Close Menu
Kodagu News
    ಹೊಸ ಸುದ್ದಿ

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Facebook X (Twitter) Instagram
    ಬ್ರೇಕಿಂಗ್ ನ್ಯೂಸ್
    • ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ
    • ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ
    • ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ
    • ದೇವಾಲಯ ಆವರಣದಲ್ಲಿ ಅನಧಿಕೃತ ಸಮಾಧಿ ನಿರ್ಮಾಣ ಆರೋಪ: ಪ್ರತಿಭಟನೆಗೆ ಹಿಂದೂ ಸುರಕ್ಷಾ ಸಮಿತಿಯ ಕರೆ
    • ಮಡಿಕೇರಿಯಲ್ಲಿ ಕಾರ್ಗಿಲ್ ವೀರರಿಗೆ ಬಿಜೆಪಿ–ಕಾಂಗ್ರೆಸ್ ನಾಯಕರ ಜಂಟಿ ನಮನ
    • ಮಡಿಕೇರಿ ರೋಟರಿ ವುಡ್ಸ್ ನಿಂದ ಯೋಧನಮನ – ಸೈನಿಕ ದಂಪತಿಗೆ ಸನ್ಮಾನ
    • ಕಾವೇರಿ ತಟದಲ್ಲಿ ಗಿಡ ನೆಟ್ಟು ಕಾರ್ಗಿಲ್ ವಿಜಯೋತ್ಸವ ಆಚರಣೆ; ವೀರ ಯೋಧರಿಗೆ ನಮನ
    • ಯುವ ಪೀಳಿಗೆಗೆ ಕೊಡವ ಪರಂಪರೆ ಪರಿಚಯಿಸುವ ಅಗತ್ಯವಿದೆ: ಶಾಸಕ ಪೊನ್ನಣ್ಣ
    Facebook X (Twitter) Instagram
    Kodagu NewsKodagu News
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ :
    Kodagu News
    Home»ಜಿಲ್ಲೆ»ಕೊಡವ ಅಭಿವೃದ್ಧಿ ನಿಗಮ ಘೋಷಣೆ ಆಗಲಿದೆ:- ಶಾಸಕ ಪೊನ್ನಣ್ಣ ವಿಶ್ವಾಸ
    ಜಿಲ್ಲೆ

    ಕೊಡವ ಅಭಿವೃದ್ಧಿ ನಿಗಮ ಘೋಷಣೆ ಆಗಲಿದೆ:- ಶಾಸಕ ಪೊನ್ನಣ್ಣ ವಿಶ್ವಾಸ

    *ಕೊಡವ ಅಭಿವೃದ್ಧಿ ನಿಗಮ ಘೋಷಣೆಯಾಗಲಿದೆ – ಶಾಸಕ ಪೊನ್ನಣ್ಣ ವಿಶ್ವಾಸ.* ⁠ಯುಕೊ ನಿಯೋಗದೊಂದಿಗೆ ಕೊಡವ ಅಭಿವೃದ್ದಿ ನಿಗಮ ಕುರಿತು ಚರ್ಚಿಸಿದ ಶಾಸಕರು.

     

    – ⁠ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪಿಸುವ ಕುರಿತು ಮುಖ್ಯಮಂತ್ರಿಗಳ ಜೊತೆ ವಿಚಾರ ಪ್ರಸ್ತಾಪಿಸಿ ಚರ್ಚಿಸಿದ್ದೇನೆ. ಇದಕ್ಕೆ ಮುಖ್ಯಮಂತ್ರಿಗಳು ಪೂರಕವಾಗಿ ಸ್ಪಂದಿಸಿದ್ದಾರೆ. ಈ ನಿಟ್ಟಿನಲ್ಲಿ ಕೊಡವ ಅಭಿವೃದ್ಧಿ ನಿಗಮ ಶೀಘ್ರದಲ್ಲೇ ಘೋಷಣೆಯಾಗುವ ವಿಶ್ವಾಸವಿದೆಯೆಂದು, ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಹಾಗು ವಿರಾಜಪೇಟೆ ಶಾಸಕ ಎ. ಎಸ್. ಪೊನ್ನಣ್ಣ ಹೇಳಿದ್ದಾರೆ.

    ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆ ಕುರಿತಂತೆ ಇಂದು ಕೊಕ್ಕಲೆಮಾಡ ಮಂಜು ಚಿಣ್ಣಪ್ಪ ನೇತೃತ್ವದ ಯುನೈಟೆಡ್ ಕೊಡವ ಆರ್ಗನೈಸೇಷನ್ – ಯುಕೊ ಸಂಘಟನೆಯ ನಿಯೋಗವು ಶಾಸಕ ಪೊನ್ನಣ್ಣನವರನ್ನು ವಿರಾಜಪೇಟೆಯ ಅವರ ಗೃಹ ಕಛೇರಿಯಲ್ಲಿ ಬೇಟಿಮಾಡಿ ಚರ್ಚಿಸಿತು. ನಿಯೊಗವನ್ನುದ್ದೇಶಿಸಿ ಮಾತನಾಡಿದ ಪೊನ್ನಣ್ಣ, ಈಗಾಗಲೇ ಯುಕೊ ಸಂಘಟನೆಯ ಮಂಜು ಚಿಣ್ಣಪ್ಪನವರು ಈ ಕುರಿತು ಹೋರಾಟ ನಡೆಸುತ್ತಾ ಬಂದಿದ್ದಾರೆ. ನನ್ನೊಂದಿಗೂ ಹಲವು ಬಾರಿ ಚರ್ಚಿಸಿದ್ದಾರೆ. ಹಾಗೆಯೇ ನನ್ನ ಚುನಾವಣಾ ಪ್ರಣಾಳಿಕೆಯಲ್ಲಿಯೂ ಕೊಡವ ಅಭಿವೃದ್ಧಿ ನಿಗಮ ಸ್ಥಾಪಸುವ ಬರವಸೆ ನೀಡಲಾಗಿತ್ತು, ಹೀಗಾಗಿ ಮುಖ್ಯಮಂತ್ರಿಗಳೊಂದಿಗೆ ವಿಷಯ ಪ್ರಸ್ತಾಪಿಸಿ ಕೊಡವ ಜನಾಂಗಕ್ಕೆ ನೂತನವಾಗಿ ನಿಗಮ ಸ್ಥಾಪಿಸುವ ಅನಿವಾರ್ಯತೆ ಕುರಿತು ಮನವರಿಕೆ ಮಾಡಲಾಗಿದೆ. ಮುಖ್ಯಮಂತ್ರಿಗಳು ಸಹ ಪೂರಕವಾಗಿ ಸ್ಪಂದಿಸಿದ್ದಾರೆ. ಮುಂದಿನ ದಿನಗಳಲ್ಲಿ ಸೂಕ್ತವಾದ ಅನುದಾನ ಮೀಸಲಿರಿಸಿ ನೂತನವಾಗಿ ಕೊಡವ ಅಭಿವೃದ್ಧಿ ನಿಗಮ ಸ್ಥಾಪನೆಯಾಗಲಿದೆ ಎಂದು ಬರವಸೆ ನೀಡಿದರು. ಕೊಡಗಿನ ಕೊಡವರೂ ಸೇರಿದಂತೆ ಎಲ್ಲಾ ಜನಾಂಗದ ಹಿತ ಕಾಪಾಡುವ ಡುವ ನಿಟ್ಟಿನಲ್ಲಿ ಯಾವುದೇ ರಾಜಿಯಿಲ್ಲ, ಅಭಿವೃದ್ಧಿ ವಿಷಯದಲ್ಲಿ ಎಂದಿಗೂ ರಾಜಕೀಯ ಮಾಡುವುದಿಲ್ಲ, ಕೊಡಗಿನ ಎಲ್ಲರ ಸಮಗ್ರ ಅಭಿವೃದ್ದಿಯ ಚಿಂತನೆಯೊಂದಿಗೆ ನನ್ನ ಸೇವೆಯನ್ನು ಯಾವುದೇ ತಾರತಮ್ಯವಿಲ್ಲದೆ ನಿರ್ವಹಿಸುವುದಾಗಿ ಈ ಸಂಧರ್ಬದಲ್ಲಿ ಅವರು ಹೇಳಿದರು.

