- ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ
- ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ
- ಕೊಫಿಯಾ ಹೋಟೆಲ್ನಲ್ಲಿ ಬುಧವಾರ ಓಣಂ ವಿಶೇಷ ಸಧ್ಯೆ
- ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ
- ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ
- ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ
- ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ
- ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು
Author: Kodagu-admin
ಕಾಫಿ ಶಾಪ್ ಕಳವು ಪ್ರಕರಣ: ಕೇರಳ ಮೂಲದ ಆರೋಪಿ ಬಂಧನ ಗೋಣಿಕೊಪ್ಪ: ಕಾವೇರಿ ಕಾಲೇಜು ಸಮೀಪದ ‘ಕೂರ್ಗ್ ಎಕ್ಸ್ಪ್ರೆಸ್ ಕಾಫಿ ಶಾಪ್’ನಲ್ಲಿ ನಡೆದ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮೂಲದ ಆರೋಪಿಯನ್ನು ಗೋಣಿಕೊಪ್ಪ ಪೊಲೀಸರು ಬಂಧಿಸಿದ್ದಾರೆ. ಆಗಸ್ಟ್ 5ರಂದು ರಾತ್ರಿ ಕಾಫಿ ಶಾಪ್ನಿಂದ ಸುಮಾರು ₹4 ಸಾವಿರ ನಗದು ಕಳವಾಗಿತ್ತು. ಈ ಕುರಿತು ಗೋಣಿಕೊಪ್ಪ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣದ ತನಿಖೆ ಕೈಗೊಂಡ ವಿಶೇಷ ತನಿಖಾ ತಂಡವು ತಲೆಮರೆಸಿಕೊಂಡಿದ್ದ ಕಣ್ಣೂರು ಜಿಲ್ಲೆಯ ಇರಿಟ್ಟಿ ತಾಲ್ಲೂಕಿನ ಹುಲಿಕಲ್ ಗ್ರಾಮದ ಸಲಿಂ.ಟಿ.ಎ (44) ಎಂಬಾತನನ್ನು ಆಗಸ್ಟ್ 23ರಂದು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದೆ. ಪ್ರಾಥಮಿಕ ತನಿಖೆಯಲ್ಲಿ ಆರೋಪಿ ಇತರ ಕಳವು ಪ್ರಕರಣಗಳಲ್ಲೂ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ. ಗೋಣಿಕೊಪ್ಪ ಪೊಲೀಸ್ ಠಾಣೆಯ ಮತ್ತೊಂದು ಪ್ರಕರಣದಲ್ಲಿ ಸುಮಾರು ₹37 ಸಾವಿರ, ವಿರಾಜಪೇಟೆ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ₹8 ಸಾವಿರ ಹಾಗೂ ಕೇರಳದ ಇರಿಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಎರಡು ಪ್ರಕರಣಗಳಲ್ಲಿ ಒಟ್ಟು ₹51,650 ನಗದು ಕಳವು…
