ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಕೃಷ್ಣಾಷ್ಟಮಿ ಸಂಭ್ರಮ: ಶಾಸಕ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಭಾಗಿ

ವಿರಾಜಪೇಟೆ: ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಇಂದು ಕುಟ್ಟ ಶ್ರೀಕೃಷ್ಣ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ವಿಶೇಷ ಕಾರ್ಯಕ್ರಮದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ತಮ್ಮ ಧರ್ಮಪತ್ನಿ ಕಾಂಚನ್ ಪೊನ್ನಣ್ಣ ಅವರೊಂದಿಗೆ ಭಾಗವಹಿಸಿದರು.

ಕೃಷ್ಣಾಷ್ಟಮಿ ಅಂಗವಾಗಿ ಶ್ರೀ ಕ್ಷೇತ್ರದಲ್ಲಿ ನಡೆಯುತ್ತಿರುವ ಧಾರ್ಮಿಕ ಕಾರ್ಯಕ್ರಮಗಳಲ್ಲಿ ಪಾಲ್ಗೊಂಡ ಶಾಸಕರು, ಭಕ್ತರು ಹಾಗೂ ಸಾರ್ವಜನಿಕರಿಗೆ ಹಬ್ಬದ ಶುಭಾಶಯ ಕೋರಿದರು. ಶ್ರೀಕೃಷ್ಣನ ಅಷ್ಟಮಿಯ ಸಂದೇಶವು ಎಲ್ಲರ ಜೀವನದಲ್ಲಿ ಸುಖ, ಶಾಂತಿ ಮತ್ತು ಸಮೃದ್ಧಿ ತರಲಿ ಎಂದು ಹಾರೈಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಅಧ್ಯಕ್ಷ ಮಿದೇರಿರ ನವೀನ್, ಕುಟ್ಟ ವಲಯ ಅಧ್ಯಕ್ಷ ರಾಮಕೃಷ್ಣ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಕಾಳಿಮಾಡ ಪ್ರಶಾಂತ್, ಕುಟ್ಟ ಮಾಜಿ ವಲಯ ಅಧ್ಯಕ್ಷ ಮುಕಟೀರ ನವೀನ್ ಅಯ್ಯಪ್ಪ, ಶ್ರೀಮಂಗಲ ವಲಯ ಅಧ್ಯಕ್ಷ ಪಾಲ್ವಿನ್ ಪೂಣಚ್ಚ, ತಿತೀರ ಮಂದಣ್ಣ, ರಾಜನ್, ಸುರೇಶ್, ಶೇಖರ್, ಫಾರ್ದಿನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

Exit mobile version