
ಕುಂಜಿಲ ಕಕ್ಕಬೆಯ ಪ್ರಸಿದ್ಧ *ಪಾಡಿ ಶ್ರೀ ಇಗ್ಗುತಪ್ಪ ದೇವಸ್ಥಾನದ ವ್ಯವಸ್ಥಾಪನ ಸಮಿತಿಯ* ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಾಚಮಂಡ ಪೂವಣ್ಣ (ರಾಜ) ಮತ್ತು ನಿರ್ದೇಶಕರುಗಳು, ಇಂದು ಮಾನ್ಯ ವಿರಾಜಪೇಟೆ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ *ಶ್ರೀ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರನ್ನು*, ವಿರಾಜಪೇಟೆಯ ಶ್ರೀಯುತರ ಗೃಹ ಕಚೇರಿಯಲ್ಲಿ ಭೇಟಿ ಮಾಡಿ ಹೂಗುಚ್ಛ ನೀಡುವ ಮೂಲಕ ಧನ್ಯವಾದ ಅರ್ಪಿಸಿದರು.
ಇತಿಹಾಸ ಪ್ರಸಿದ್ಧ ಪಾಡಿ ಶ್ರೀ ಇಗ್ಗುತ್ತಪ್ಪ ದೇವಸ್ಥಾನದ ಆಡಳಿತ ಮಂಡಳಿಗೆ, ಮಾನ್ಯ ಶಾಸಕರು ಈ ಹಿಂದೆ ಇವರುಗಳ ಹೆಸರನ್ನು ಸೂಚಿಸಿದ್ದು, ರಾಜ್ಯ ಸರ್ಕಾರ ಅದನ್ನು ಅನುಮೋದಿಸಿ ಆದೇಶ ನೀಡಿತ್ತು. ಇಂದು ನೂತನ ಅಧ್ಯಕ್ಷರಾದ ಬಾಚಮಂಡ ಪೂವಣ್ಣ ರವರೊಂದಿಗೆ, ನಿರ್ದೇಶಕರುಗಳಾಗಿ ನೇಮಕಗೊಂಡಿರುವ ಪರದಂಡ ಟಿ. ಭೀಮಯ್ಯ (ವಿಟಲ), ಪರದಂಡ ಎಂ. ನರೇಂದ್ರ (ಲಾಲು), ಕೋಟೆರ ನೈಲ್ ಚಂಗಪ್ಪ, ಚೇನಂಡ ಡಿ. ಉಷಾ, ಕುಶ ಭಟ್, ಮಾದಂಡ ಜಗದೀಶ್ (ಜಗ್ಗ), ಪೊಂಚೇರಿ ಉಲ್ಲಾಸ್, ರಮೇಶ್ ಸಿಇಒ ರವಿಕುಮಾರ್, ಪಾರ್ಪತಿಕಾರ ಪರದಂಡ ಪ್ರಿನ್ಸ್ ತಮ್ಮಪ್ಪ ರವರೊಂದಿಗೆ, ಕೆಡಿಪಿ ಸದಸ್ಯರಾದ ಬಾಚಮಂಡ ಲವ ಚಿಣ್ಣಪ್ಪ ಹಾಗೂ ಕಕ್ಕಬೆ ಪಂಚಾಯತ್ ಸದಸ್ಯರಾದ ಸಂಪನ್ ಅಯ್ಯಪ್ಪ ಉಪಸ್ಥಿತರಿದ್ದರು.
ಬ್ರೇಕಿಂಗ್ ನ್ಯೂಸ್
- ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
- ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
- ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್ ವಿರುದ್ಧ ಆಕ್ರೋಶ
- ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
- ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
- ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
- ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
- ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ

