
ಕೊಡಗಿನಲ್ಲಿ ನಿರಂತರ ಕಾಡಾನೆ ದಾಳಿಯಿಂದ ಕೂಲಿ ಕಾರ್ಮಿಕ ಸಾವನ್ನಪ್ಪುತ್ತಿದ್ದರು ಸಚಿವ ಈಶ್ವರ್ ಖಂಡ್ರೆ ಮಾತ್ರ ಕೊಡಗು ಜಿಲ್ಲೆಗೂ ತನಗೂ ಸಂಬಂಧವೇ ಇಲ್ಲದಂತೆ ವರ್ತಿಸುತ್ತಿರುವುದು ಜನಸಾಮಾನ್ಯರಲ್ಲಿ ಅಸಮಾಧಾನ ಉಂಟುಮಾಡಿದೆ. ಸರಕಾರ ಆಡಳಿತಕ್ಕೆ ಬಂದ ಬಳಿಕ ಕೇವಲ ಒಂದು ಬಾರಿ ಮಾತ್ರ ಜಿಲ್ಲೆಗೆ ಭೇಟಿ ನೀಡಿರುವ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿರುವ ಕೊಡಗಿನ ಸಾಮಾನ್ಯ ಜನ ಈಶ್ವರ್ ಖಂಡ್ರೆಯನ್ನು ಕಂಡರೆ ತಿಳಿಸಿ ಎಂದು ಹೇಳುತ್ತಿರುವ ಹಾಸ್ಯದ ಮಾತುಗಳು ಜನವಲದಲ್ಲಿ ಹರಿದಾಡುತ್ತಿದೆ.
ಸತ್ತಿದ್ದು ಕಾರ್ಮಿಕ: ದಿನಗೂಲಿ ನೌಕರರ ಜೊತೆ ಸಭೆ
ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಅವರ ನೇತೃತ್ವದಲ್ಲಿ ರಾಜ್ಯ ವನ್ಯ ಜೀವಿ ಘಟಕದ ದಿನಗೂಲಿ ಹೊರಗುತ್ತಿಗೆ ನೌಕರರ ನಿಯೋಗದಿಂದ ಅರಣ್ಯ ಸಚಿವರ ಭೇಟಿ ಮಾಡಿ ಚರ್ಚೆ ನಡೆಸಲಾಯಿತಾದರೂ ಎಲ್ಲೂ ಸೋಮವಾರ ಮೃತಪಟ್ಟ ಕಾರ್ಮಿಕನ ಬಗ್ಗೆ ಚರ್ಚೆ ನಡೆದಿಲ್ಲ ಕನಿಷ್ಠ ಸಂತಾಪವನ್ನು ಸೂಚಿಸಲಿಲ್ಲ ಎಂಬ ಆರೋಪ ಕೇಳಿಬಂದಿದೆ. ಈಶ್ವರ್ ಖಂಡ್ರೆ ಅವರ ನಿವಾಸದಲ್ಲಿ ಭೇಟಿ ಮಾಡಿರುವ ಅರಣ್ಯ ಇಲಾಕೆಯ ದಿನಗೂಲಿ ನೌಕರರು ತಮ್ಮ ಕಷ್ಟಗಳನ್ನು ಹೇಳಿಕೊಂಡಿದ್ದಾರೆ.
ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಆವರ ನೇತೃತ್ವದಲ್ಲಿ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ವನ್ಯಜೀವಿ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘದ ಸದಸ್ಯರ ನಿಯೋಗ ಅರಣ್ಯ ಸಚಿವರಾದ ಈಶ್ವರ್ ಖಂಡ್ರೆ ಆವರ ನಿವಾಸದಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಅವರ ಪ್ರಮುಖ ಬೇಡಿಕೆಗಳಾದ ಹತ್ತು ವರ್ಷಗಳಿಂದ ಸೇವೆ ಸಲ್ಲಿಸಿದ ದಿನಗೂಲಿ ನೌಕರರನ್ನು ಖಾಯಂಗೊಳಿಸುವುದು, ದಿನಗೂಲಿ ನೌಕರರಾಗಿ ಕೆಲಸ ನಿರ್ವಹಿಸುತ್ತಿದ್ದ ನೌಕರರನ್ನು ಹೊರಗುತ್ತಿಗೆ ಮಾರ್ಪಡಿಸಿರುವುದು. ಆರ್ಥಿಕ ಇಲಾಖೆಯ ಹೊರಡಿಸಿರುವ ಸುತ್ತೋಲೆಯನ್ನು ಮಾರ್ಪಡಿಸುವುದು. ದಿನಗೂಲಿ ಸೇವಾ ಅವಧಿ, ಸೇವಾ ಸೇವಾ ಹಿರಿತನ ವನ್ಯಜೀವಿ ಘಟಕಗಳಲ್ಲಿ ಈ ಪಿಎಫ್, ಇ ಎಸ್ ಐ ಸಮರ್ಪಕವಾಗಿ ನಿರ್ವಹಣೆ, ವಿಮಾಸೌಲಭ್ಯ ಸೇರಿದಂತೆ ಅರಣ್ಯ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ದಿನಗೂಲಿ ನೌಕರರ ಸಂಘವು ಮನವಿ ಸಲ್ಲಿಸಿದರು. ಇದೆ ಸಂದರ್ಭದಲ್ಲಿ ಕೊಡಗಿನ ಜಮ್ಮಮಾಲೆ ಸಮಸ್ಯೆಯ ಶೀಘ್ರ ಇತ್ಯರ್ಥಪಡಿಸುವ ಬಗ್ಗೆ ಚರ್ಚಿಸಲಾಯಿತು.
ಮನವಿ ಸ್ವೀಕರಿಸಿದ ಸಚಿವರು ತಮ್ಮ ಬೇಡಿಕೆಗಳನ್ನು ಪರಿಗಣಿಸುವ ಬಗ್ಗೆ ಕ್ರಮ ವಹಿಸಲಾಗುವುದೆಂದು ತಿಳಿಸಿದರು. ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಘಟಕಗಳ ದಿನಗೂಲಿ ಹೊರಗುತ್ತಿಗೆ ನೌಕರರ ಸಂಘ ಹಾಗೂ ಪ್ರಾದೇಶಿಕ ಸಂಶೋಧನೆ ಸಾಮಾಜಿಕ ಕರ್ನಾಟಕ ಅರಣ್ಯ ಅಭಿವೃದ್ಧಿ ಒಳಗೊಂಡಂತೆ ಗೌರವ ಅಧ್ಯಕ್ಷರಾದ ಎ ಎಂ ನಾಗರಾಜ ಹಾಗೂ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಸಭೆಯಲ್ಲಿ ಸಚಿವರು ಆನೆ ದಾಳಿಯಿಂದ ಮೃತಪಟ್ಟ ಕೂಲಿ ಕಾರ್ಮಿಕ ಹಾಗೂ ಆ ಘಟನೆಯ ಬಗ್ಗೆ ಮಾತನಾಡದೆ ಇರುವುದು ಸಾರ್ವಜನಿಕ ವಲಯದಲ್ಲಿ ಸಚಿವರ ಬಗ್ಗೆ ಅಸಮಾಧಾನ ವ್ಯಕ್ತವಾಗಿದೆ. ಕೊಡಗು ಜಿಲ್ಲೆ ಕೂಡ ಸಚಿವರ ಆಡಳಿತ ವ್ಯವಸ್ಥೆಗೆ ಒಳಪಟ್ಟಿದ್ದು ಎಂಬುವುದನ್ನು ಅರಿತು ಜಿಲ್ಲೆಗೆ ಭೇಟಿನೀಡಬೇಕಾದ ಅವಶ್ಯಕತೆಯಿದೆ