    ಮನವಿ ಸಲ್ಲಿಸಿ ಮಾತನಾಡಿದ ಯುಕೊ ಅಧ್ಯಕ್ಷ ಕೊಕ್ಕಲೆಮಾಡ ಮಂಜು ಚಿಣ್ಣಪ್ಪ, ಪ್ರಸ್ತುತ ಸರ್ಕಾರದ ಯಾವುದೇ ಸವಲತ್ತುಗಳು ಸಮಗ್ರವಾಗಿ ಕೊಡವರನ್ನು ತಲುಪಲು ಸಾಧ್ಯವಾಗುತ್ತಿಲ್ಲ. ಕೊಡವರಲ್ಲಿ ಶೇ. 60 ಹಿಂದುಳಿದವರಿದ್ದಾರೆ, ಶೇ. 30 ಬಡತನ ರೇಖೆಗೂ ಕೆಳಗಿದ್ದಾರೆ, ಇಂದಿನ ಪರಿಸ್ಥಿತಿಯಲ್ಲಿ ಸಂಸ್ಕೃತಿ ಹಾಗು ಪರಂಪರೆಗಳನ್ನು ಉಳಿಸಿಕೊಂಡು ಒಂದು ಜನಾಂಗದ ಸಮಗ್ರ ಅಭಿವೃದ್ಧಿಯ ಚಿಂತನೆಯೇ ದುಬಾರೀ ಎನಿಸಿಕೊಂಡಿದೆ, ಆದ್ದರಿಂದ ಸರ್ಕಾರವು ಕೊಡವರಂತಹ ಅಲ್ಪಸಂಖ್ಯಾತರ ಸಮಗ್ರ ಏಳಿಗೆಯ ಬಗ್ಗೆ ಗಮನ ಹರಿಸುವುದು ಅನಿವಾರ್ಯವಾಗುತ್ತದೆ ಎಂದು ಹೇಳಿದರು. ಈ ನಿಟ್ಟಿನಲ್ಲಿ ಸರ್ಕಾರವು ಕೊಡವ ಜನಾಂಗದ ಶ್ರೇಯೋಭಿವೃದ್ದಿಯ ಹಿತದೃಷ್ಠಿಯಿಂದ ಮುಂಬರುವ ಬಜೆಟಿನಲ್ಲಿಯೇ ಕೊಡವ ಅಭಿವೃದ್ಧಿ ನಿಗಮವನ್ನು ಸ್ಥಾಪಿಸುವಂತೆ ಸರ್ಕಾರವನ್ನು ಒತ್ತಾಯಿಸಿದರು.

    ನಿಯೋಗದಲ್ಲಿ, ಚೆಪ್ಪುಡಿರ ಸುಜು ಕರುಂಬಯ್ಯ, ನೆಲ್ಲಮಕ್ಕಡ ಜೆಫ್ರಿ ಮಾದಯ್ಯ, ಅಪ್ಪಾರಂಡ ವೇಣು ಪೊನ್ನಪ್ಪ, ಪುದಿಯೊಕ್ಕಡ ದಿನೇಶ್, ಅಜ್ಜಿನಿಕಂಡ ಸೂರಜ್ ತಿಮ್ಮಯ್ಯ, ತೀತಿಮಾಡ ಬೋಸ್ ಅಯ್ಯಪ್ಪ, ಮಚ್ಚಾಮಾಡ ರಮೇಶ್, ಬಾದುಮಂಡ ವಿಷ್ಣು ಕಾರ್ಯಪ್ಪ, ಕಾವಡಿಚಂಡ ದೀಪು ಉತ್ತಯ್ಯ, ಕಡೇಮಾಡ ತಿಮ್ಮಯ್ಯ, ಚೆಪ್ಪುಡಿರ ಪ್ರತಿಮ ಕರುಂಬಯ್ಯ, ಬೊಳ್ಳಚೆಟ್ಟಿರ ಮೈನ ಕಾಳಪ್ಪ, ಕಳ್ಳಿಚಂಡ ದೀನ ಉತ್ತಪ್ಪ, ತನ್ವಿ ಉತ್ತಪ್ಪ, ಕುಂಜಿಲಂಡ ಗ್ರೇಸಿ ಪೂಣಚ್ಚ, ಕೊಣಿಯಂಡ ಕಾವ್ಯ ಸೋಮಯ್ಯ ಉಪಸ್ಥಿತರಿದ್ದರು.

