ಪೊನ್ನಣ್ಣ ನಿವಾಸಕ್ಕೆ ಬಿ.ಕೆ. ಹರಿಪ್ರಸಾದ್ ಸೌಹಾರ್ದ ಭೇಟಿ

ಬೆಂಗಳೂರು: ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್ ಅವರು ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ ಅವರ ಬೆಂಗಳೂರಿನ ನಿವಾಸಕ್ಕೆ ಸೌಹಾರ್ದ ಭೇಟಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕ ಪೊನ್ನಣ್ಣ ಅವರು ಬಿ.ಕೆ. ಹರಿಪ್ರಸಾದ್ ಅವರನ್ನು ಆತ್ಮೀಯವಾಗಿ ಬರಮಾಡಿಕೊಂಡರು. ಬಳಿಕ ಉಭಯ ನಾಯಕರು ಪ್ರಸಕ್ತ ರಾಜಕೀಯ ಬೆಳವಣಿಗೆಗಳು, ಪಕ್ಷದ ಸಂಘಟನೆ ಸೇರಿದಂತೆ ಹಲವು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದರು.

ರಾಜ್ಯದ ರಾಜಕೀಯ ಪರಿಸ್ಥಿತಿ ಹಾಗೂ ಕಾಂಗ್ರೆಸ್ ಪಕ್ಷದ ಮುಂದಿನ ಕಾರ್ಯಚಟುವಟಿಕೆಗಳ ಬಗ್ಗೆ ಹಾಗೂ ಜಿಲ್ಲಾಧ್ಯಕ್ಷರ ಬದಲಾವಣೆ ಬಗ್ಗೆಯೂ ನಾಯಕರು ಸಮಾಲೋಚನೆ ನಡೆಸಿದರು ಎಂದು ತಿಳಿದುಬಂದಿದೆ.

Exit mobile version