- ವಿದ್ಯಾರ್ಥಿಗಳಿಗೆ ಕಾನೂನು ಅರಿವು ಕಾರ್ಯಕ್ರಮ
- ಕೊಡಗಿನಲ್ಲಿ ಆನೆ–ಮಾನವ ಸಂಘರ್ಷಕ್ಕೆ ಪರಿಹಾರ: ಸಚಿವರ ಸಭೆಯಲ್ಲಿ ಗದ್ದಲ!
- ಕೊಡಗು ಕಾಂಗ್ರೆಸ್ ಅಧ್ಯಕ್ಷ ಗಾದಿಗೆ ತ್ರಿಕೋನ ಸ್ಪರ್ಧೆ: ದೆಹಲಿ ತಲುಪಿದ ಮೂವರ ಹೆಸರು?
- ಕರವೇ ಸ್ವಾಭಿಮಾನಿ ಸೇನೆಗೆ ಕೊಡಗು ಜಿಲ್ಲೆಯಲ್ಲಿ ಭರ್ಜರಿ ಸೇರ್ಪಡೆ: ನಾಡು-ನುಡಿಯ ರಕ್ಷಣೆಗೆ ಹಲವರು ಕಟಿಬದ್ಧ
- ಕೂಡಮಂಗಳೂರು ಕೈಗಾರಿಕಾ ಪ್ರದೇಶದ ಅಭಿವೃದ್ಧಿಗೆ ಅನುದಾನಕ್ಕೆ ಶಾಸಕ ಮಂತರ್ ಗೌಡ ಮನವಿ
- ಎ.ಕೆ. ಸುಬ್ಬಯ್ಯ ಪುಣ್ಯಸ್ಮರಣೆ: ತಂದೆಯನ್ನು ಸ್ಮರಿಸಿ ಭಾವುಕರಾದ ಶಾಸಕ ಪೊನ್ನಣ್ಣ
- ರೈತರ ಕೃಷಿಗೆ ಹಾರಂಗಿ ಜಲಾಶಯದ ನೀರು: ಬೆಂಗಳೂರಿನಲ್ಲಿ ಮಹತ್ವದ ಚರ್ಚೆ: ಶಾಸಕ ಮಂತರ್ ಭಾಗಿ
- ಕಸ್ತೂರಿರಂಗನ್ ವರದಿ ಬಗ್ಗೆ ಕೊಡಗಿನ ಜನತೆ ಆತಂಕಪಡಬೇಕಿಲ್ಲ: ಸಂಸದ ಯದುವೀರ್
Author: Kodagu-admin
ಮರಗೋಡು ಗ್ರಾಮದಲ್ಲಿ ಅರೆಭಾಷೆ ಗ್ರಾಮೋತ್ಸವ ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸಿ: ಡಾ.ಮಂತರ್ ಗೌಡ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಕಾರ್ಯಕ್ರಮಗಳು ಗ್ರಾಮ ಮಟ್ಟಕ್ಕೂ ತಲುಪುತ್ತಿದ್ದು, ಅರೆಭಾಷೆ ಕಲಿಕೆ ಮತ್ತು ಅಭಿವೃದ್ಧಿಗೆ ಮತ್ತಷ್ಟು ಶ್ರಮಿಸುವಂತಾಗಬೇಕು ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ.