Close Menu
Kodagu News
    ಹೊಸ ಸುದ್ದಿ

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ
    • ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ
    • ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ
    • ಗೋಣಿಕೊಪ್ಪ ಅಪರಿಚಿತ ವ್ಯಕ್ತಿ 12 ಅಡಿ ಕಟ್ಟಡದಿಂದ ಜಿಗಿದು ಸಾವು
    • ಕೊಡಗು ಜಿಲ್ಲೆಗೆ ಕ್ರೀಡೆಯಲ್ಲಿ ಲಭಿಸಿದ ಕೀರ್ತಿ ದೇಶದ ಯಾವ ಜಿಲ್ಲೆಗಳಿಗೆ ಲಭಿಸಲಿಲ್ಲ
    • ಹಾಕಿ ಕ್ರೀಡೆಗೆ ಸರ್ಕಾರದಿಂದ ಪ್ರೋತ್ಸಾಹ
    • ನಾಳೆಯಿಂದ ಇತಿಹಾಸ ಪ್ರಸಿದ್ಧ ನಾಪೋಕ್ಲು ಬೇತು ಗ್ರಾಮದ ಶ್ರೀ ಮಕ್ಕಿ ಶಾಸ್ತಾವು ದೇವರ ಎಡಮ್ಯಾರು ಹಬ್ಬ ಆರಂಭ
    • ಮೇ.2 ರಂದು ನಡೆಯಲಿರುವ “ಮಾದರಿ ಮದುವೆ” ಅಭಿಯಾನ ಸಮಾರೋಪ ಸಮಾರಂಭ ಯಶಸ್ವಿಗೆ ಕೊಡಗು ಜಿಲ್ಲಾ ಎಸ್ ವೈ ಎಸ್ ಸಮಿತಿ ಕರೆ
    Facebook X (Twitter) Instagram
    Kodagu NewsKodagu News
    Demo
    Demo
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Demo
    Kodagu News
    Home»ಜಿಲ್ಲೆ»2 ಸಾವಿರ ಆದಿವಾಸಿ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ: ಶಾಸಕ ಪೊನ್ನಣ್ಣ
    ಜಿಲ್ಲೆ