    Previous Articleಮೇಕೇರಿ-ಅರವತ್ತೂಕ್ಲು ಸಂಪರ್ಕ ಕಲ್ಪಿಸುವ ರಸ್ತೆಗೆ ಮರುನಾಮಕರಣ
    Next Article SSLC ಗರಿಷ್ಠ ಅಂಕಗಳಿಸಿದ ಮೋಕ್ಷಿತ ಗೆ ಐದು ವರ್ಷಗಳ ಕಾಲ ವಿದ್ಯಾರ್ಥಿವೇತನ ಘೋಷಿಸಿದ ಶಾಸಕ ಪೊನ್ನಣ್ಣ

    Related Posts

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Demo
    Demo
    ಪ್ರಮುಖ ಸುದ್ದಿ

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026

    ಕೊಡಗು ಮೂಲದ ಯುವತಿ ಮಂಗಳೂರಿನಲ್ಲಿ ಸಾವು

    June 14, 2025
    Demo
    About Us
    About Us

    Email Us: info@example.com
    Contact: +1-320-0123-451

    Facebook X (Twitter) Pinterest YouTube WhatsApp
    Top News

    ಮಡಿಕೇರಿಯ ಜಿಟಿ ರಸ್ತೆಯಲ್ಲಿ ಕೆಸರಿನ ಕಾಟ: ಸಾರ್ವಜನಿಕರ ಆಕ್ರೋಶ

    July 28, 2026

    ಮಾಲ್ದಾರೆ ಸಿದ್ದೇಶ್ವರ ದೇವಸ್ಥಾನ ಪ್ರಕರಣ: ಎಫ್‌ಐಆರ್ ವಿಳಂಬ ಖಂಡಿಸಿ ಪ್ರತಿಭಟನೆ ಮುಂದುವರಿಕೆ

    July 27, 2026

    ಸೋಮವಾರಪೇಟೆಯಲ್ಲಿ ಬಿಜೆಪಿ ಪ್ರತಿಭಟನೆ: ಕಾಂಗ್ರೆಸ್‌ ವಿರುದ್ಧ ಆಕ್ರೋಶ

    July 27, 2026
    Big News

    ಕೊಂಡಂಗೇರಿ ಸರ ಕಳ್ಳತನಕ್ಕೆ ಟ್ವಿಸ್ಟ್: ಪ್ರಕರಣದ ಮಾಸ್ಟರ್ ಮೈಂಡ್ ಮುಜೀದ್ ಅರೆಸ್ಟ್

    July 24, 2025

    ಗುಂಡು ಹೊಡೆದುಕೊಂಡು ಯುವಕ ಆತ್ಮಹತ್ಯೆ: ನಾಪೋಕ್ಲುವಿನಲ್ಲಿ ಘಟನೆ

    July 11, 2026

    ಮಂಗಳೂರಿನಲ್ಲಿ ದರೋಡೆ: ಕೊಡಗಿನ ಹಾಕತ್ತೂರಿನ ಇಬ್ಬರ ಬಂಧನ

    July 3, 2026
    © 2026 Kodagu News. Designed by Blueline Computers
    • ಮುಖ ಪುಟ
    • ವಿಶೇಷ
    • ಬಿಗ್ ನ್ಯೂಸ್
    • ದೇಶ ವಿದೇಶ
    • ಸಂಪರ್ಕಿಸಿ

    Type above and press Enter to search. Press Esc to cancel.