ಮಂತರ್ ಗೌಡ ಅವರು ಹೇಳಿದ್ದಾರೆ. ಕರ್ನಾಟಕ ಅರೆಭಾಷೆ ಸಂಸ್ಕøತಿ ಮತ್ತು ಸಾಹಿತ್ಯ ಅಕಾಡೆಮಿ ಮತ್ತು ಮರಗೋಡು ಗೌಡ ಸಮಾಜ ಇವರ ಸಂಯುಕ್ತಾಶ್ರಯದಲ್ಲಿ ಮರಗೋಡು ಗೌಡ ಸಮಾಜದ ಆವರಣದಲ್ಲಿ ಅರೆಭಾಷೆ ಗ್ರಾಮೋತ್ಸವ ಕಾರ್ಯಕ್ರಮದ ಮೆರವಣಿಗೆಗೆ ಚಾಲನೆ ನೀಡಿ ಅವರು ಮಾತನಾಡಿದರು. ಕನ್ನಡದ ಉಪ ಭಾಷೆಯಾದ ಅರೆಭಾಷೆಯನ್ನು ಉಳಿಸಿ ಬೆಳೆಸಿದಲ್ಲಿ ಕನ್ನಡ ಭಾಷೆಯನ್ನೂ ಸಹ ಮತ್ತಷ್ಟು ಔನ್ನತ್ಯಕ್ಕೆ ಕೊಂಡೊಯ್ಯಲು ಸಾಧ್ಯ. ಆ ನಿಟ್ಟಿನಲ್ಲಿ ಅರೆಭಾಷೆಯನ್ನು ಮಕ್ಕಳು ಮತ್ತು ಯುವಜನರಿಗೆ ಕಲಿಸುವಂತಾಗಬೇಕು ಎಂದು ಅವರು ನುಡಿದರು. ಅರೆಭಾಷೆಯು ಒಂದು ವಿಶಿಷ್ಟ ಭಾಷೆಯಾಗಿದ್ದು, ಕನ್ನಡ ಭಾಷೆಗೆ ಹತ್ತಿರವಾಗಿದೆ. ಆ ದಿಸೆಯಲ್ಲಿ ಅರೆಭಾಷೆ ಸಂಸ್ಕøತಿ, ಸಾಹಿತ್ಯ, ಪರಂಪರೆ, ಆಚಾರ-ವಿಚಾರಗಳನ್ನು ಉಳಿಸಿಕೊಂಡು ಹೋಗಬೇಕು ಎಂದು…
ಮೈಸೂರಿನಲ್ಲಿ ಸಿಡಿಲು ಬಡಿದು ಮಡಿಕೇರಿಯ ಹೊಸೊಕ್ಲು ರೋಷನ್ ಬಾಲಕೃಷ್ಣ (43) ನಿಧನ . ಮುನೇಶ್ವರ ದೇವಾಲಯ ಬಳಿಯ ನಿವಾಸಿ. ಎಕ್ಸೈಸ್ ಇಲಾಖೆಯಲ್ಲಿದ್ದ ದಿ. ಬಾಲಕೃಷ್ಣ ಅವರ ಮಗ. ಐ. ಟಿ. ಉದ್ಯೋಗಿಯಾಗಿ ವರ್ಕ್ ಫ್ರಮ್ ಹೋಮ್ ಮಾಡುತಿದ್ದರು. ಇಂದು ಮೈಸೂರಿನಲ್ಲಿ ಇದ್ದ ಜಮೀನು ವೀಕ್ಷಣೆಗೆ ತೆರಳಿದ್ದರು ಜಮೀನಲ್ಲಿ ನಿಂತಿದ್ದ ಸಂದರ್ಭ ಸಿಡಿಲು ಬಡಿದು ಸ್ಥಳದಲ್ಲೇ ರೋಷನ್ ಕೊನೆ ಉಸಿರು ಎಳೆದರು
ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಸಮಿತಿ ಸಭೆ ಗ್ಯಾರಂಟಿ ಯೋಜನೆ ಪರಿಣಾಮಕಾರಿ ಅನುಷ್ಠಾನಕ್ಕೆ ಧರ್ಮಜ ಉತ್ತಪ್ಪ ಸಲಹೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವ ಸರ್ಕಾರಕ್ಕೆ ಮೂರು ವರ್ಷ ಪೂರ್ಣಗೊಂಡಿದ್ದು, ಪಂಚ ಗ್ಯಾರಂಟಿ ಯೋಜನೆಗಳು ಸೇರಿದಂತೆ ಭೂ ಗ್ಯಾರಂಟಿ ಯೋಜನೆಯನ್ನು ಸಹ ಜಾರಿಗೊಳಿಸಿದ್ದು, ಸರ್ಕಾರದ ಗ್ಯಾರಂಟಿ ಯೋಜನೆ ತಲುಪಿಸುವಲ್ಲಿ ಇನ್ನಷ್ಟು ಪ್ರಯತ್ನ ಮಾಡಬೇಕು ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾಧ್ಯಕ್ಷರಾದ ತೀತಿರ ಧರ್ಮಜ ಉತ್ತಪ್ಪ ಅವರು ಸೂಚಿಸಿದ್ದಾರೆ. ನಗರದ ಜಿ.