    2 ಸಾವಿರ ಆದಿವಾಸಿ ಕುಟುಂಬಗಳಿಗೆ ಶೀಘ್ರ ಹಕ್ಕುಪತ್ರ: ಶಾಸಕ ಪೊನ್ನಣ್ಣ

    ಲೈನ್‍ಮನೆಗಳಲ್ಲಿ ವಾಸಿಸುವ 2 ಸಾವಿರ ಆದಿವಾಸಿ ಬುಡಕಟ್ಟು ಕುಂಟುಂಬಕ್ಕೆ
    ಶೀಘ್ರ ಹಕ್ಕುಪತ್ರ ವಿತರಣೆ: ಎ.ಎಸ್.ಪೊನ್ನಣ್ಣ
    ************************************************
    ಮಡಿಕೇರಿ ಜು.11. ಜಿಲ್ಲೆಯ ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಆದಿವಾಸಿಯ 2000 ಕ್ಕೂ ಹೆಚ್ಚು ಕುಟುಂಬಗಳಿಗೆ ನಿವೇಶನ ಹಕ್ಕು ಪತ್ರವನ್ನು ಎರಡು ಮೂರು ತಿಂಗಳಲ್ಲಿ ವಿತರಿಸಲಾಗುವುದು ಎಂದು ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ ಅವರು ತಿಳಿಸಿದ್ದಾರೆ.
    ನಗರದ ಜಿಲ್ಲಾಡಳಿತ ಭವನದಲ್ಲಿರುವ ತಮ್ಮ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶಾಸಕರು ನಿವೇಶನ ಹಕ್ಕು ಪತ್ರ ನೀಡುವ ಸಂಬಂಧ ಆಯಾಯ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಈಗಾಗಲೇ ಜಾಗ ಗುರುತಿಸಲಾಗಿದ್ದು, ಮಾನ್ಯ ಮುಖ್ಯಮಂತ್ರಿಯವರು, ಉಪ ಮುಖ್ಯಮಂತ್ರಿ ಅವರನ್ನು ಆಹ್ವಾನಿಸಿ ನಿವೇಶನ ಹಕ್ಕುಪತ್ರ ವಿತರಿಸಲಾಗುವುದು ಎಂದು ಎ.ಎಸ್.ಪೊನ್ನಣ್ಣ ಅವರು ಮಾಹಿತಿ ನೀಡಿದರು.
    ವಿರಾಜಪೇಟೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಅನೇಕ ಬುಡಕಟ್ಟು ಸಮಾಜದವರು ಬಡವರಿದ್ದು, ಇವರಿಗೆ ನಿವೇಶನ ಇಲ್ಲದವರಿಗೆ ಹಕ್ಕು ಪತ್ರ ನೀಡಲು ಅಭಿಯಾನ ಮಾದರಿಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಸುಮಾರು 1500 ಕ್ಕೂ ಹೆಚ್ಚು ನಿವೇಶನ ರಹಿತರಿದ್ದು, ನಿವೇಶನ ಹಕ್ಕುಪತ್ರ ನೀಡಲು ಮುಂದಾಗಲಾಗಿದೆ. ಈಗಾಗಲೇ ಸರ್ಕಾರಿ ಜಾಗ ಗುರುತಿಸಲಾಗಿದೆ ಎಂದರು.
    ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ವಿರಾಜಪೇಟೆ, ಪೊನ್ನಂಪೇಟೆ, ಮಡಿಕೇರಿ ವ್ಯಾಪ್ತಿಯಲ್ಲಿ ಸರ್ಕಾರಿ ಜಾಗ ಗುರುತಿಸಲಾಗಿದೆ. ಎರಡು ಮೂರು ತಿಂಗಳಲ್ಲಿ ಹಕ್ಕುಪತ್ರ ವಿತರಣೆಗೆ ಕ್ರಮವಹಿಸಲಾಗುವುದು. ನಿವೇಶನ ರಹಿತರು ಆಯಾಯ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಸರು ನೋಂದಾಯಿಸಿಕೊಳ್ಳುವಂತಾಗಬೇಕು ಎಂದು ಎ.ಎಸ್.ಪೊನ್ನಣ್ಣ ಅವರು ಕೋರಿದರು.
    ಲೈನ್‍ಮನೆಗಳಲ್ಲಿ ವಾಸಿಸುವ ಬುಡಕಟ್ಟು ಸಮಾಜದವರಿಗೆ ವೈಜ್ಞಾನಿಕವಾಗಿ ಪಟ್ಟಿ ತಯಾರಿಸಲಾಗಿದೆ. 61 ಎಕರೆ ಜಾಗವಿದ್ದು, ಗ್ರಾಮ ಸಭೆಯಲ್ಲಿ ಸಹ ಪರಿಶೀಲಿಸಿ ಪಟ್ಟಿ ಆಯ್ಕೆ ಮಾಡಲಾಗುತ್ತದೆ. ಆಯಾಯ ಗ್ರಾ.ಪಂ.ಯಲ್ಲಿ ಕುಟುಂಬಗಳು ನೋಂದಣಿ ಮಾಡಿಕೊಳ್ಳಬೇಕು. ಇದೊಂದು ಅಭಿಯಾನ ಮಾದರಿಯಲ್ಲಿ ನಿವೇಶನ ಹಂಚಿಕೆ ಮಾಡಲಾಗುತ್ತದೆ ಎಂದರು.
    ಆರ್ಥಿಕವಾಗಿ ಬಡ ಕುಟುಂಬದವರಿಗೆ ನಿವೇಶನ ಒದಗಿಸಬೇಕು ಎಂಬುದು ಆದ್ಯತೆಯಾಗಿದೆ. ಆ ನಿಟ್ಟಿನಲ್ಲಿ ಬುಡಕಟ್ಟು ಪರಿಶಿಷ್ಟರಿಗೆ ನಿವೇಶನ ನೀಡಲು ಮುಂದಾಗಲಾಗಿದೆ ಎಂದರು.
    ಜಿಲ್ಲಾಧಿಕಾರಿಯವರು, ಜಿ.ಪಂ.ಸಿಇಒ ತಹಶೀಲ್ದಾರರು, ತಾ.ಪಂ.ಇಒ ಇವರ ಉಪಸ್ಥಿತಿಯಲ್ಲಿ ಸಭೆ ನಡೆಸಲಾಗಿದೆ ಎಂದು ಹೇಳಿದರು.
    ಜಿಲ್ಲೆಯ ಬಡವರು ತಾವುಗಳೇ ಹೋಗಿ ಎಲ್ಲಿಯೂ ಸಹ ಶೆಡ್ ನಿರ್ಮಾಣ ಮಾಡಬಾರದು. ಜಾಗ ಗುರುತಿಸಿ ನಿವೇಶನ ಹಂಚಿಕೆ ಮಾಡಲಾಗುವುದು. ಆದ್ದರಿಂದ ತಾಳ್ಮೆಯಿಂದ ಇರಬೇಕು ಎಂದರು.
    ಜಿಲ್ಲೆಯಲ್ಲಿ ವನ್ಯಪ್ರಾಣಿಗಳ ಹಾವಳಿ ತಡೆಯುವ ನಿಟ್ಟಿನಲ್ಲಿ ಉಪ ಅರಣ್ಯ ಸಂರಕ್ಷಣಾಧಿಕಾರಿಗಳು, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳು, ವಲಯ ಅರಣ್ಯಾಧಿಕಾರಿಗಳೊಂದಿಗೆ ಸಭೆ ನಡೆಸಲಾಗಿದ್ದು, ಹುಲಿ, ಕರಡಿ, ಕಾಡಾನೆ ವನ್ಯಪ್ರಾಣಿಗಳ ಹಾವಳಿ ತಡೆಯಲು ವಿಶೇಷ ಕ್ಷಿಪ್ತಪಡೆ ರಚಿಸಲಾಗಿದ್ದು, ಈ ತಂಡವು ಕಾಡಾನೆಗಳನ್ನು ಓಡಿಸುವ ಕೆಲಸ ಮಾಡಲಿದ್ದಾರೆ ಎಂದರು.
    ಎಲ್ಲಾ ಕಾಡಾನೆಗಳನ್ನು ಕಾಡಿಗೆ ಓಡಿಸುವ ಕಾರ್ಯಾಚರಣೆ ಗುರುವಾರ ದಿಂದ ಆರಂಭವಾಗಿದೆ. ಸಾರ್ವಜನಿಕರ ಓಡಾಟಕ್ಕೆ ತೊಂದರೆಯಾಗುತ್ತಿರುವ ನಾಲ್ಕು ಹುಲಿಗಳನ್ನು ಹಿಡಿಯಲು ಅರಣ್ಯ ಇಲಾಖೆ ಅನುಮತಿ ನೀಡಿದೆ.
    ಸುದ್ದಿಗೋಷ್ಠಿಯಲ್ಲಿ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ಧರ್ಮಜ ಉತ್ತಪ್ಪ, ಪಿ.ಕೆ.ಪೊನ್ನಪ್ಪ ಇದ್ದರು.

