮಾವಟಿ, ಅಯ್ಯಂಗೇರಿ, ಸಣ್ಣಪುಲಿಕೊಟು, ಭಾಗಮಂಡಲ ರಸ್ತೆಯ ಇಂದಿನ ಸೊಬಗು!”
    ಒಂದಕ್ಕಿಂತ ಒಂದು ಅಯೋಮಯವಾಗಿದೆಯಲ್ಲ” ಎಂದು ಜನಪ್ರತಿನಿಧಿಯಗಳನ್ನು ಪ್ರಶ್ನೆ ಮಾಡಿದ್ದಾರೆ.

    ಪಾರಣೆ ಬಾವಲಿ ರಸ್ತೆಯ ಬಗ್ಗೆಯೂ ಪೋಸ್ಟ್ ಹಾಕಿಕೊಂಡಿರುವ ಅವರು ರಸ್ತೆಯ ಒಂದು ವಿಡಿಯೋ ತುಣುಕು ಕೂಡ ತಮ್ಮ ರವಿ ಕುಶಾಲಪ್ಪ ಬಿಜೆಪಿ ಎಂಬ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ..

    ಅಲ್ಲದೆ “ಪೊನ್ನಪ್ಪಸಂತೆ ಗ್ರಾಮ ಪಂಚಾಯತಿ ವ್ಯಾಪ್ತಿಯ ಬೇಸಗೂರು ರಸ್ತೆಯ ಇಂದಿನ ಚಿತ್ರಣ” ಎಂದು ಉಲ್ಲೇಕಿಸಿ ಒಂದು ವಿಡಿಯೋ ಕೂಡ ಹಾಕಲಾಗಿದ್ದು ಕಾಂಗ್ರೆಸ್ ರಾಜ್ಯದಲ್ಲಿ ಅಭಿವೃದ್ಧಿಯಲ್ಲಿ ವಿಫಲವಾಗಿದೆ ಎಂದಿದ್ದಾರೆ.

    ಈ ರಸ್ತೆ ತಿತಿಮತಿಯಿಂದ ಬಲ್ಲ್ಯಮುಂಡೂರು ಕಾನೂರು ಕುಟ್ಟಕ್ಕೆ ಹೋಗುವ ರಸ್ತೆಯಾಗಿದ್ದು ಈ ರಸ್ತೆಯಲ್ಲಿ ಬೆಂಗಳೂರು, ಮೈಸೂರು ಭಾಗಗಳಿಂದ ಬರುವ ಪ್ರವಾಸಿಗರು ಮತ್ತು ಕೇರಳಕ್ಕೆ ಹೋಗುವವರು ಸೇರಿ ಬಹಳ ಸಂಖ್ಯೆಯಲ್ಲಿ ವಾಹನಗಳು ಓಡಾಡುತ್ತಿರುತ್ತದೆ
    ಈ ರಸ್ತೆಯು ಬಹಳ ಹದಗೆಟ್ಟಿದ್ದು ಮಾಡಿದ ತೇಪೆ ಕಾಮಗಾರಿ ಕಿತ್ತು ಹೋಗಿದ್ದು ಅಲ್ಲಲ್ಲಿ ಗುಂಡಿ ಬಿದ್ದು ನೀರು ತುಂಬಿಕೊಂಡಿದೆ
    ಇದು ಯಾವಾಗ ಸರಿ ಹೊಂದುವುದು ಎಂದು ಜನರ ಬೇಸರ… ಎಂದು ಅವರು ತಮ್ಮ ಫೇಸ್ ಬುಕ್ ನಲ್ಲಿ ಫೋಟೋ ಸಮೇತ ಆಕ್ರೋಶ ಹಂಚಿಕೊಂಡಿದ್ದು ಕೊಡಗಿನಲ್ಲಿ ರಸ್ತೆ ಕ್ಯಾತೆ ಮತ್ತೆ ಶುರುವಾದಂತಿದೆ..

    Previous Articleವಿಪತ್ತು ನಿರ್ವಹಣೆ ಸಹಾಯವಾಣಿ ಕೇಂದ್ರ ಆರಂಭ ನೋಡಲ್ ಮತ್ತು ಸಹಾಯಕ ನೋಡಲ್ ಅಧಿಕಾರಿಗಳ ನೇಮಕ
    Next Article 40 ಅಡಿ ಕಂದಕಕ್ಕೆ ಉರುಳಿದ ಕಾರು

    Related Posts

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಪ್ರವಾಸಿಗರ ಸ್ವರ್ಗ ಮಡಿಕೇರಿಯಲ್ಲಿ ದಿನಾ ನರಕಯಾತನೆ

    July 29, 2026

    ಎಸ್ ಎಸ್ ಎಫ್ ಸಾಹಿತ್ಯೋತ್ಸವ ನಾಪೋಕ್ಲುವಿನ ಅಸ್ಕರ್ ರಾಜ್ಯಮಟ್ಟಕ್ಕೆ ಆಯ್ಕೆ

    July 29, 2026

    ಗರ್ಭಿಣಿ ಹಾಗೂ ಗರ್ಭದಲ್ಲಿದ್ದ ಅವಳಿ ಮಕ್ಕಳ ಸಾವಿಗೆ ವೈದ್ಯಕೀಯ ನಿರ್ಲಕ್ಷ್ಯ ಕಾರಣ?: ಜಿಲ್ಲಾ ಆಸ್ಪತ್ರೆ ವೈದ್ಯರು, ಸಿಬ್ಬಂದಿ ವಿರುದ್ಧ ದೂರು

    July 28, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.