ಯೋಗಭಾರತಿಗೆ ರಜತ ಮಹೋತ್ಸವದ ಸಂಭ್ರಮ

ಯೋಗಪಟುಗಳಿಂದ ಯೋಗಪ್ರದಶ೯ನ.

ಶಾಲೆಗಳಲ್ಲಿ ಯೋಗಭ್ಯಾಸ ಕಡ್ಡಾಯ ಮಾಡಬೇಕು –  ಜಿ ಚಿದ್ವಿಲಾಸ್ ಸಲಹೆ

Screenshot
Screenshot

ಮಡಿಕೇರಿ.ಜೂ 18…  ಯಾವುದೇ ಒಂದು ಧರ್ಮಕ್ಕೆ ಸೀಮಿತವಾಗಿಲ್ಲದ ಯೋಗವು , ಮನುಷ್ಯನ ಶಾರೀರಿಕ ಮತ್ತು ಮಾನಸಿಕ ಸಮತೋಲನಕ್ಕೆ ಅತ್ಯಂತ ಪರಿಣಾಮಕಾರಿಯಾಗಿದೆ. ಇಂಥ ಯೋಗ ವಿದ್ಯೆಯನ್ನು ಶಾಲಾ-ಕಾಲೇಜುಗಳಲ್ಲಿ ಕಡ್ಡಾಯವಾಗಿ ಕಲಿಸುವಂತಾಗಬೇಕು ಎಂದು ಹಿರಿಯ ಪತ್ರಕರ್ತ ಜಿ.ಚಿದ್ವಿಲಾಸ್ ಅಭಿಪ್ರಾಯಪಟ್ಟರು

ಯೋಗ ಭಾರತಿ ಸಂಸ್ಥೆಯ ಪೋಷಕರಾದ ಡಾಕ್ಟರ್ ಎಂ. ಜಿ. ಪಾಟ್ಕರ್ ರವರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿ, ನಿರಂತರ ಯೋಗ ಅಭ್ಯಾಸ ಮಾಡುವಂತೆ ಕರೆ ನೀಡಿದರು. ಮಾನವ,ಪ್ರಕೃತಿಯ ಅಂಶವಾಗಿದ್ದು ಪ್ರಕೃತಿ ಮತ್ತು ಪರಮಾತ್ಮನ ಜೋಡಣೆಗೆ ಯೋಗಾಭ್ಯಾಸ ಅತ್ಯಂತ ಸಹಕಾರಿ ಎಂದು ಅವರು ಹೇಳಿದರು. ಭಾರತದ ಕೊಡುಗೆಯಾದ ಯೋಗ ವಿದ್ಯೆ, ಮನುಷ್ಯನ ಶಾರೀರಿಕ ಮತ್ತು ಆಂತರಿಕ ಬೆಳವಣಿಗೆಗೆ ಅತ್ಯಂತ ಸಹಕಾರಿ ಎಂದರು.

ಜಿಲ್ಲಾ ಆಯುಷ್ ಅಧಿಕಾರಿ ಡಾಕ್ಟರ್ ಶೈಲಜಾ  , ಜೂನ್ 21 ರಂದು ಮಡಿಕೇರಿಯ ಕಾವೇರಿ ಹಾಲ್ ನಲ್ಲಿ ಬೆಳಿಗ್ಗೆ ಆರು ಗಂಟೆಗೆ ವಿಶ್ವ ಯೋಗ ದಿನಾಚರಣೆಯ ಕಾರ್ಯಕ್ರಮಗಳಿದ್ದು ಆಸಕ್ತರು ಪಾಲ್ಗೊಳ್ಳುವಂತೆ ಕರೆ ನೀಡಿದರು.

ಯೋಗದಿಂದ ಉತ್ತಮ ಆರೋಗ್ಯ ಪಡೆಯುವ ಬಗ್ಗೆ ಜಿಲ್ಲಾ ಆಯುಷ್ ಇಲಾಖೆಯ  ವೈದ್ಯಾಧಿಕಾರಿ ಡಾ  ಅರುಣ್  ಮಾಹಿತಿ ನೀಡಿದರು.

ಮಡಿಕೇರಿಯಲ್ಲಿ ಯೋಗಭಾರತಿ ಸಂಸ್ತೆಯನ್ನು ಸ್ಫಾಪಿಸಿ 25 ವಷ೯ಗಳ ಕಾಲ ನಿರಂತರ ಯೋಗಶಿಕ್ಷಣ ನೀಡುತ್ತಾ ಬಂದಿರುವ  ಯೋಗ ಭಾರತಿ ಸಂಸ್ಥೆಯ ಪ್ರಾಚಾರ್ಯ ಕೆ.ಕೆ. ಮಹೇಶ್ ಕುಮಾರ್ ಅವರು, ಸಂಸ್ಥೆ 25 ವರ್ಷಗಳನ್ನು ಸವೆಸಿದ ಕುರಿತು ಮಾಹಿತಿ ನೀಡಿದರು.

ಯೋಗ ಭಾರತಿ ಸಂಸ್ಥೆಯ ಶಿಬಿರಾರ್ಥಿ , ಜಿ ಆರ್ ರವಿಶಂಕರ್ ಸ್ವಾಗತಿಸಿ, ಜ್ಯೋತಿ ವರದಿವಾಚಿಸಿ,  ಸವಿತಾ ವಂದಿಸಿದರು. ವೇದಿಕೆಯಲ್ಲಿ   ಜಯಲಕ್ಷ್ಮಿ ಪಾಟ್ಕರ್ ಉಪಸ್ಥಿತರಿದ್ದರು.

ಸಂಸ್ಥೆಯ ಶಿಬಿರಾರ್ಥಿಗಳು ಕಾರ್ಯಕ್ರಮದಲ್ಲಿ  ಯೋಗ ಪ್ರದರ್ಶನದ ಮೂಲಕ ಸಭಿಕರ ಮೆಚ್ಚುಗೆ ಪಡೆದರು.

ನಗರದ  ರೆಡ್  ಬಿಕ್ಸ್ ನ ಸತ್ಕಾರ ಸಭಾಂಗಣದಲ್ಲಿ ನಡೆದ ಯೋಗ ಭಾರತಿ ಸಂಸ್ಥೆಯ ರಜತ ಮಹೋತ್ಸವ ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಾಲ್ಗೊಂಡು ಅವರು ಮಾತನಾಡಿದರು.

Exit mobile version