ಅಮ್ಮತ್ತಿ ಹಾಗೂ ಪಾಲಿಬೆಟ್ಟ ಭಾಗಗಳಲ್ಲಿ ನೂತನ ರಸ್ತೆಯ ಲೋಕಾರ್ಪಣೆ

ಅಮ್ಮತ್ತಿ-ತಿತಿಮತಿ ರಸ್ತೆಯ ಅಮ್ಮತಿಯಿಂದ ಪಾಲಿಬೆಟ್ಟ ಕಡೆಗೆ ಹೋಗುವ, ನೂತನ ರಸ್ತೆಯ ಭೂಮಿ ಪೂಜೆ ಹಾಗೂ ಮುಕ್ತಾಯಗೊಂಡ ರಸ್ತೆ ಕಾಮಗಾರಿಯ ಲೋಕಾರ್ಪಣೆಯನ್ನು ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ನೆರವೇರಿಸಿದರು.
ಲೋಕೋಪಯೋಗಿ ರಸ್ತೆಯ ಅಭಿವೃದ್ಧಿ ಕಾಮಗಾರಿಗಳನ್ನು ಸಮರೋಪಾದಿಯಲ್ಲಿ ಕೈಗೆತ್ತಿಕೊಂಡಿರುವ ಶಾಸಕರು, ಮಳೆಯಿಂದಾಗಿ ಹದಗೆಟ್ಟ ಈ ರಸ್ತೆಯನ್ನು ದುರಸ್ತಿಗೊಳಿಸಿ ಮರುಡಾಮರೀಕರಣ ಕಾಮಗಾರಿ ಕೈಗೊಂಡಿದ್ದರು.
ಮುಕ್ತಾಯಗೊಂಡ ರಸ್ತೆಯನ್ನು ಲೋಕಾರ್ಪಣೆಗೊಳಿಸಿ ಸಾರ್ವಜನಿಕರ ಓಡಾಟಕ್ಕೆ ಅನುವುಗೊಳಿಸಿದರು.
ಅಮ್ಮತ್ತಿಯಿಂದ ಪಾಲಿಬೆಟ್ಟ ಕಡೆಗೆ ಹೋಗುವ ಹಾಗೂ ಇತ್ತೀಚೆಗೆ ಪೂರ್ಣಗೊಂಡ ರಸ್ತೆಯ ಉದ್ಘಾಟನೆಯನ್ನು ಅಮ್ಮತ್ತಿಯಲ್ಲಿ ಶಾಸಕರು ನೆರವೇರಿಸಿದರು. ಬಳಿಕ ಬೈರಂವಾಡ ಭಾಗದಲ್ಲಿ ಇದೇ ರಸ್ತೆಯ ಮುಂದುವರಿದ ಭಾಗದ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿದರು.
ಈ ಕಾಮಗಾರಿಗಳ ಪೈಕಿ, ಉದ್ಘಾಟನೆಗೊಂಡ ಅಮ್ಮತಿ-ಪಾಲಿಬೆಟ್ಟ ರಸ್ತೆಗೆ ₹ 2.00 ಕೋಟಿ ಅನುದಾನ ಒದಗಿದೆ ಹಾಗೂ ಅಮ್ಮತಿ-ಮೂರ್ನಾಡ್ ರಸ್ತೆಯ, ಅಮ್ಮತಿಯಿಂದ ಕೊಂಡಂಗೇರಿ ಕಡೆಗೆ, ಬೈರಂಬಡ ಹತ್ತಿರ ₹ 1 ಕೋಟಿ 50 ಲಕ್ಷ ಅನುದಾನವನ್ನು ಮಾನ್ಯ ಶಾಸಕರು ಒದಗಿಸಿದ್ದಾರೆ.
ಈ ಸಂದರ್ಭದಲ್ಲಿ ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ತಿತೀರ ಧರ್ಮಜ ಉತ್ತಪ್ಪ, ಬ್ಲಾಕ್ ಅಧ್ಯಕ್ಷರು ಪಟ್ಟಡ ರಂಜಿ ಪೂಣಚ್ಚ, ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷರು ಜಾನ್ಸನ್, ವಲಯ ಅಧ್ಯಕ್ಷರು ಹರಿ, ಪಾಲಿಬೆಟ್ಟ ವಲಯ ಅಧ್ಯಕ್ಷರು ಕಾಳಪ್ಪ, ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಗಣೇಶ್, ಜಿಲ್ಲಾ ಅಲ್ಪಸಂಖ್ಯಾತರ ಅಧ್ಯಕ್ಷರು ಹನೀಫ್, ತಾಲೂಕು ಅಲ್ಪಸಂಖ್ಯಾತರ ರಫೀಕ್, ಪಾಲಿಬೆಟ್ಟ ಪಂಚಾಯಿತಿ ಸದಸ್ಯರು ನಾಸಿರ್, ಹಂಸ, ಪಕ್ಷದ ಮುಖಂಡರು ಚೆಕು, ಅನಿಲ್, ಕುಂಡಚ್ಚಿರ ಮಂಜು ದೇವಯ್ಯ, ನೌಶಾದ್, ಅಯೂಬ್, ದಿನೇಶ್ ಗ್ರಾಮ ಪಂಚಾಯತಿ ಅಧ್ಯಕ್ಷರು ಹಾಲುಗುಂದ ,ಅಂದಾಯಿ ಗ್ರಾಮ ಪಂಚಾಯತಿ ಸದಸ್ಯರು, ಪೂವಯ್ಯ, ಗ್ರಾಮ ಪಂಚಾಯತಿ ಸದಸ್ಯರು, ಕೆ ಎಮ್ ಸಾದುಲಿ, ಮಾಜಿ ಪುರಾಸಭೆ ಸದಸ್ಯರು ರಾಜೇಶ್ ಪದ್ಮನಾಭ, ರಾಫಿ, ವಿರಾಜಪೇಟೆ ವಿಧಾನ ಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರು ರಕ್ಷಿತ್, ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರು ಶಬೀರ್, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.
ಕೊಡಗು ನ್ಯೂಸ್