ಎಸ್ ಐ ಆರ್ ಕೊಡಗಿನಲ್ಲಿ 51,932 ಮತದಾರರ ಇಳಿಕೆ 2026ರ SIR ಕರಡು ಮತದಾರರ ಪಟ್ಟಿಯ ಅಧಿಕೃತ ಮಾಹಿತಿಯ ಪ್ರಕಾರ, 2023ರ ಸಂಖ್ಯೆಗೆ ಹೋಲಿಕೆ ಮಾಡಿದರೆ ಕೊಡಗಿನಲ್ಲಿ ಮತದಾರರ ಸಂಖ್ಯೆ ಗಮನಾರ್ಹವಾಗಿ ಕಡಿಮೆಯಾಗಿದೆ. ಮಡಿಕೇರಿ: ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR)-2026ರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಕೊಡಗು ಜಿಲ್ಲೆಯಲ್ಲಿ ಒಟ್ಟು 4,05,803 ಮತದಾರರು ಇದ್ದಾರೆ. 2023ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಜಿಲ್ಲೆಯಲ್ಲಿ 4,57,735 ಮತದಾರರು ಇದ್ದರು. ಇದೀಗ 51,932 ಮತದಾರರ ಇಳಿಕೆ ಕಂಡುಬಂದಿದೆ. ಮಡಿಕೇರಿ ವಿಧಾನಸಭಾ ಕ್ಷೇತ್ರದಲ್ಲಿ 2,09,115 ಮತದಾರರಿದ್ದು, 1,01,316 ಪುರುಷರು, 1,07,797 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ. ವಿರಾಜಪೇಟೆ ಕ್ಷೇತ್ರದಲ್ಲಿ 1,96,688 ಮತದಾರರಿದ್ದು, 96,978 ಪುರುಷರು, 99,708 ಮಹಿಳೆಯರು ಹಾಗೂ ಇಬ್ಬರು ಇತರೆ ಮತದಾರರಿದ್ದಾರೆ. SIR ಪ್ರಕ್ರಿಯೆಯಲ್ಲಿ ಮನೆ-ಮನೆ ಸಮೀಕ್ಷೆ ನಡೆಸಿದ ವೇಳೆ ಜಿಲ್ಲೆಯಲ್ಲಿ 62,854 ಮತದಾರರು ಗಣತಿ ನಮೂನೆ ಸಲ್ಲಿಸದಿರುವುದು ಗುರುತಿಸಲಾಗಿದೆ. ಇದರಲ್ಲಿ ಮೃತಪಟ್ಟವರು, ಶಾಶ್ವತವಾಗಿ ಸ್ಥಳಾಂತರಗೊಂಡವರು, ಎರಡು ಕಡೆ ಹೆಸರು ಹೊಂದಿರುವವರು…
ಓಣಂ ಹಬ್ಬದ ಸಂಭ್ರಮವನ್ನು ಸವಿಯಲು ಕೊಫಿಯಾ ಹೋಟೆಲ್ ಆ್ಯಂಡ್ ರೆಸ್ಟೋರೆಂಟ್ ವತಿಯಿಂದ ಆಗಸ್ಟ್ 26ರಂದು ವಿಶೇಷ ಓಣಂ ಸಧ್ಯೆ ಆಯೋಜಿಸಲಾಗಿದೆ. ಸಾಂಪ್ರದಾಯಿಕ ಬಾಳೆ ಎಲೆಯಲ್ಲಿ ವಿವಿಧ ಬಗೆಯ ಖಾದ್ಯಗಳೊಂದಿಗೆ ಒಟ್ಟು 29 ಐಟಂಗಳ ವಿಶೇಷ ಸಧ್ಯೆ ಲಭ್ಯವಿರಲಿದೆ. ಹಬ್ಬದ ಸಾಂಪ್ರದಾಯಿಕ ರುಚಿಯೊಂದಿಗೆ ಓಣಂ ಸಂಭ್ರಮವನ್ನು ಅನುಭವಿಸುವ ಅವಕಾಶವನ್ನು ಗ್ರಾಹಕರಿಗೆ ಕಲ್ಪಿಸಲಾಗಿದೆ. ಡೈನ್-ಇನ್ ಸಧ್ಯೆಗೆ ₹349 ಹಾಗೂ ಪಾರ್ಸೆಲ್ಗೆ ₹399 ದರ ನಿಗದಿಪಡಿಸಲಾಗಿದೆ. ಪಾರ್ಸೆಲ್ ಸೇವೆ ಸೀಮಿತವಾಗಿದ್ದು, ಮುಂಗಡ ಬುಕ್ಕಿಂಗ್ಗೆ ಅವಕಾಶವಿದೆ. ಓಣಂ ಸಧ್ಯೆ ಬುಕ್ಕಿಂಗ್ ಹಾಗೂ ಆರ್ಡರ್ಗಾಗಿ +91 99005 00874, +91 98802 24787 ಹಾಗೂ +91 94814 44787 ಸಂಖ್ಯೆಯನ್ನು ಸಂಪರ್ಕಿಸಬಹುದು.