    Previous Articleತಿತಿಮತಿ ವ್ಯಾಪ್ತಿಯಲ್ಲಿ ಕಾಡಾನೆಗಳನ್ನು ಕಾಡಿಗಟ್ಟಿದ ಅರಣ್ಯ ಇಲಾಖೆ
    Next Article ಆರ್. ಸಿ. ಬಿ. ವಿಜಯೋತ್ಸವ ಕಾಲ್ತುಳಿತ ದುರಂತ:ಸರಕಾರಕ್ಕೆ ವರದಿ ಸಲ್ಲಿಕೆ

    Related Posts

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025

    ಮಡಿಕೇರಿಗೆ ನಕಲಿ ಪೊಲೀಸರ ಎಂಟ್ರಿ

    December 13, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ನಾಪೋಕ್ಲು ಪತ್ರಕರ್ತನ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ-ಮೂವರು ಆರೋಪಿಗಳ ಬಂಧನ

    May 8, 2026

    ಉಪ ಚುನಾವಣೆ ಯಲ್ಲಿ ಗೆಲುವು ಕೊಡಗು ಕಾಂಗ್ರೆಸ್ ನಿಂದ ವಿಜಯೋತ್ಸವ

    May 4, 2026

    ವಿಕೇಂದ್ರೀಕರಣ ಯೋಜನೆ ಮತ್ತು ಅಭಿವೃದ್ಧಿ ಸಮಿತಿ ಸಭೆ ಸ್ಥಳೀಯ ಸಂಸ್ಥೆಗಳ ಬಲವರ್ಧನೆಗೆ ಶ್ರಮಿಸಿ, ಜೊತೆಗೆ ಅಧಿಕಾರ ನಡೆಸಿ: ಗಣ್ಯರ ಅಭಿಮತ

    May 4, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಚಿಕಿತ್ಸೆ ನೀಡದೆ ಶಾಸಕರ ಆಪ್ತರಿಂದ ಅಪಪ್ರಚಾರ: ಅಳಲು ತೋಡಿಕೊಂಡ ವೈಭವ್

    February 2, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.