Close Menu
Kodagu News
    ಹೊಸ ಸುದ್ದಿ

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ
    • ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    • 76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    • ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ
    • ಜಿಲ್ಲೆಯಾದ್ಯಂತ 630 ಕಡೆಗಳಲ್ಲಿ ಗಣೇಶ ಪ್ರತಿಷ್ಠಾಪನೆ: 14ರಂದು ಮದ್ಯ ಮಾರಾಟ ನಿಷೇಧ
    • ರಾಜ್ಯ ಹೆದ್ದಾರಿ ಮೇಕೇರಿಯಲ್ಲಿ ಗುಂಡಿಗಳದ್ದೇ ದರ್ಬಾರ್: ಯುವಕರಿಂದ ತಾತ್ಕಾಲಿಕ ದುರಸ್ತಿ
    • ಕರಿಕೆ ಗಡಿಯಲ್ಲಿ ಕಡವೆ ಬೇಟೆ: ನಾಡ ಬಂದೂಕು, 40 ಕೆಜಿ ಮಾಂಸ ವಶ
    • ಹಬ್ಬದ ಸಂಭ್ರಮಕ್ಕೆ ಶಬ್ದದ ಕಿರಿಕಿರಿ ಬೇಡ: ‘ಪ್ರೆಶರ್ ಮೈಕ್’ ನಿಷೇಧ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಉದ್ಯೋಗವಕಾಶ»ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ
    ಉದ್ಯೋಗವಕಾಶ

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    ಯುವಕರ ಮಧ್ಯೆ ಛಾಪು ಮೂಡಿಸುತ್ತಿರುವ ಯುವ ರಾಜಕಾರಣಿ; ಬಿಜೆಪಿ ಟಿಕೆಟ್ ಆಕಾಂಕ್ಷಿಯಾಗಿ ಚರ್ಚೆಗೆ ಬಂದ ಪ್ರಸನ್ನ ಗೌಡ

    ಕೊಡಗಿನ ರಾಜಕೀಯದಲ್ಲಿ ಹೊಸ ತಲೆಮಾರಿನ ನಾಯಕತ್ವದ ಹುಡುಕಾಟ ಮುಂದುವರಿದಿರುವ ಬೆನ್ನಲ್ಲೇ, ಯುವ ಮುಖವೊಂದು ನಿಧಾನವಾಗಿ ರಾಜಕೀಯ ವಲಯದಲ್ಲಿ ಗಮನ ಸೆಳೆಯುತ್ತಿದೆ. ಅದು ಎಡಿಕೇರಿ ಪ್ರಸನ್ನ ಗೌಡ.

    ಮೂಲತಃ ಕೊಡಗಿನ ನಾಪೋಕ್ಲು ಸಮೀಪದ ಬಲ್ಲಮಾವಟ್ಟಿ ಗ್ರಾಮದವರಾದ ಪ್ರಸನ್ನ ಗೌಡ, ಅರೆಭಾಷೆ ಗೌಡ ಸಮುದಾಯದ ವಿದ್ಯಾವಂತ ಯುವ ರಾಜಕಾರಣಿಯಾಗಿ ಗುರುತಿಸಿಕೊಳ್ಳುತ್ತಿದ್ದಾರೆ. ಸದ್ಯ ಬೆಂಗಳೂರಿನಲ್ಲಿ ಲೀಡಿಂಗ್ ಎಡ್ಜ್ ಎಂಬ ಜಾಹೀರಾತು ಸಂಸ್ಥೆಯ ಮೂಲಕ ಉದ್ಯಮ ಕ್ಷೇತ್ರದಲ್ಲಿರುವ ಅವರು, ರಾಜಕೀಯದಲ್ಲೂ ಸಕ್ರಿಯವಾಗಿ ಗುರುತಿಸಿಕೊಳ್ಳುವ ಪ್ರಯತ್ನದಲ್ಲಿದ್ದಾರೆ.

    ಬಿಜೆಪಿ ಟಿಕೆಟ್ ಆಕಾಂಕ್ಷೆ; ಹತ್ತಾರು ಲೆಕ್ಕಾಚಾರ

    ಬಿಜೆಪಿಯಲ್ಲಿ ಸಕ್ರಿಯವಾಗಿ ಗುರುತಿಸಿಕೊಂಡಿರುವ ಪ್ರಸನ್ನ ಗೌಡ, ಮುಂಬರುವ ದಿನಗಳಲ್ಲಿ ಪಕ್ಷದ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ ಎಂಬ ಚರ್ಚೆ ರಾಜಕೀಯ ವಲಯದಲ್ಲಿ ನಡೆಯುತ್ತಿದೆ.

    ಬಿಜೆಪಿಯ ಬಳ್ಳಾರಿ ಪಾದಯಾತ್ರೆ ಸೇರಿದಂತೆ ಪಕ್ಷದ ವಿವಿಧ ಹೋರಾಟ ಹಾಗೂ ಕಾರ್ಯಕ್ರಮಗಳಲ್ಲಿ ಸಕ್ರಿಯವಾಗಿ ಭಾಗವಹಿಸಿರುವ ಅವರು, ಸಂಘಟನೆ ಮತ್ತು ಸಾರ್ವಜನಿಕ ಸಂಪರ್ಕದ ಮೂಲಕ ತಮ್ಮದೇ ಆದ ನೆಲೆ ರೂಪಿಸಿಕೊಳ್ಳುತ್ತಿದ್ದಾರೆ.

    ಹಬ್ಬ, ಕ್ರೀಡೆ, ಹಿಂದೂ ಸಂಸ್ಕೃತಿ ಕಾರ್ಯಕ್ರಮಗಳಿಗೆ ಬೆಂಬಲ

    ರಾಜಕೀಯದ ಹೊರತಾಗಿಯೂ ಸಾಮಾಜಿಕ ಚಟುವಟಿಕೆಗಳ ಮೂಲಕ ಪ್ರಸನ್ನ ಗೌಡ ಗಮನ ಸೆಳೆಯುತ್ತಿದ್ದಾರೆ.
    ಈ ಬಾರಿಯ ಗೌರಿ-ಗಣೇಶ ಹಬ್ಬದ ಸಂದರ್ಭದಲ್ಲಿ ಕೊಡಗಿನ ವಿವಿಧೆಡೆ ನೂರಾರು ಗಣೇಶ ಮಂಟಪಗಳಿಗೆ ಆರ್ಥಿಕ ಸಹಕಾರ ನೀಡಿರುವುದು ಅವರ ಸಾಮಾಜಿಕ ಚಟುವಟಿಕೆಗಳಲ್ಲೊಂದು ಪ್ರಮುಖ ಅಂಶವಾಗಿದೆ.

    ಹಿಂದೂ ಸಂಸ್ಕೃತಿ ಹಾಗೂ ಪರಂಪರೆಯನ್ನು ಬಿಂಬಿಸುವ ಕಾರ್ಯಕ್ರಮಗಳಿಗೆ ನಿರಂತರವಾಗಿ ಆರ್ಥಿಕ ನೆರವು ನೀಡುತ್ತಿರುವ ಅವರು, ಕೊಡಗಿನ ಕ್ರೀಡಾಪಟುಗಳಿಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಜಾತಿ-ಧರ್ಮದ ಭೇದವಿಲ್ಲದೆ ವಿವಿಧ ಕ್ರೀಡೆಗಳಿಗೆ ಸಹಕಾರ ನೀಡುತ್ತಿದ್ದಾರೆ.

    ಅರೆಭಾಷೆ ಗೌಡ ಸಮುದಾಯದಲ್ಲಿ ಹೊಸ ಭರವಸೆ

    ಕೊಡಗಿನ ರಾಜಕೀಯದಲ್ಲಿ ಅರೆಭಾಷೆ ಗೌಡ ಸಮುದಾಯಕ್ಕೆ ಭವಿಷ್ಯದ ನಾಯಕತ್ವದ ಕೊರತೆಯ ಚರ್ಚೆ ಆಗಾಗ ಕೇಳಿಬರುತ್ತಿದೆ. ಈ ಹಿನ್ನೆಲೆಯಲ್ಲಿ ಯುವ, ವಿದ್ಯಾವಂತ ಹಾಗೂ ಉದ್ಯಮ ಹಿನ್ನೆಲೆಯ ಪ್ರಸನ್ನ ಗೌಡ ಅವರ ರಾಜಕೀಯ ಸಕ್ರಿಯತೆ ಸಮುದಾಯದಲ್ಲಿ ಹೊಸ ಭರವಸೆ ಮೂಡಿಸಿದೆ ಎಂಬ ಅಭಿಪ್ರಾಯವೂ ವ್ಯಕ್ತವಾಗುತ್ತಿದೆ.

    ಕೆ.ಜಿ. ಬೋಪಯ್ಯ ಅವರ ಬಳಿಕ ಅರೆಭಾಷೆ ಗೌಡ ಸಮುದಾಯವನ್ನು ರಾಜಕೀಯವಾಗಿ ಸಕ್ರಿಯವಾಗಿ ಪ್ರತಿನಿಧಿಸುವ ಹೊಸ ತಲೆಮಾರಿನ ನಾಯಕತ್ವದ ಅಗತ್ಯವಿದೆ ಎಂಬ ಚರ್ಚೆಯ ನಡುವೆಯೇ ಪ್ರಸನ್ನ ಗೌಡ ಅವರ ಹೆಸರು ಮುನ್ನೆಲೆಗೆ ಬರುತ್ತಿದೆ.