ಪಂ.ಕೆಡಿಪಿ ಸಭಾಂಗಣದಲ್ಲಿ ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಅನುಷ್ಠಾನ ಹಾಗೂ ಮೇಲ್ವಿಚಾರಣೆ ಸಂಬಂಧ ನಡೆದ ಗ್ಯಾರಂಟಿ ಯೋಜನಾ ಅನುಷ್ಠಾನ ಪ್ರಾಧಿಕಾರ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಸರ್ಕಾರ ಶಕ್ತಿ, ಗೃಹಲಕ್ಷ್ಮಿ, ಗೃಹಜ್ಯೋತಿ, ಅನ್ನಭಾಗ್ಯ, ಯುವನಿದಿ ಹಾಗೆಯೇ ಭೂ ಒಡೆತನ ಸೇರಿದಂತೆ ಹಲವು ಜನಪರ ಕಾರ್ಯಕ್ರಮಗಳನ್ನು ಜಾರಿಗೊಳಿಸಿ ಪ್ರಗತಿಯತ್ತ ಸಾಗುತ್ತಿದೆ. ಜೊತೆಗೆ ಬಡ ಜನರಲ್ಲಿ ವಿಶ್ವಾಸ ಮೂಡಿಸುವ ಕೆಲಸ ಮಾಡುತ್ತಿದ್ದು, ಆ ನಿಟ್ಟಿನಲ್ಲಿ ಸರ್ಕಾರದ ಕಾರ್ಯಕ್ರಮಗಳು ತಲುಪುವಂತಾಗಲು ಅಧಿಕಾರಿಗಳ ಕರ್ತವ್ಯ ಮಹತ್ತರ ಎಂದು ಧರ್ಮಜ…
ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಚಾಲನೆ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತೋಟಗಾರಿಕೆ ಇಲಾಖೆ ಸಹಕಾರದಲ್ಲಿ ಜಿಲ್ಲಾ ಹಾಪ್ಕಾಮ್ಸ್ ವತಿಯಿಂದ ನಗರದ ಹಾಪ್ ಕಾಮ್ಸ್ ಆವರಣದಲ್ಲಿ ಮೂರು ದಿನಗಳ ಕಾಲ ನಡೆಯುವ 6 ನೇ ವರ್ಷದ ಮಾವು ಮತ್ತು ಹಲಸು ಮೇಳಕ್ಕೆ ಶಾಸಕರಾದ ಡಾ.ಮಂತರ್ ಗೌಡ ಅವರು ಮಾವು ಸವಿಯುವ ಮೂಲಕ ಶುಕ್ರವಾರ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷರಾದ ಪಿ.