
ಸುಮಾರು ₹3 ಕೋಟಿ ವೆಚ್ಚದಲ್ಲಿ ರಸ್ತೆ ಕಾಮಗಾರಿ ಕೈಗೆತ್ತಿಕೊಳ್ಳಲಾಗುತ್ತಿದ್ದು, ಅತಿ ಶೀಘ್ರದಲ್ಲೇ ಕಾಮಗಾರಿಯನ್ನು ಪೂರ್ಣಗೊಳಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದು ಶಾಸಕ ಡಾ. ಮಂತರ್ ಗೌಡ ತಿಳಿಸಿದರು.
ಈ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ರಸ್ತೆ ನಿರ್ಮಾಣದಲ್ಲಿ ಯಾವುದೇ ರೀತಿಯ ಕಳಪೆ ಕಾಮಗಾರಿಗೆ ಅವಕಾಶ ನೀಡುವುದಿಲ್ಲ. ಗುಣಮಟ್ಟದಲ್ಲಿ ರಾಜಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.
ಒಂದು ವೇಳೆ ಕಾಮಗಾರಿ ಕಳಪೆಯಾಗಿ ನಡೆಯುತ್ತಿರುವುದು ಕಂಡುಬಂದರೆ ಸಾರ್ವಜನಿಕರು ನೇರವಾಗಿ ತಮ್ಮನ್ನು ಸಂಪರ್ಕಿಸಿ ಮಾಹಿತಿ ನೀಡಬೇಕು. ಜನರ ಸಹಕಾರದೊಂದಿಗೆ ಗುಣಮಟ್ಟದ ರಸ್ತೆ ನಿರ್ಮಾಣವನ್ನು ಖಚಿತಪಡಿಸಲಾಗುವುದು ಎಂದು ಹೇಳಿದರು.