    ವಿರೋಧಗಳ ನಡುವೆಯೂ ಮುನ್ನಡೆ

    ರಾಜಕೀಯ ಪ್ರವೇಶದ ಆರಂಭದಲ್ಲೇ ಎಲ್ಲರ ಬೆಂಬಲ ದೊರೆಯುವುದು ಸುಲಭವಲ್ಲ. ಪ್ರಸನ್ನ ಗೌಡ ಅವರ ರಾಜಕೀಯ ಚಟುವಟಿಕೆಗಳಿಗೂ ಕೆಲವು ವಿರೋಧಗಳು ಎದುರಾಗಿವೆ ಎನ್ನಲಾಗುತ್ತಿದೆ. ಆದರೂ ಅವುಗಳ ನಡುವೆಯೂ ತಮ್ಮ ರಾಜಕೀಯ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಸಾಗುತ್ತಿದ್ದಾರೆ.
    ಅಲ್ಲದೆ ಯುವಕರೊಂದಿಗೆ ಸಂಪರ್ಕ, ಸಾಮಾಜಿಕ ಚಟುವಟಿಕೆಗಳು, ಕ್ರೀಡೆಗೆ ಪ್ರೋತ್ಸಾಹ, ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಬೆಂಬಲ ಮತ್ತು ಬಿಜೆಪಿಯಲ್ಲಿನ ಸಕ್ರಿಯ ಭಾಗವಹಿಸುವಿಕೆ—ಇವೆಲ್ಲವೂ ಪ್ರಸನ್ನ ಗೌಡ ಅವರ ರಾಜಕೀಯ ಪಯಣಕ್ಕೆ ಪೂರಕವಾಗುತ್ತಿವೆ ಎಂದರೆ ತಪ್ಪಾಗಲಾರದು.

    ಕೊಡಗಿನ ರಾಜಕೀಯದಲ್ಲಿ ಮುಂದಿನ ದಿನಗಳಲ್ಲಿ ಯುವ ನಾಯಕತ್ವಕ್ಕೆ ಎಷ್ಟು ಅವಕಾಶ ಸಿಗಲಿದೆ? ಬಿಜೆಪಿಯಲ್ಲಿ ಪ್ರಸನ್ನ ಗೌಡ ಅವರಿಗೆ ಯಾವ ರೀತಿಯ ಜವಾಬ್ದಾರಿ ಅಥವಾ ಅವಕಾಶ ದೊರೆಯಲಿದೆ? ಅರೆಭಾಷೆ ಗೌಡ ಸಮುದಾಯದ ಹೊಸ ರಾಜಕೀಯ ಮುಖವಾಗಿ ಅವರು ಬೆಳೆಯಲಿದ್ದಾರೆಯೇ? ಈ ಎಲ್ಲ ಪ್ರಶ್ನೆಗಳಿಗೆ ಮುಂದಿನ ದಿನಗಳ ರಾಜಕೀಯ ಬೆಳವಣಿಗೆಗಳೇ ಉತ್ತರ ನೀಡಬೇಕಿದೆ.

    Previous Article76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ
    Next Article ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    Related Posts

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026

    ನೆಲ್ಲಿಹುದಿಕೇರಿ ಅಂಗನವಾಡಿಯಲ್ಲಿ ಗರ್ಭಿಣಿ ಮಹಿಳೆಗೆ ಅವಧಿ ಮುಗಿದ ಆಹಾರ ಕಿಟ್ ವಿತರಣೆ

    September 13, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಕೊಡಗಿನಿಂದ ಅಂತರರಾಷ್ಟ್ರೀಯ ಮಟ್ಟದ ಕ್ರೀಡಾಪಟುಗಳು ಹೊರಹೊಮ್ಮಬೇಕು: ಪೊನ್ನಣ್ಣ

    September 15, 2026

    ಎಡಿಕೇರಿ ಪ್ರಸನ್ನ ಗೌಡ: ಕೊಡಗಿನ ರಾಜಕೀಯದಲ್ಲಿ ಹೊಸ ಲೆಕ್ಕಾಚಾರ ಹುಟ್ಟುಹಾಕುತ್ತಿರುವ ಯುವ ಮುಖ

    September 15, 2026

    76 ವರ್ಷದ ಪತಿಯಿಂದ 74 ವರ್ಷದ ಪತ್ನಿಯ ಹತ್ಯೆ; ನಂತರ ಕೋವಿಯಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ

    September 14, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.