ಅ.17ರಂದು ಸಂಜೆ 7.50ಕ್ಕೆ ಕಾವೇರಿ ತೀರ್ಥೋದ್ಭವ: ಭಾಗಮಂಡಲ–ತಲಕಾವೇರಿ ಜಾತ್ರಾ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟ
ಭಾಗಮಂಡಲ: ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ–2026ರ ಜಾತ್ರೆಯ ಪ್ರಯುಕ್ತ ಶ್ರೀ ಭಗಂಡೇಶ್ವರ ಹಾಗೂ ಶ್ರೀ ತಲಕಾವೇರಿ ದೇವಾಲಯಗಳಲ್ಲಿ ನಡೆಯಲಿರುವ ವಿವಿಧ ಧಾರ್ಮಿಕ ಕಾರ್ಯಕ್ರಮಗಳ ವೇಳಾಪಟ್ಟಿ ಪ್ರಕಟವಾಗಿದೆ.
ದೇವಾಲಯದ ಪ್ರಕಟಣೆಯಂತೆ, ಸೆ.27ರಂದು ಬೆಳಗ್ಗೆ 8.45ಕ್ಕೆ ಭಾನುಸವಾರದಂದು ಶ್ರೀ ಭಗಂಡೇಶ್ವರ ದೇವಾಲಯದಲ್ಲಿ ಸಲ್ಲುವ ತುಲಾ ಲಗ್ನದಲ್ಲಿ ‘ಪ್ರತ್ಯೇಕ ಅಕ್ಷಿ’ ಕಾರ್ಯಕ್ರಮ ನಡೆಯಲಿದೆ.
ಅ.5ರಂದು ಬೆಳಗ್ಗೆ 10.35ಕ್ಕೆ ಸೋಮವಾರದಂದು ಸಲ್ಲುವ ವೃಷಭ ಲಗ್ನದಲ್ಲಿ ‘ಆಜ್ಞಾ ಮುಹೂರ್ತ’ ನೆರವೇರಲಿದೆ.
ಇನ್ನು ಅ.15ರಂದು ಮಧ್ಯಾಹ್ನ 12.35ಕ್ಕೆ ಗುರುವಾರದಂದು ಸಲ್ಲುವ ಧನು ಲಗ್ನದಲ್ಲಿ ‘ಅಕ್ಷಯ ಪಾತ್ರೆ’ ಕಾರ್ಯಕ್ರಮ ನಡೆಯಲಿದೆ. ಅದೇ ದಿನ ಸಂಜೆ 6.03ಕ್ಕೆ ಸಲ್ಲುವ ಮೀನ ಲಗ್ನದಲ್ಲಿ ‘ಕಾಣಿಕೆ ಡಬ್ಬಿ’ಗಳಿಗೆ ಪೂಜೆ ನೆರವೇರಿಸಲಾಗುತ್ತದೆ.
ತಲಕಾವೇರಿಯಲ್ಲಿ ಅ.17ರಂದು ತೀರ್ಥೋದ್ಭವ
ಕಾವೇರಿ ತುಲಾ ಸಂಕ್ರಮಣದ ಪ್ರಮುಖ ಧಾರ್ಮಿಕ ಕಾರ್ಯಕ್ರಮವಾದ ಪವಿತ್ರ ತೀರ್ಥೋದ್ಭವ ಅ.17ರಂದು ತಲಕಾವೇರಿಯಲ್ಲಿ ನಡೆಯಲಿದೆ. ಪ್ರಕಟಣೆಯ ಪ್ರಕಾರ, ಅಂದು ರಾತ್ರಿ 7.50ಕ್ಕೆ ಸಲ್ಲುವ ಮೇಷ ಲಗ್ನದಲ್ಲಿ ಶ್ರೀ ತಲಕಾವೇರಿ ದೇವಾಲಯದಲ್ಲಿ ಪವಿತ್ರ ತೀರ್ಥೋದ್ಭವದ ಕಾರ್ಯಕ್ರಮ ನಡೆಯಲಿದೆ.
ಪ್ರತಿ ವರ್ಷ ತುಲಾ ಸಂಕ್ರಮಣದ ಸಂದರ್ಭದಲ್ಲಿ ತಲಕಾವೇರಿಯಲ್ಲಿ ಕಾವೇರಿ ತೀರ್ಥೋದ್ಭವ ನಡೆಯಲಿದ್ದು, ಈ ಸಂದರ್ಭದಲ್ಲಿ ತಲಕಾವೇರಿ ಹಾಗೂ ಭಾಗಮಂಡಲಕ್ಕೆ ಸಾವಿರಾರು ಭಕ್ತರು ಆಗಮಿಸುತ್ತಾರೆ.
‘ಶ್ರೀ ಕಾವೇರಿ ತುಲಾ ಸಂಕ್ರಮಣ ಪವಿತ್ರ ತೀರ್ಥೋದ್ಭವ’ ಜಾತ್ರೆಯ ಹಿನ್ನೆಲೆಯಲ್ಲಿ ಭಕ್ತರ ಅನುಕೂಲಕ್ಕಾಗಿ ಧಾರ್ಮಿಕ ಕಾರ್ಯಕ್ರಮಗಳನ್ನು ನಿಗದಿತ ಮುಹೂರ್ತಗಳಲ್ಲಿ ನಡೆಸಲು ದೇವಾಲಯದ ವತಿಯಿಂದ ಸಿದ್ಧತೆ ಮಾಡಿಕೊಳ್ಳಲಾಗಿದೆ.
ಕೊಡಗು ನ್ಯೂಸ್ ಸೇರಲು ಈ ಲಿಂಕ್ ಬಳಸಿ
https://chat.whatsapp.com/EQa3GsAcPRoLg6YQlvez8F?mode=gi_t