ಕಲಾವತಿ, ಮಡಿಕೇರಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ರಾಜೇಶ್ ಯಲ್ಲಪ್ಪ, ಮಡಿಕೇರಿ ಹಾಪ್ ಕಾಮ್ಸ್ ಅಧ್ಯಕ್ಷರಾದ ಬಿದ್ದಾಟಂಡ ರಮೇಶ್ ಚಂಗಪ್ಪ, ಉಪಾಧ್ಯಕ್ಷರಾದ ಮಲ್ಲಂಡ ಮಧು ದೇವಯ್ಯ, ನಿರ್ದೇಶಕರಾದ ನಾಗೇಶ್ ಕುಂದಲ್ಪಾಡಿ, ಎಸ್.ಪಿ.ಪೊನ್ನಪ್ಪ, ಬೇಬಿ ಪೂವಯ್ಯ, ಚಟ್ರಂಡ ಲೀಲಾ ಮೇದಪ್ಪ, ಕೆ.ಎಂ.ಮನೋಹರ್, ಸುವಿನ್ ಗಣಪತಿ, ಮನು ಮಹೇಶ್, ಪೂವಪ್ಪ ನಾಯ್ಕ, ಉಮೇಶ್ ರಾಜಾ ಅರಸ್, ಸುದೀರ್, ಕಾಂಗೀರ ಸತೀಶ್, ಬಿ.ಎ.ಹರೀಶ್, ನಗರಸಭಾ ಸದಸ್ಯರಾದ ಸತೀಶ್, ತೋಟಗಾರಿಕೆ ಇಲಾಖೆ ಉಪ ನಿರ್ದೇಶಕರಾದ ಎಚ್.ಶಶಿಧರ, ಹಾಪ್ ಕಾಮ್ಸ್ ವ್ಯವಸ್ಥಾಪಕ ನಿರ್ದೇಶಕರಾದ ಮುತ್ತಪ್ಪ,…
ಕೊಡಗು ಜಿಲ್ಲೆಯ ಜಿಲ್ಲಾ ಆಸ್ಪತ್ರೆಯಲ್ಲಿ ಪ್ರಥಮ ಬಾರಿಗೆ ಅಂಗಾಂಗ ದಾನ ಪ್ರಕ್ರಿಯೆ. ಡಾಲು ಅವರ ಅಂಗಾಂಗ ದಾನದಿಂದ ಹಲವು ರೋಗಿಗಳಿಗೆ ಅನುಕೂಲ. ಡಾಲು ಕುಟುಂಬದ ಮಾನವೀಯ ಕಾರ್ಯಕ್ಕೆ ವೈದ್ಯರ ಶ್ಲಾಘನೆ. ಕೊಡಗು ಜಿಲ್ಲೆಯ ಪೊನ್ನಂಪೇಟೆ ತಾಲೂಕಿನ ಅರವತೋಕ್ಲು ಗ್ರಾಮದ 46 ವರ್ಷದ PG ಡಾಲು ಅವರ ಮೆದುಳು ನಿಷ್ಕ್ರಿಯಗೊಂಡ ಹಿನ್ನೆಲೆಯಲ್ಲಿ ಅವರ ಕುಟುಂಬದವರು ನಿರ್ಧಾರವನ್ನು ತೆಗೆದುಕೊಂಡು ಅಂಗಾಂಗ ದಾನಕ್ಕೆ ಸಹಕರಿಸಿದರು. ಇದರಿಂದ ಅನೇಕ ರೋಗಿಗಳಿಗೆ ಜೀವದಾನ ದೊರಕಲಿದೆ, ದಾನಿಯಾದ ವ್ಯಕ್ತಿಯ ಮೂತ್ರಪಿಂಡ ಕಣ್ಣುಗಳು ಹೃದಯ ಕವಾಟಗಳು ಸೇರಿದಂತೆ ವೈದ್ಯಕೀಯ ನಿಯಮಾನುಸಾರ ಮೈಸೂರಿನ ವೈದ್ಯಕೀಯ ತಂಡವು ಅಂಗಾಂಗಗಳನ್ನು ಮರುಪಡೆದುಕೊಂಡರು. ಈ ಅಂಗಗಳನ್ನು ಮೈಸೂರಿನ ಜೆಎಸ್ಎಸ್ ಮತ್ತು ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಕೊಂಡೊಯ್ದು ಅಗತ್ಯವಿರುವ ರೋಗಿಗಳಿಗೆ ಪ್ರತಿರೂಪಣೆ ಮಾಡಲಾಗುವುದು ಎಂದು ಕೊಡಗು ಮೆಡಿಕಲ್ ಕಾಲೇಜು ಡೀನ್ ಡಾ ಲೋಕೇಶ್. ಸರ್ಜನ್ ಡಾ. ಸೋಮಶೇಖರ್ ಮತ್ತು ಡಾ. ನಂಜುಂಡಸ್ವಾಮಿ ಮಾಹಿತಿ ನೀಡಿದ್ದಾರೆ. ಆರೋಗ್ಯ ಇಲಾಖೆ ಮತ್ತು ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಬೋಧಕ…
ಜನಪ್ರತಿನಿಧಿಗಳ ವಿರುದ್ಧ ಸುಳ್ಳು ಆರೋಪ: ಪ್ರಸನ್ನ ಭಟ್ ವಿರುದ್ಧ ದೂರು ಕೊಡಗು ಅಭಿವೃದ್ಧಿ ಸಮಿತಿಯ ಗ್ರೂಪ್ ವೊಂದನ್ನು ರಚಿಸಿ ಕೊಂಡು ಮಡಿಕೇರಿ ನಗರ ಸಭಾ ಸದಸ್ಯರ ಬಗ್ಗೆ ಸಾರ್ವಜನಿಕ ವಲಯ ದಲ್ಲಿ ಅವಹೇಳನ ಕಾರಿ ಸುಳ್ಳು ವರದಿ ಗಳನ್ನು ಸತ್ಯ ಎಂಬಂತೆ ಬಿಂಬಿಸಿ ವಾಟ್ಸಪ್ ಗ್ರೂಪ್ ಗಳಲ್ಲಿ ಹರಡಿಸಿ ಜನತೆ ಯಲ್ಲಿ ತಪ್ಪು ಸಂದೇಶ ವನ್ನು ಹರಡುತ್ರಿರುವ ಮತ್ತು ನಗರ ಸಭಾ ಸದಸ್ಯರು ಗಳ ಅಧ್ಯಯನ ಪ್ರವಾಸ ವನ್ನು ಮೋಜು ಮಸ್ತಿ ಯ ಪ್ರವಾಸ. ಎಂಬಂತೆ ಬಿಂಬಿಸಿ ಸಾರ್ವಜನಿಕ ವಾಗಿ ಜನ ಪ್ರತಿ ನಿಧಿ ಗಳನ್ನು ನಿಂದಿಸಿರುವ ಕೊಡಗು ಅಭಿವೃದ್ಧಿ ಗ್ರೂಪ್ ನ ಅಡ್ಮಿನ್ ಪ್ರಸನ್ನ ಭಟ್ ವಿರುದ್ಧ ಮಡಿಕೇರಿ ನಗರ ಸಭೆಯ ಸರ್ವ ಪಕ್ಷ ಗಳ ಸದಸ್ಯರು ಎಸ್ ಪಿ ಯವರನ್ನು ಭೇಟಿಯಾಗಿ ದೂರು ಸಲ್ಲಿಸಿದರು . ದೂರಿ ನಲ್ಲಿ ಸ್ವಂತ ಜೀಪ್ ಗೆ ಅಭಿವೃದ್ಧಿ ಸಮಿತಿಯ ಬೋರ್ಡ್ ನ್ನು ಅಳವಡಿಸಿ ಕೊಂಡಿರುದು ಕರ್ತವ್ಯ ನಿರತ ಪೊಲೀಸ್ ಸಿಬ್ಬಂದಿ ಗಳ…
ಆನ್ ಲೈನ್ ಔಷಧಿ ವಹಿವಾಟು ವಿರೋಧಿಸಿ ಕೊಡಗಿನಾದ್ಯಂತ ಔಷಧಿ ಅಂಗಡಿಗಳ ಬಂದ್ ಯಶಸ್ವಿ – ಪ್ರದಾನಿಗಳಿಗೆ ಜಿಲ್ಲಾಡಳಿತದ ಮೂಲಕ ಮನವಿ ಸಲ್ಲಿಕೆ – ಗ್ರಾಹಕರಿಗೆ ಸಮಸ್ಯೆ ತಂದೊಡ್ಡುವ ಆನ್ ಲೈನ್ ವಹಿವಾಟಿಗೆ ವಿರೋಧ. ಮಡಿಕೇರಿ ಮೇ 20 – ಆನ್ ಲೈನ್ ನಲ್ಲಿ ಔಷಧಿಗಳ ವ್ಯಾಪಾರಕ್ಕೆ ನಿಷೇಧ ಹೇರಬೇಕೆಂದು