ಮಳೆಗಾಗಿ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಮಳೆಗಾಗಿ ಪ್ರಾರ್ಥಿಸಿ ಕೊಡಗಿನ ಪಾಡಿಶ್ರೀ ಇಗ್ಗುತ್ತಪ್ಪ ದೇವಾಲಯದಲ್ಲಿ ರುದ್ರಾಭಿಷೇಕ ಪೂಜೆ ನೆರವೇರಿಸಲಾಯಿತು. ಕೃಷಿ ಸಚಿವ ಪಿ.ಎಂ. ನರೇಂದ್ರ ಸ್ವಾಮಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ಶಾಸಕ ಎ.ಎಸ್. ಪೊನ್ನಣ್ಣ, ಮಡಿಕೇರಿ ಶಾಸಕ ಡಾ. ಮಂತರ್ ಗೌಡ ಅವರ ಸಮ್ಮುಖದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ದೇವಾಲಯದ ತಕ್ಕಮುಖ್ಯಸ್ಥರು ಹಾಗೂ ಅಖಿಲ ಕೊಡವ ಸಮಾಜದ ಅಧ್ಯಕ್ಷ ಪರದಂಡ ಸುಮನ್ ಸುಬ್ರಮಣಿ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ತೀತಿರ ಧರ್ಮಜ ಉತ್ತಪ್ಪ ಸೇರಿದಂತೆ ಭಕ್ತಾಧಿಗಳು ಉಪಸ್ಥಿತರಿದ್ದರು.
ಮೊದಲು ಕೊಡಗಿನ ರೈತರಿಗೆ ನ್ಯಾಯ ಒದಗಿಸಿ: ರಂಜಿ ಪೂಣಚ್ಚ ಕೊಡಗಿಗೆ ಏನೂ ನೀಡದೆ ಮೋಡ ಬಿತ್ತನೆ ಏಕೆ? ವಿರಾಜಪೇಟೆ: ಕಾವೇರಿ ನದಿಯ ಉಗಮಸ್ಥಾನವಾದ ಕೊಡಗಿನಿಂದ ಅಪಾರ ಪ್ರಮಾಣದ ನೀರು ರಾಜ್ಯದ ವಿವಿಧ ಭಾಗಗಳಿಗೆ ಹರಿದುಹೋಗುತ್ತಿದ್ದರೂ, ಕೊಡಗಿನ ರೈತರಿಗೆ ಸಮರ್ಪಕ ಪರಿಹಾರ ಹಾಗೂ ಮೂಲಸೌಕರ್ಯ ದೊರೆಯುತ್ತಿಲ್ಲ. ಇಂತಹ ಸಂದರ್ಭದಲ್ಲಿ ಜಿಲ್ಲೆಯಲ್ಲಿ ಮೋಡ ಬಿತ್ತನೆ ನಡೆಸುವ ಚಿಂತನೆ ಎಷ್ಟು ಸಮಂಜಸ ಎಂದು ಕೊಡಗು ಜಿಲ್ಲಾ ಬಿಜೆಪಿ ರೈತ ಮೋರ್ಚಾ ಅಧ್ಯಕ್ಷ ಅಮ್ಮುಣಿಚಂಡ ರಂಜಿ ಪೂಣಚ್ಚ ಪ್ರಶ್ನಿಸಿದ್ದಾರೆ. ಕಾಫಿ ಸೇರಿದಂತೆ ಕೃಷಿ ಬೆಳೆಗಳಿಗೆ ಹವಾಮಾನ ವೈಪರೀತ್ಯದಿಂದ ನಷ್ಟವಾಗುತ್ತಿದ್ದು, ಕಾಡಾನೆ, ಹುಲಿ ಸೇರಿದಂತೆ ವನ್ಯಜೀವಿ ಹಾವಳಿಯೂ ಹೆಚ್ಚಾಗಿದೆ. ರಸ್ತೆ, ಕುಡಿಯುವ ನೀರು ಸೇರಿದಂತೆ ಹಲವು ಮೂಲಭೂತ ಸಮಸ್ಯೆಗಳು ಮುಂದುವರಿದಿವೆ ಎಂದು ಅವರು ತಿಳಿಸಿದ್ದಾರೆ. “ಕೊಡಗಿನಿಂದ ಕಾವೇರಿ ನೀರು ಬೇಕು, ಆದರೆ ಕೊಡಗಿನ ರೈತರ ಸಮಸ್ಯೆಗಳು ಏಕೆ ಕಾಣುವುದಿಲ್ಲ? ಮೋಡ ಬಿತ್ತನೆಗೆ ಖರ್ಚು ಮಾಡುವ ಹಣವನ್ನು ಮೊದಲು ರೈತರ ಪರಿಹಾರ, ಜಲಮೂಲಗಳ ಸಂರಕ್ಷಣೆ, ರಸ್ತೆ ಅಭಿವೃದ್ಧಿ ಹಾಗೂ ಮಾನವ–ವನ್ಯಜೀವಿ…
ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗ ಬಲಿ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಘಟನೆ ಪೊನ್ನಂಪೇಟೆ ತಾಲೂಕಿನ ತೆರಾಲು ಗ್ರಾಮದಲ್ಲಿ ಕಾಡಾನೆ ದಾಳಿಗೆ ಬೆಂಗಳೂರಿನ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಸಂಜೆ ನಡೆದಿದೆ. ಸ್ಥಳೀಯ ಹೋಂಸ್ಟೇಗೆ ಆಗಮಿಸಿದ್ದ ಬೆಂಗಳೂರಿನ ಸುಮಾರು 40 ವರ್ಷದ ಮುರಳಿ ಕೃಷ್ಣ ಅವರು ವಿಹಾರಕ್ಕೆ ತೆರಳಿದ್ದ ಸಂದರ್ಭ ಕಾಡಾನೆ ದಾಳಿ ನಡೆಸಿದೆ ಎನ್ನಲಾಗಿದೆ. ದಾಳಿಯಿಂದ ಗಂಭೀರವಾಗಿ ಗಾಯಗೊಂಡ ಮುರಳಿ ಕೃಷ್ಣ ಮೃತಪಟ್ಟಿದ್ದಾರೆ. ಘಟನೆಯಿಂದ ತೆರಾಲು ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಗೌಡ ಸಮಾಜಗಳ ಪ್ರಮುಖರಿಂದ ಶಾಸಕ ಪೊನ್ನಣ್ಣರಿಗೆ ಅಭಿನಂದನೆ ಮಡಿಕೇರಿ: ಕೊಡಗು ಗೌಡ ಸಮಾಜಗಳ ಒಕ್ಕೂಟ ಹಾಗೂ ಬೆಂಗಳೂರು ಗೌಡ ಸಮಾಜದ ವತಿಯಿಂದ ಸಮಾಜದ ಪ್ರಮುಖರು ವಿಧಾನಸೌಧದಲ್ಲಿ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕ ಹಾಗೂ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರನ್ನು ಭೇಟಿಯಾಗಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಮಾಜದ ಪ್ರಮುಖರು, ಶಾಸಕರಾಗಿ ಆಯ್ಕೆಯಾದ ಬಳಿಕ ಸಮಾಜದ ಎಲ್ಲಾ ವರ್ಗದವರ ಏಳಿಗೆಗಾಗಿ ಪೊನ್ನಣ್ಣ ಅವರು ಶ್ರಮಿಸುತ್ತಿದ್ದಾರೆ. ಇದೀಗ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಮಹತ್ವದ ಜವಾಬ್ದಾರಿ ದೊರೆತಿರುವುದು ಸಮಾಜದ ಜನರಿಗೆ ಹೆಮ್ಮೆ ತಂದಿದೆ ಎಂದು ಹೇಳಿದರು. ಎಲ್ಲಾ ವರ್ಗದವರನ್ನು ಸಮಾನವಾಗಿ ಕಾಣುವ ಮೂಲಕ ಜನಪರವಾಗಿ ಕಾರ್ಯನಿರ್ವಹಿಸುತ್ತಿರುವ ಪೊನ್ನಣ್ಣ ಅವರ ಸೇವಾ ವ್ಯಾಪ್ತಿ ಇನ್ನಷ್ಟು ವಿಸ್ತರಿಸಲಿ. ಹೊಸ ಜವಾಬ್ದಾರಿಯೊಂದಿಗೆ ಮತ್ತಷ್ಟು ಯಶಸ್ಸು ಸಾಧಿಸಿ ಉನ್ನತ ಸ್ಥಾನಕ್ಕೇರಲಿ ಎಂದು ಸಮಾಜದ ಪ್ರಮುಖರು ಶುಭ ಹಾರೈಸಿದರು. ಈ ಸಂದರ್ಭದಲ್ಲಿ ಕೊಡಗು ಗೌಡ ಸಮಾಜಗಳ ಒಕ್ಕೂಟದ ಅಧ್ಯಕ್ಷ ಆನಂದ ಕರಂದ್ಲಾಜೆ, ಉಪಾಧ್ಯಕ್ಷ ಡಾ. ರಾಜೇಶ್ ತೇನನ, ನಂಗಾರು…
ಲಾರಿ ಡಿಕ್ಕಿ: ಟ್ಯಾಕ್ಸಿ ಚಾಲಕ ಸಾಹಿಲ್ ಸಾವು ಮಡಿಕೇರಿ: ನಗರದ ತಿಮ್ಮಯ್ಯ ಸರ್ಕಲ್ ಬಳಿ ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ಪರಿಣಾಮ ಟ್ಯಾಕ್ಸಿ ಚಾಲಕ ಸಾವನ್ನಪ್ಪಿರುವ ಘಟನೆ ಶನಿವಾರ ಬೆಳಗಿನ ಜಾವ ನಡೆದಿದೆ. ಮಂಗಳೂರಿನಿಂದ ಮಡಿಕೇರಿ ಕಡೆಗೆ ಬರುತ್ತಿದ್ದ ಗ್ಯಾಸ್ ಟ್ಯಾಂಕರ್, ತಿಮ್ಮಯ್ಯ ಸರ್ಕಲ್ ಬಳಿಯ ನೂತನ ಪ್ರಯಾಣಿಕರ ತಂಗುದಾಣದ ಎದುರು ರಸ್ತೆಯಲ್ಲಿ ನಿಂತಿದ್ದ ಟ್ಯಾಕ್ಸಿ ಚಾಲಕ ಸಾಹಿಲ್ (24) ಅವರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಡಿಕ್ಕಿಯ ರಭಸಕ್ಕೆ ಗಂಭೀರವಾಗಿ ಗಾಯಗೊಂಡ ಸಾಹಿಲ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ. ಮೃತ ಸಾಹಿಲ್ ಮಡಿಕೇರಿಯ ಗಣಪತಿ ಬೀದಿ ನಿವಾಸಿಯಾಗಿದ್ದಾರೆ. ಬೆಳಗಿನ ಜಾವ ಮಂಜು ಕವಿದಿದ್ದ ಹಿನ್ನೆಲೆ ರಸ್ತೆ ಸ್ಪಷ್ಟವಾಗಿ ಕಾಣಿಸದಿರುವುದು ಅಪಘಾತಕ್ಕೆ ಕಾರಣವಾಗಿರಬಹುದು ಎಂದು ಶಂಕಿಸಲಾಗಿದೆ.
ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ಘೋಷಣೆ ಮಡಿಕೇರಿ: ಮಡಿಕೇರಿ ದಸರಾ ಉತ್ಸವಕ್ಕೆ ರಾಜ್ಯ ಸರ್ಕಾರದಿಂದ ₹2 ಕೋಟಿ ಅನುದಾನವನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಘೋಷಿಸಿದ್ದಾರೆ. ಮಡಿಕೇರಿ ಕ್ಷೇತ್ರದ ಶಾಸಕ ಡಾ. ಮಂಥರ್ ಗೌಡ ಅವರ ನೇತೃತ್ವದಲ್ಲಿ ನಗರ ದಸರಾ ಸಮಿತಿಯ ನಿಯೋಗ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ, ಮಡಿಕೇರಿ ದಸರಾ ಉತ್ಸವದ ಸಿದ್ಧತೆ ಹಾಗೂ ಉತ್ಸವದ ಯಶಸ್ವಿ ಆಯೋಜನೆಗಾಗಿ ಸರ್ಕಾರದಿಂದ ಅನುದಾನ ನೀಡುವಂತೆ ಮನವಿ ಮಾಡಿತು. ನಿಯೋಗದ ಮನವಿಗೆ ತಕ್ಷಣ ಸ್ಪಂದಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಡಿಕೇರಿ ದಸರಾಕ್ಕೆ ₹2 ಕೋಟಿ ಅನುದಾನ ನೀಡುವುದಾಗಿ ಘೋಷಿಸಿದರು. ಈ ಸಂದರ್ಭದಲ್ಲಿ ನಗರ ದಸರಾ ಸಮಿತಿ ಉಪಾಧ್ಯಕ್ಷ ಮಹೇಶ್ ಜೈನಿ, ದಸರಾ ಕಾರ್ಯಾಧ್ಯಕ್ಷ ಬಿ.ಕೆ. ಅರುಣ್ ಕುಮಾರ್, ಪ್ರಧಾನ ಕಾರ್ಯದರ್ಶಿ ಅರುಣ್ ಶೆಟ್ಟಿ, ಖಜಾಂಚಿ ಸಬೀತ, ಕಾರ್ಯದರ್ಶಿ ಮುದ್ದುರಾಜ್, ದಸರಾ ವೇದಿಕೆ ಸಮಿತಿ ಅಧ್ಯಕ್ಷ ಚಂದ್ರಶೇಖರ್ ಆರ್.ಪಿ., ಅಲಂಕಾರ ಸಮಿತಿ ಅಧ್ಯಕ್ಷ ಮುನೀರ್ ಮಾಚಾರ್, ಯುವ…
ರಾಜ್ಯಪಾಲರನ್ನು ಭೇಟಿ ಮಾಡಿದ ಶಾಸಕ ಪೊನ್ನಣ್ಣ; KPSC ಆರೋಪಗಳ ಕುರಿತು ವಿಸ್ತೃತ ಚರ್ಚೆ ಬೆಂಗಳೂರು: ಕರ್ನಾಟಕ ರಾಜ್ಯದ ಘನವೆತ್ತ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್. ಪೊನ್ನಣ್ಣ ಅವರು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ಸಂದರ್ಭದಲ್ಲಿ ರಾಜ್ಯದ ಪ್ರಸ್ತುತ ರಾಜಕೀಯ, ಆಡಳಿತಾತ್ಮಕ ಹಾಗೂ ಸಾರ್ವಜನಿಕ ಮಹತ್ವದ ವಿಚಾರಗಳ ಕುರಿತು ರಾಜ್ಯಪಾಲರೊಂದಿಗೆ ಚರ್ಚೆ ನಡೆಸಿದರು. ವಿಶೇಷವಾಗಿ ಕರ್ನಾಟಕ ಲೋಕಸೇವಾ ಆಯೋಗ (KPSC) ಎದುರಿಸುತ್ತಿರುವ ವಿವಿಧ ಆರೋಪಗಳು ಹಾಗೂ ಈ ವಿಚಾರಕ್ಕೆ ಸಂಬಂಧಿಸಿದಂತೆ ಸಾರ್ವಜನಿಕ ವಲಯದಲ್ಲಿ ವ್ಯಕ್ತವಾಗುತ್ತಿರುವ ಚರ್ಚೆಗಳ ಕುರಿತು ವಿಸ್ತೃತವಾಗಿ ಮಾತುಕತೆ ನಡೆಯಿತು. KPSC ಮೂಲಕ ನಡೆಯುವ ನೇಮಕಾತಿ ಪ್ರಕ್ರಿಯೆಗಳು ಪಾರದರ್ಶಕವಾಗಿ ಹಾಗೂ ಅರ್ಹ ಅಭ್ಯರ್ಥಿಗಳಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ನಡೆಯಬೇಕಾದ ಅಗತ್ಯದ ಬಗ್ಗೆಯೂ ಚರ್ಚೆ ನಡೆಸಲಾಯಿತು. ಆಯೋಗದ ಕಾರ್ಯವೈಖರಿ ಮತ್ತು ಅದರ ವಿರುದ್ಧ ಕೇಳಿಬರುತ್ತಿರುವ ಆರೋಪಗಳ ಕುರಿತು ಸೂಕ್ತ ಗಮನಹರಿಸುವ ಅಗತ್ಯವಿದೆ ಎಂಬ ವಿಚಾರವನ್ನು…