ಒತ್ತಾಯಿಸಿ ಔಷಧಿ ವ್ಯಾಪಾರಸ್ಥರ ಸಂಘ ಕರೆ ನೀಡಿದ್ದ ಔಷಧಿ ಮಳಿಗೆಗಳ ಬಂದ್ ಕೊಡಗಿನಲ್ಲಿ ಸಂಪೂಣ೯ ಯಶಸ್ವಿಯಾಗಿದೆ. ಕೊಡಗು ಜಿಲ್ಲೆಯಾದ್ಯಂತಲಿನ 200 ಕ್ಕೂ ಅಧಿಕ ಔಷಧಿ ಅಂಗಡಿಗಳು ಬುಧವಾರ ವ್ಯಾಪಾರ ಸ್ಥಗಿತಗೊಳಿಸಿದ್ದವು. ಬಂದ್ ಗೆ ಸಹಕಾರ ನೀಡಿದ ಗ್ರಾಹಕರಿಗೆ ಸಂಘದ ವತಿಯಿಂದ ಧನ್ಯವಾದ ಸಲ್ಲಿಸುವುದಾಗಿ ಸಂಘದ ಜಿಲ್ಲಾಧ್ಯಕ್ಷ ಅಂಬೆಕಲ್ ಜೀವನ್ ಕುಶಾಲಪ್ಪ ತಿಳಿಸಿದ್ದಾರೆ. ಕೊಡಗು ಜಿಲ್ಲಾ ಔಷದಿ ವ್ಯಾಪಾರಸ್ಥರ ಸಂಘದ ವತಿಯಿಂದ ಜಿಲ್ಲಾಡಳಿತ ಧ ಮೂಲಕ ಪ್ರಧಾನ ಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು. ಹೆಚ್ಚುವರಿ ಜಿಲ್ಲಾಧಿಕಾರಿ ಸಹನಾ ಹೆಚ್ ಹಾದಿಮನಿ ಸಂಘದಿಂದ ನೀಡಲಾದ ಮನವಿ ಪತ್ರವನ್ನು ಸ್ವೀಕರಿಸಿದರು. ಔಷಧಿ ವ್ಯಾಪಾರಸ್ಥರ ಸಂಘದ ಧ್ಯಕ್ಷ…
ಕೊಡಗಿನ ಐ ಪಿ ಎಸ್ ಅಧಿಕಾರಿ ಜಿನೇವಾದ ಕೌನ್ಸಲೇಟ್ ಜನರಲ್ ಆಗಿ ಭಾರತ ಸರಕಾರದಿಂದ ಬಡ್ತಿ ನೀಡಿ ನಿಯೋಜನೆ ಶ್ರೀಮಂಗಲ:ಮೂಲತಃ ಕೊಡಗಿನ ಐ ಪಿ ಎಸ್ ಅಧಿಕಾರಿ ಅಣ್ಣಳಮಾಡ ಸುನಿಲ್ ಅಚ್ಚಯ್ಯ ಅವರು ಸಿಟ್ಜರ್ಲೆಂಡ್ ದೇಶದ ಜಿನೇವಾ ಕೌನ್ಸಲೇಟ್ ಜನರಲ್ ಆಗಿ ಬಡ್ತಿ ನೀಡಿ ಭಾರತ ಸರಕಾರ ನಿಯೋಜನೆ ಮಾಡಿದೆ. ದಕ್ಷಿಣ ಕೊಡಗಿನ ಪರಕಟಕೇರಿ ಗ್ರಾಮದವರಾದ ಸುನಿಲ್ ಅಚ್ಚಯ್ಯ ಅವರು ದೆಹಲಿಯಲ್ಲಿ ಕೇಂದ್ರ ಸರಕಾರದ ಗುಪ್ತದಳದಲ್ಲಿ ಎಡಿಜಿಪಿ ಯಾಗಿ ಸೇವೆ ಸಲ್ಲಿಸುತ್ತಿದ್ದರು. ಸುನಿಲ್ ಅವರು ಅಚ್ಚಯ್ಯ ಅವರ ಪುತ್ರರಾಗಿದ್ದು ತಾಯಿ ಬೆಲ್ಲ(ತಾಮನೆ ಅಮ್ಮಣಕುಟ್ಟಂಡ),ಪತ್ನಿ ಸಂಧ್ಯಾ(ತಾಮನೆ ಮಂಡೇಪಂಡ),ಇಬ್ಬರು ಮಕ್ಕಳೊಂದಿಗೆ ದೆಹಲಿಯಲ್ಲಿ ನೆಲೆಸಿದ್ದಾರೆ.
ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ: ಶಾಸಕ ಡಾ. ಮಂತರ್ ಗೌಡ ಅಭಿಮತ ಕುಶಾಲನಗರ: ವಿದ್ಯಾರ್ಥಿಗಳು ತರಗತಿಯ ಪಾಠಗಳಿಗೆ ಮಾತ್ರ ಸೀಮಿತವಾಗದೇ ಸಂಗೀತ, ಕಲೆ, ನೃತ್ಯ ಸೇರಿದಂತೆ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸಿ ತಮ್ಮ ಕೌಶಲ್ಯ, ಸಾಮರ್ಥ್ಯವನ್ನು ಪ್ರದರ್ಶಿಸಬೇಕು. ಅದಕ್ಕೆ ಈ ಯುವ ವೈಭವ ಕಾರ್ಯಕ್ರಮ ಅತ್ಯುತ್ತಮ ವೇದಿಕೆ ಕಲ್ಪಿಸಿ ಕೊಟ್ಟಿದೆ. ಸಾಂಸ್ಕೃತಿಕ ಸ್ಪರ್ಧೆಗಳು ವಿದ್ಯಾರ್ಥಿಗಳ ವ್ಯಕ್ತಿತ್ವ ವಿಕಸನಕ್ಕೆ ರಹದಾರಿ. ಇಂತಹ ಪ್ರಯತ್ನಗಳು ಹೀಗೆಯೇ ಮುಂದುವರೆಯಲಿ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾಕ್ಟರ್ ಮಂತರ್ ಗೌಡ ಅಭಿಮತ ವ್ಯಕ್ತಪಡಿಸಿದರು. ಇಲ್ಲಿನ ಚಿಕ್ಕ ಅಳುವಾರದ ಜ್ಞಾನಕಾವೇರಿ ಆವರಣದ ಕೊಡಗು ವಿಶ್ವವಿದ್ಯಾಲಯದ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಅಂತರ್ ಕಾಲೇಜು ಶೈಕ್ಷಣಿಕ ಮತ್ತು ಸಾಂಸ್ಕೃತಿಕ ಉತ್ಸವ “ಯುವ ವೈಭವ” ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಕೊಡಗು ಜಿಲ್ಲೆಯಲ್ಲಿ ವಿಶ್ವವಿದ್ಯಾಲಯ ಇದ್ದರೂ ಎಲ್ಲ ಮಕ್ಕಳು ಉನ್ನತ ಶಿಕ್ಷಣಕ್ಕಾಗಿ ಬೇರೆ ಜಿಲ್ಲೆಯ ವಿಶ್ವವಿದ್ಯಾಲಯಗಳತ್ತ ಮುಖ ಮಾಡುತ್ತಿರುವುದು ಬೇಸರದ ಸಂಗತಿ. ನಮ್ಮ ಜಿಲ್ಲೆಯ ವಿಶ್ವವಿದ್ಯಾಲಯ ಉಳಿಸಿ…
ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಸಚಿವ ಎನ್.ಎಸ್. ಬೋಸರಾಜು – ಕಾಳಗದಲ್ಲಿ ಗಾಯಗೊಂಡು ಮೃತಪಟ್ಟ ‘ಮಾರ್ತಾಂಡ’ ಆನೆಯ ಸಾವಿಗೆ ಸಚಿವರ ಕಂಬನಿ – ಸಂತ್ರಸ್ತ ಕುಟುಂಬಕ್ಕೆ ಅರಣ್ಯ ಇಲಾಖೆ ವತಿಯಿಂದ ತಕ್ಷಣವೇ ₹20 ಲಕ್ಷ ಪರಿಹಾರ ಬೆಂಗಳೂರು, ಮೇ 19: ಕೊಡಗು ಜಿಲ್ಲೆಯ ಪ್ರಸಿದ್ಧ ದುಬಾರೆ ಆನೆ ಶಿಬಿರದಲ್ಲಿ ಸಾಕಾನೆಗಳ ಕಾದಾಟದ ವೇಳೆ ಪ್ರವಾಸಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ಅತ್ಯಂತ ದುರದೃಷ್ಟಕರ. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸದಂತೆ ದುಬಾರೆ ಶಿಬಿರದಲ್ಲಿ ಕಟ್ಟುನಿಟ್ಟಿನ ಮಾರ್ಗಸೂಚಿ ಪಾಲಿಸುವಂತೆ ಕೊಡಗು ಜಿಲ್ಲಾಡಳಿತಕ್ಕೆ ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್ ಎಸ್ ಬೋಸರಾಜು ಸೂಚನೆ ನೀಡಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಸಚಿವರು, ದುರಂತದ ಬಗ್ಗೆ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. “ಈ ಘಟನೆಗೆ ಸಂಬಂಧಿಸಿದಂತೆ ಕೊಡಗು ಜಿಲ್ಲಾಧಿಕಾರಿಗಳು, ಅರಣ್ಯ ಇಲಾಖೆ ಹಾಗೂ ಪೊಲೀಸ್ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಚರ್ಚಿಸಿ, ಪ್ರಾಥಮಿಕ ಮಾಹಿತಿ ಪಡೆದುಕೊಂಡಿದ್ದೇನೆ.…
